ಆಡಳಿತ ಮಂಡಳಿಯಿಂದ ಕೋಟಿ ಹಗರಣ

ಟಿಎಪಿಸಿಎಂಎಸ್‌ನಿಂದ ಆಡಳಿತದಿಂದ ಅಕ್ರಮ | ನಾರಾಯಣಸ್ವಾಮಿಯಿಂದ ದೂರು

Team Udayavani, Mar 19, 2020, 4:15 PM IST

19-March-20

ಬಂಗಾರಪೇಟೆ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಬೂದಿಕೋಟೆ ಮಾರ್ಕಂಡೇಯಗೌಡ ನೇತೃತ್ವದ ಆಡಳಿತ ಮಂಡಳಿ ಒಂದು ಕೋಟಿ ವೆಚ್ಚದ ವಾಣಿಜ್ಯ ಸಂಕೀರ್ಣ ನಿರ್ಮಾಣ ಕಾಮಗಾರಿಯಲ್ಲಿ ಸರ್ಕಾರದ ಮಾರ್ಗಸೂಚಿ ಪಾಲಿಸಿಲ್ಲ. ಟೆಂಡರ್‌ ಕರೆಯದೇ ಅಕ್ರಮವಾಗಿ ಕಟ್ಟಡ ನಿರ್ಮಾಣವನ್ನು ತಕ್ಷಣವೇ ಸಹಕಾರ ಇಲಾಖೆ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಶಾಸಕ ಎಸ್‌.ಎನ್‌
.ನಾರಾಯಣಸ್ವಾಮಿ ದೂರು ನೀಡಿದ್ದಾರೆ.

ಪಟ್ಟಣದ ಸರ್ಕಾರಿ ಅತಿಥಿ ಗೃಹ ಎದುರಿನಲ್ಲಿರುವ ಟಿಎಪಿಸಿಎಂಎಸ್‌ ಜಾಗದಲ್ಲಿ 10 ಅಂಗಡಿಗಳುಳ್ಳ ವಾಣಿಜ್ಯ ಸಂಕೀರ್ಣ ನಿರ್ಮಾಣವಾಗುತ್ತಿದೆ. ಟಿಎಪಿಸಿಎಂಎಸ್‌ ಅಧ್ಯಕ್ಷ ಮಾರ್ಕಂಡೇಯಗೌಡರ ನೇತೃತ್ವದ ಸಮಿತಿ ನಿರ್ವಹಣೆ ಮಾಡುತ್ತಿದ್ದು, ಸರ್ಕಾರದ ಸುತ್ತೋಲೆ ಹಾಗೂ ಟೆಂಡರ್‌ ಪ್ರಕ್ರಿಯೆ ನಡೆಸದೇ ಏಕಾಏಕಿ ಕಾನೂನಿಗೆ ವಿರುದ್ಧ ಉಪ ಸಮಿತಿ ರಚಿಸಿಕೊಂಡು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಟಿಎಪಿಸಿಎಂಎಸ್‌ನ 2 ಕೋಟಿ ಅಧಿಕ ಬೆಲೆ ಬಾಳುವ ಆಸ್ತಿಯನ್ನು ಆಡಳಿತ ಮಂಡಳಿಯೇ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿದೆ. ಕ್ಯಾಸಂಬಳ್ಳಿಯಲ್ಲಿರುವ ಕಟ್ಟಡ 10 ಲಕ್ಷ ರೂ, ಹಾಗೂ ಬೇತಮಂಗಲದಲ್ಲಿರುವ ಆಸ್ತಿಯನ್ನು 1.15 ಕೋಟಿಗೆ ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಹಕಾರ ಇಲಾಖೆ ಮೇಲಾಧಿಕಾರಿಗಳ ಗಮನಕ್ಕೆ ತರದೇ ಟಿಎಪಿಸಿಎಂಎಸ್‌ ಆಸ್ತಿ ಅಕ್ರಮವಾಗಿ ಮಾರಿ, ಆ ಹಣದಿಂದ ಟೆಂಡರ್‌ ಪ್ರಕ್ರಿಯೆಗಳನ್ನು ಪಾಲಿಸದೇ ಸಮಿತಿಯಿಂದಲೇ ಹಣ ಡ್ರಾ ಮಾಡಿ, ಅಕ್ರಮವಾಗಿ ಸಂಕೀರ್ಣ ನಿರ್ಮಾಣ ಮಾಡುತ್ತಿರುವುದಕ್ಕೆ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜತಗೆ ಸಹಕಾರ ಸಚಿವ ಎಸ್‌ .ಟಿ.ಸೋಮಶೇಖರ್‌ ಅವರಿಗೆ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ, ಸಹಕಾರ ಇಲಾಖೆ ಜಂಟಿ ಉಪನಿಬಂಧಕರಿಗೆ ಲಿಖೀತ ದೂರು ನೀಡಿದ್ದಾರೆ.

