ಅಕ್ರಮ ಮನೆ ನಿರ್ಮಾಣಕ್ಕೆ ತಡೆ
Team Udayavani, May 31, 2020, 7:15 AM IST
ಟೇಕಲ್: ಹೋಬಳಿಯ ಕೆ.ಜಿ.ಹಳ್ಳಿಯ ಸರ್ವೆ ನಂ. 73ರ ಗೋಮಾಳ ಬಂಡೆ ಮೇಲೆ ಈ ಹಿಂದೆ ಅಕ್ರಮ ವಾಗಿ ಮನೆ ನಿರ್ಮಿಸುತ್ತಿದ್ದವರಿಗೆ ಸ್ಥಗಿತಗೊಳಿಸಿ ಎಂದು ಎಸಿ ಸೋಮಶೇಖರ್ ಆದೇಶಿಸಿದ್ದರೂ ಲಾಕ್ಡೌನ್ ದುರ್ಬಳಕೆ ಮಾಡಿಕೊಂಡ ಕೆಲವರು ಪ್ರಭಾವಿಗಳ ಕೈವಾಡದೊಂದಿಗೆ ಮನೆ ಕಟ್ಟುತ್ತಿದ್ದರು.
ಈ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ತಹಶೀಲ್ದಾರ್ ಎಂ.ಮಂಜುನಾಥ್, ದಿಢೀರ್ ಭೇಟಿ ನೀಡಿ ಅಕ್ರಮವಾಗಿ ಮನೆ ಕಟ್ಟಿಕೊಳ್ಳು ತ್ತಿದ್ದನ್ನು ಸ್ಥಗಿತಗೊಳಿಸಿದರು. ಈ ವೇಳೆ ತಹಶೀಲ್ದಾರ್ ