ಮಹಿಳೆಯರ ಅಭಿವೃದ್ಧಿಗಾಗಿ ಬ್ಯಾಂಕ್‌ನಿಂದ ಸಾಲ ವಿತರಣೆ


Team Udayavani, Jan 26, 2019, 8:16 AM IST

loan.jpg

ಬಂಗಾರಪೇಟೆ: ಡಿಸಿಸಿ ಬ್ಯಾಂಕ್‌ನಿಂದ ಕಳೆದ ಅವಧಿಯಲ್ಲಿ ತಾಲೂಕಿನ ಮಹಿಳಾ ಸಂಘಗಳಿಗೆ ಹಾಗೂ ರೈತರಿಗೆ ಅವಶ್ಯಕವಾಗಿರುವಷ್ಟು ಸಾಲ ನೀಡಿಲ್ಲ. ಈ ಅವಧಿಯಲ್ಲಾದರೂ ತಾಲೂಕಿಗೆ 300 ಕೋಟಿ ರೂ. ಸಾಲ ನೀಡುವುದರ ಮೂಲಕ ತಾಲೂಕಿನ ರೈತರು ಹಾಗೂ ಮಹಿಳೆಯರು ಆರ್ಥಿಕ‌ವಾಗಿ ಮುಂದುವರಿಯಲು ಸಹಕಾರಿಯಾಗಲಿದೆ ಎಂದು ಶಾಸಕ ನಾರಾಯಣಸ್ವಾಮಿ ಹೇಳಿದರು.

ತಾಲೂಕಿನ ಗುಲ್ಲಹಳ್ಳಿ ವಿಎಸ್‌ಎಸ್‌ಎನ್‌ ಸಭಾಂಗಣದಲ್ಲಿ ಡಿಸಿಸಿ ಬ್ಯಾಂಕ್‌ನಿಂದ 1.16 ಕೋಟಿಗಳ ಸಾಲವನ್ನು ಮಹಿಳಾ ಸಂಘಗಳಿಗೆ ಹಾಗೂ ರೈತರಿಗೆ ಸಾಲ ವಿತರಣೆಯ ಚೆಕ್‌ ವಿತರಿಸಿ ಮಾತನಾಡಿ, ಕಳೆದ ವರ್ಷ ಡಿಸಿಸಿ ಬ್ಯಾಂಕ್‌ನಿಂದ ನಿರ್ದಿಷ್ಟವಾಗಿ ಅಗತ್ಯವಾದ ಸಾಲ ವಿತರಣೆ ಮಾಡಿಲ್ಲ. ಇನ್ನಾದರೂ ಡಿಸಿಸಿ ಬ್ಯಾಂಕ್‌ ಎಚ್ಚೆತ್ತುಕೊಂಡು ಸಾಲ ವಿತರಣೆ ಮಾಡುವಂತೆ ತಿಳಿಸಿದರು.

ಸಾಲ ಪಾವತಿಸಿ: ಹಿಂದಿನ ಸಿಎಂ ಸಿದ್ದರಾಮಯ್ಯರನ್ನು ಜಿಲ್ಲೆಯ ಎಲ್ಲಾ ಶಾಸಕರೊಂದಿಗೆ ಭೇಟಿ ಮಾಡಿ ಮಹಿಳಾ ಸಂಘಗಳಿಗೆ ಸಾಲ ವಿತರಣೆ ಮಾಡಬೇಕು ಹಾಗೂ ಸಾಲಕ್ಕೆ ಬಡ್ಡಿ ವಿಧಿಸದೇ ರಾಜ್ಯ ಸರ್ಕಾರವೇ ಬಡ್ಡಿ ಕಟ್ಟುವ ಜವಾಬ್ದಾರಿ ವಹಿಸಿಕೊಂಡಿರುವುದರ ಮೂಲಕ ಮಹಿಳೆಯರು ಆರ್ಥಿಕವಾಗಿ ಮುಂದು ವರಿಯಲು ಶ್ರಮಿಸಲಾಗುತ್ತಿದೆ. ಗುಲ್ಲಹಳ್ಳಿ ವಿಎಸ್‌ಎಸ್‌ಎನ್‌ ಕಳೆದ 20 ವರ್ಷಗಳಿಂದ ಮುಚ್ಚಿದ್ದು, ಈ ವರ್ಷದಿಂದ ಪ್ರಾಣ ನೀಡಲಾಗಿದೆ ಎಂದರು.

