ಬಂಗಾರಪೇಟೆ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ


Team Udayavani, Dec 11, 2022, 4:28 PM IST

tdy-17

ಬಂಗಾರಪೇಟೆ: ಗ್ರಾಪಂ ಕಟ್ಟಡಗಳನ್ನು ನಿರ್ಮಾಣ ಮಾಡಲು ಕೇಂದ್ರ ಸರ್ಕಾರದ ಅನುದಾನಗಳನ್ನು ಉಪಯೋಗಿಸಲಾಗುತ್ತಿದೆ. ಸ್ಥಳೀಯ ಶಾಸಕರ ಅನುದಾನದಲ್ಲಿ ನಯಾಪೈಸೆ ಇಲ್ಲ. 2023ರ ಚುನಾವಣೆಯಲ್ಲಿ ಬಿಜೆಪಿ ಶಾಸಕರನ್ನು ಗೆಲ್ಲಿಸಿ ಅನಂತರ ಗ್ರಾಪಂ ಕಟ್ಟಡ ಉದ್ಘಾಟನೆ ಮಾಡಲಾಗುವುದೆಂದು ಸಂಸದ ಎಸ್‌.ಮುನಿಸ್ವಾಮಿ ಸ್ಥಳೀಯ ಕಾಂಗ್ರೆಸ್‌ ಶಾಸಕ ಎಸ್‌.ಎನ್‌ .ನಾರಾಯಣಸ್ವಾಮಿಗೆ ಟಾಂಗ್‌ ನೀಡಿದರು.

ತಾಲೂಕಿನ ಹುಲಿಬೆಲೆ ಗ್ರಾಮದಲ್ಲಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಪಂನ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಪಂ ಕಟ್ಟಡವು ಕೇಂದ್ರ-ರಾಜ್ಯ ಸರ್ಕಾರದ ಅನುದಾನದಲ್ಲಿ ನಿರ್ಮಾಣವಾಗುತ್ತಿದೆಯೇ ಹೊರತು ಸ್ಥಳೀಯ ಶಾಸಕರ ಅನುದಾನದಲ್ಲಿ ಅಲ್ಲ, 2023ರ ಚುನಾವಣೆಯ ನಂತರ ಬಿಜೆಪಿ ಶಾಸಕರ ಜತೆ ಈ ಕಟ್ಟಡವನ್ನು ನಾನೇ ಉದ್ಘಾಟಿಸುತ್ತೇನೆ ಎನ್ನುವುದರ ಮೂಲಕ ಪರೋಕ್ಷವಾಗಿ ಕಾಂಗ್ರೆಸ್‌ ಶಾಸಕರಿಗೆ ತಿರುಗೇಟು ನೀಡಿದರು.

47 ಲಕ್ಷರೂಗಳ ಕಾಮಗಾರಿ: ರಾಜಕಾರಣದಲ್ಲಿ ಟೀಕೆ ಸಹಜ. ಚುನಾವಣೆ ಸಮಯದಲ್ಲಿ ಬಿಜೆಪಿ, ಜೆಡಿಎಸ್‌, ಕಾಂಗ್ರೆಸ್‌, ಎಂಬಂತೆ ಆರೋಪ ಪ್ರತ್ಯಾರೋಪಗಳು ಸಹಜ. ಆದರೆ, ಅಭಿವೃದ್ಧಿ ವಿಷಯದಲ್ಲಿ ರಾಜಕಾರಣಕ್ಕೆ ಅವಕಾಶವಿಲ್ಲ, ಪಕ್ಷಾತೀತವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು, 2023ರ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಅಭಿವೃದ್ಧಿ ಕಾರ್ಯ ಮಾಡಲಾಗುವುದು ಎಂದರು. ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಮಾತನಾಡಿ, ಈ ಹಿಂದೆ ದಿ. ಆರ್‌.ವಿ.ಸುರೇಶ್‌ರವರ ಅಧ್ಯಕ್ಷರಾಗಿದ್ದ ಸಮಯದಲ್ಲಿ ಅನೇಕ ಬಾರಿ ನೂತನ ಗ್ರಾಪಂ ಕಟ್ಟಡ ನಿರ್ಮಿಸಿ ಕೊಡುವಂತೆ ಚರ್ಚಿಸಿದ್ದರು. ಇದಕ್ಕೆ ಪೂರಕ ಎಂಬಂತೆ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ 11ಗುಂಟೆ ಸ್ಥಳವನ್ನು ಗೊತ್ತುಪಡಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಸ್ಥಳವನ್ನು ಬದಲಾಯಿಸಲಾಯಿತು ಎಂದರು.