ಲೋಕೋಪಯೋಗಿ ದರ ದಾಖಲಿಸದೇ ತಮ್ಮ ಇಷ್ಟಾನುಸಾರವಾಗಿ ಅಂದಾಜುಪಟ್ಟಿ ಮಾಡಿಕೊಂಡು ಒಂದು ಕೋಟಿ ಹಗರಣ ಮಾಡಿರುವ ಟಿಎಪಿಸಿಎಂಎಸ್‌ ಅಧ್ಯಕ್ಷರು, ಸಿಇಒ ವಿರುದ್ಧ ಕ್ರಿಮಿನಲ್‌ ದೂರು ದಾಖಲಿಸಿ ಸಮಿತಿಯನ್ನು ಸೂಪರ್‌ಸೀಡ್‌ ಮಾಡಬೇಕು. ಈ ಹಗರಣದ ತನಿಖೆ ಮುಗಿಯುವವರೆಗೂ ಟಿಎಪಿಸಿಎಂಎಸ್‌ನಲ್ಲಿ ಹಣಕಾಸಿನ ವ್ಯವಹಾರ ನಡೆಸದಂತೆ ಕ್ರಮಕೈಗೊಳ್ಳುವಂತೆ ಸಹಕಾರ ಇಲಾಖೆಗೆ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ದೂರು ನೀಡಿದ್ದಾರೆ.

ಟಿಎಪಿಸಿಎಂಎಸ್‌ನ ಆಡಳಿತ ಮಂಡಳಿ, ಸಹಕಾರ ಇಲಾಖೆ, ಸರ್ಕಾರದ ಅನುಮೋದನೆ ಪಡೆಯದೇ ಸಂಕೀರ್ಣ ನಿರ್ಮಾಣದಲ್ಲಿ ಭ್ರಷಾಚಾರ, ಅಕ್ರಮ ನಡೆದಿದೆ. ಕೂಡಲೇ ಸೂಪರ್‌ ಸೀಡ್‌ ಮಾಡಿ, ಕ್ರಮಕೈಗೊಳ್ಳಬೇಕು.
ಎಸ್‌.ಎನ್‌.ನಾರಾಯಣಸ್ವಾಮಿ,
ಶಾಸಕರು

ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಸಹಕಾರ ಇಲಾಖೆ ಉಪ ನಿಬಂಧಕರಿಂದ ಅನುಮೋದನೆ ಪಡೆಯಲಾಗಿದೆ. ದುಂದುವೆಚ್ಚ ಹಾಗೂ ಗುಣಮಟ್ಟದ ಕಾರಣಕ್ಕಾಗಿ ಟೆಂಡರ್‌ ಕರೆದಿಲ್ಲ.
● ಮಾರ್ಕಂಡೇಯಗೌಡ,
ಅಧ್ಯಕ್ಷರು, ಟಿಎಪಿಸಿಎಂಎಸ್‌

ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.