ಗೌರವಕ್ಕೆ ಧಕ್ಕೆ ಬರದಿರಲಿ: ಇಡೀ ಕೋಲಾರ ಜಿಲ್ಲೆಯಲ್ಲಿಯೇ ಇದುವರೆಗೂ ಡಿಸಿಸಿ ಬ್ಯಾಂಕ್‌ ಮೂಲಕ ಮಹಿಳಾ ಸಂಘಗಳು ತೆಗೆದುಕೊಂಡಿರುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವುದರ ಮೂಲಕ ತಾಲೂಕಿನ ಗೌರವ ಉಳಿಸಿದ್ದಾರೆ. ಮಹಿಳೆಯರು ಹೆಚ್ಚಾಗಿ ಗೌರವಕ್ಕೆ ಧಕ್ಕೆ ಬರದೇ ಹಾಗೆ ಎಚ್ಚರವಹಿಸಿಕೊಂಡು ಸಾಲವನ್ನು ಒಂದು ದಿನ ಮುಂಚಿತವಾಗಿ ಬ್ಯಾಂಕ್‌ಗೆ ಕಟ್ಟುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದ ಅವರು, ತಾಲೂಕಿನಲ್ಲಿ ಪ್ರತಿಯೊಂದು ಗ್ರಾಮದ ಮಹಿಳಾ ಸಂಘಗಳಿಗೆ ತಪ್ಪದೇ ಸಾಲ ವಿತರಣೆ ಮಾಡಬೇಕೆಂದು ಹೇಳಿದರು.

ಹೆಚ್ಚಿನ ಸಾಲ ನೀಡಲು ಕ್ರಮ: ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ ಮಾತನಾಡಿ, ಇಡೀ ಕೋಲಾರ ಜಿಲ್ಲೆಯಲ್ಲಿ ಬಂಗಾರಪೇಟೆ ತಾಲೂಕಿಗೆ ಕಡಿಮೆ ಸಾಲವನ್ನು ನೀಡಲಾಗಿದ್ದು, ಪ್ರಸ್ತುತ ಈ ವರ್ಷದಲ್ಲಿ ಎಲ್ಲಾ ತಾಲೂಕಿಗಳಿಗೂ ಮೀರಿ ಹೆಚ್ಚಿನ ಸಾಲ ನೀಡಲು ಕ್ರಮಕೈಗೊಳ್ಳಲಾಗುವುದು. ಮಹಿಳಾ ಸಂಘಗಳು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡುವಂತೆ ತಿಳಿಸಿದರು.

ತಾಲೂಕಿನಲ್ಲಿ 93 ಸಾವಿರ ಬಿಪಿಲ್‌ ಕಾರ್ಡ್‌ಗಳ ಮಹಿಳಾ ಸದಸ್ಯರಿದ್ದಾರೆ. ಈ ಎಲ್ಲಾ ಹೆಣ್ಣು ಮಕ್ಕಳಿಗೆ ಬಡ್ಡಿ ರಹಿತ ಸಾಲವನ್ನು ನೀಡಲು ತೀರ್ಮಾನಿಸಿದ್ದು, ಸ್ಥಳೀಯರ ಮೀಟರ್‌ ಬಡ್ಡಿಯನ್ನು ತಪ್ಪಿಸುವ ಉದ್ದೇಶದಿಂದ ಸಾಲ ನೀಡಲು ಎಷ್ಟೇ ಕೋಟಿಗಳಾಗಿದ್ದರೂ ಸಹ ಧೈರ್ಯದಿಂದ ಡಿಸಿಸಿ ಬ್ಯಾಂಕ್‌ ಸಾಲ ನೀಡಲಿದೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಪಿಚ್ಚಹಳ್ಳಿ ಗೋವಿಂದರಾಜು, ಗುಲ್ಲಹಳ್ಳಿ ವಿಎಸ್‌ಎಸ್‌ಎನ್‌ ಅಧ್ಯಕ್ಷ ಚಲಪತಿ, ಜಿಪಂ ಸದಸ್ಯೆ ಪಾರ್ವತಮ್ಮ, ಬೂದಿಕೋಟೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆ.ವಿ.ನಾಗರಾಜ್‌ ಇತರರು ಇದ್ದರು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.