ಬ್ಯಾಂಕ್‌ನಿಂದ ವಂಚನೆ: ಥಳಿತ, ಮ್ಯಾನೇಜರ್‌ ಸೆರೆ

ತಿರುಮಲ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್‌ ಬ್ಯಾಂಕ್‌ ಮಾಲೀಕನ ಬಂಧನ

Team Udayavani, Apr 30, 2019, 2:10 PM IST

KOLAR-3-YDY..

ಕೋಲಾರ ನಗರದ ತಿರುಮಲ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ ಮ್ಯಾನೇಜರ್‌ ಶ್ರೀನಿವಾಸ್‌ ಸಾರ್ವಜನಿಕರಿಂದ ಥಳಿತಕ್ಕೊಳಗಾಗಿದ್ದು, ಬಳಿಕ ಅವರನ್ನು ಪೊಲೀಸರಿಗೆ ಒಪ್ಪಿಸಲಾಯಿತು.

ಕೋಲಾರ: ನಗರದ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯಿಂದ ಒಂದೂವರೆ ಕೋಟಿ ರೂ.ಗಳ ವಂಚನೆ ನಡೆದಿದ್ದು, ಮೋಸಕ್ಕೊಳಗಾದವರು ಮಾಲೀಕನಿಗೆ ಥಳಿಸಿ ಪೊಲೀಸರಿಗೊಪ್ಪಿಸಿರುವ ಘಟನೆ ಜರುಗಿದೆ.

ತಿರುಮಲ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್‌ ಲಿಮಿಟೆಡ್‌ನ‌ ಮಾಲೀಕ ಶ್ರೀನಿವಾಸ್‌ ಸಾರ್ವಜನಿಕರಿಂದ ಥಳಿತಕ್ಕೊಳಗಾಗಿ ಸದ್ಯಕ್ಕೆ ವೇಮಗಲ್ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ತಾಲೂಕಿನ ವೇಮಗಲ್ ಗ್ರಾಮದಲ್ಲಿ ಮೂರು ವರ್ಷಗಳ ಹಿಂದೆ ಸೌಹಾರ್ದ ಕ್ರೇಡಿಟ್ ಕೋ-ಅಪರೇಟಿವ್‌ ಬ್ಯಾಂಕ್‌ ಸ್ಥಾಪಿಸಿದ ನರಸಾಪುರದ ಶ್ರೀನಿವಾಸ್‌ ಮತ್ತು ಪದ್ಮಾವತಿ ಎಂಬುವರು ಬ್ಯಾಂಕ್‌ ನಲ್ಲಿ ಸುಮಾರು 3 ವರ್ಷಗಳಿಂದ ಚೀಟಿ ವ್ಯವಹಾರ ನಡೆಸುತ್ತಿದ್ದರು. ಬ್ಯಾಂಕ್‌ ನಲ್ಲಿ ಸದಸ್ಯತ್ವ ಪಡೆದು ಚೀಟಿ ಹಾಕಿರುವ ವ್ಯಕ್ತಿಗಳಿಗೆ ಸುಮಾರು 200 ಜನರಿಗೆ ಒಂದೂವರೆ ಕೋಟಿ ರೂ.ಗಳಷ್ಟು ವಂಚನೆ ಮಾಡಿದ್ದರೆಂದು ದೂರಲಾಗಿದೆ.

ವೇಮಗಲ್ ಸುತ್ತಮುತ್ತಲ ಜನತೆ 10ಲಕ್ಷ ರೂ. ಚೀಟಿನಲ್ಲಿ 200 ಜನ, 5ಲಕ್ಷ ರೂ. ಚೀಟಿಯಲ್ಲಿ 50ಜನ, 2ಲಕ್ಷ ರೂ. ಚೀಟಿಯಲ್ಲು 40 ಜನ, 60 ಸಾವಿರ ರೂ. ಚೀಟಿಯಲ್ಲಿ 20ಜನ, 50ಸಾವಿರ ರೂ. ಚೀಟಿಯಲ್ಲಿ 20 ಜನರು ಹಣ ತೊಡಗಿಸಿದ್ದರು.