ಹುಲಿಬೆಲೆಗ್ರಾಪಂ ಕಟ್ಟಡ ಶಂಕುಸ್ಥಾಪನೆ ನೆರವೇರಿಸಿ ನಂತರ ಸಂಸದ ಎಸ್‌.ಮುನಿಸ್ವಾಮಿ ಪಟ್ಟಣದ ಹೃದಯ ಭಾಗದಲ್ಲಿರುವ ನಂದಿ ಮೆಡಿಕಲ್ಸ್ ವೃತ್ತದ ಸಮೀಪ ರಸ್ತೆ ಬದಿಯ ಹೋಟೆಲ್‌ ಒಂದರಲ್ಲಿ ಸಾರ್ವಜನಿಕರ ಜೊತೆಯಲ್ಲೇ ಶ್ರೀಸಾಮಾನ್ಯನಂತೆ ಇಡ್ಲಿ, ವಡೆ, ಪೂರಿ ಸೇವಿಸಿ ಸ್ಥಳೀಯರೊಂದಿಗೆ ಸಮಾಲೋಚನ ನಡೆಸಿದರು. ‌

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಿ.ವಿ.ಮಹೇಶ್‌, ತಾಪಂ ಇಒ ಎನ್‌.ವೆಂಕಟೇಶಪ್ಪ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಪಿಚ್ಚಹಳ್ಳಿ ಗೋವಿಂದರಾಜುಲು, ಪುರಸಭೆ ಸದಸ್ಯ ಕಪಾಲಿ ಶಂಕರ್‌, ಹುಲಿಬೆಲೆ ಗ್ರಾಪಂ ಅಧ್ಯಕ್ಷ ಶ್ರೀಧರ್‌. ಉಪಾಧ್ಯಕ್ಷ ಶೋಭಾರಾಣಿ, ಸದಸ್ಯ ಹುಣಸನಹಳ್ಳಿ ಎಚ್‌.ಆರ್‌.ಶ್ರೀನಿವಾಸ್‌, ಬಿ.ನಾರಾಯಣಗೌಡ, ಸುರೇಶ್‌, ಚಿಕ್ಕಹೊಸಹಳ್ಳಿ ಮಂಜುನಾಥ್‌, ನಾಗವೇಣಿ ಮುನಿರಾಜು, ರೇಣುಕಾ ಮುರಳಿಧರ್‌, ನಾಗರಾಜ್, ಮುನಿಯಪ್ಪ, ಶಿಲ್ಪ ವಿನಯ್‌, ಶೈಲಜಾ ವೆಂಕಟೇಶ್‌, ಚಂದ್ರಿಕಾ ಜಯಕುಮಾರ್‌ ಇತರರಿದ್ದರು.

ಅಭ್ಯರ್ಥಿ ಗೆಲ್ಲಿಸಿಕೊಳ್ಳುವ ಭರವಸೆ: 2023 ಚುನಾವಣೆಯು ಹೆಚ್ಚು ಮಹತ್ವವನ್ನು ಪಡೆದುಕೊಂಡಿದ್ದು, ಚುನಾವಣಾ ಪ್ರಚಾರಕ್ಕಾಗಿ ಬಂಗಾರಪೇಟೆಯಲ್ಲೇ ವಾಸ್ತವ್ಯ ಹೂಡಲಿದ್ದು, ಈ ಕ್ಷೇತ್ರವೂ ಸೇರಿದಂತೆ ಜಿಲ್ಲೆ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ ಅದನ್ನು ಶತಾತಗತಾಯ ನೆರವೇರಿಸಲಾಗುವುದು ಎಂದು ಸಂಸದ ಮುನಿಸ್ವಾಮಿ ತಿಳಿಸಿದರು.

ಹುಲಿಬೆಲೆ ಗ್ರಾಪಂ ಸದಸ್ಯರು ಹಾಗೂ ಸಾರ್ವಜನಿಕರು ಈ ಹಿಂದೆ ಬಂಗಾರಪೇಟೆಯಿಂದ ರಸ್ತೆ ನಿರ್ಮಿಸಿ ಕೊಡುವಂತೆ ಮನವಿ ಮಾಡಿದ್ದರು. ಅವರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ವಂದಿಸಿ ಉತ್ತಮ ಡಾಂಬರು ರಸ್ತೆಯನ್ನು ನಿರ್ಮಿಸಿ ಕೊಟ್ಟಿದ್ದೇನೆ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.