ಪ್ರತಿ ತಿಂಗಳು ಕುಲುಕು ಚೀಟಿ ಎಂಬಂತೆ ವ್ಯವಹಾರ ನಡೆಯುತ್ತಿದ್ದು, ಸ್ಥಳೀಯವಾಗಿ ಒಂಬತ್ತು ಮಂದಿಯನ್ನು ಬ್ಯಾಂಕ್‌ ನಲ್ಲಿ ಕೆಲಸ ಕೊಡಲಾಗಿತ್ತು. ಬ್ಯಾಂಕ್‌ ನ ಸಿಬ್ಬಂದಿ ಎಂದು ನೇಮಕ ಮಾಡಿ ಇವರ ಮೂಲಕ ಚೀಟಿ ಹಾಕಿಸಿಕೊಂಡು ಸುಮಾರು 1-50 ಕೋಟಿ ರೂನಷ್ಟು ಬ್ಯಾಂಕ್‌ ಮ್ಯಾನೇಜರ್‌ ನರಸಾಪುರ ಶ್ರೀನಿವಾಸ್‌ ಮತ್ತು ಪದ್ಮಾವತಿ ಎಂಬುವರು ವಂಚನೆ ಮಾಡಿದ್ದಾರೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.

ಶ್ರೀನಿವಾಸ್‌ ಮತ್ತು ಪದ್ಮಾವತಿ ವೇಮಗಲ್ ನಲ್ಲಿ ಸ್ಥಾಪಿಸಿದ್ದ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್‌ ಬ್ಯಾಂಕ್‌ನ್ನು ರಾತ್ರೋರಾತ್ರಿ ಮುಚ್ಚಿಕೊಂಡು ಹೋಗಿ ಈಗ ಕೋಲಾರದ ಟೊಮೇಟೋ ಮಾರುಕಟ್ಟೆ ಸಮೀಪ ಮಾಲೂರು ರಸ್ತೆಯ ಪೂಜಾ ಕಲ್ಯಾಣ ಮಂಟಪದ ಬಳಿ ನೂತನವಾಗಿ ಉದ್ದೇಶಿತ ಕೋಲಾರ ತಿರುಮಲ ಸೌಹಾರ್ದ ಕ್ರೇಡಿಟ್  ಆಪರೇಟಿವ್‌ ಲಿ ಎಂಬ ಹೆಸರನ್ನು ಇಟ್ಟುಕೊಂಡು ಬ್ಯಾಂಕ್‌ ಸ್ಥಾಪನೆ ಮಾಡಿದ್ದನು.

ಈ ಬ್ಯಾಂಕ್‌ಗೆ ಸಂಬಂಧಿಸಿದಂತೆ ಪಾಂಪ್ಲೆಟ್ ಗಳಲ್ಲಿ ಯಾವುದೇ ರೀತಿಯ ಮೊಬೈಲ್ ನಂಬರ್‌ ಇಲ್ಲದೆ ಸುಮಾರು 1000 ಸಾವಿರ ಪಾಂಪ್ಲೆಟ್ ಹಂಚಿದ್ದರು. ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದ ವೇಮಗಲ್ ಬ್ಯಾಂಕ್‌ ಸಿಬ್ಬಂದಿಯವರೆ ಬ್ಯಾಂಕ್‌ ಮ್ಯಾನೇಜರ್‌ ಶ್ರೀನಿವಾಸ್‌ರನ್ನು ಮೋಸಕ್ಕೊಳಗಾದವರ ಸಹಾಯದಿಂದ ಕೋಲಾರದ ಕಚೇರಿಗೆ ನುಗ್ಗಿ ಅವರನ್ನು ಎಳೆದಾಡಿ, ಥಳಿಸಿದ್ದಾರೆ. ನಂತರ ಶ್ರೀನಿವಾಸ್‌ರನ್ನು ಕೋಲಾರದಿಂದ ಕರೆದುಕೊಂಡು ಬಂದು ವೇಮಗಲ್ ಠಾಣೆಗೆ ತಂದು ಒಪ್ಪಿಸಿದ್ದಾರೆ.

ವೇಮಗಲ್ ಠಾಣೆಗೆ ಸಾರ್ವಜನಿಕರು ದೂರು ನೀಡಿದ್ದು, ಆರೋಪಿ ಶ್ರೀನಿವಾಸ್‌ರನ್ನು ತಮ್ಮ ವಶದಲ್ಲಿಟ್ಟುಕೊಂಡಿರುವ ವೇಮಗಲ್ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.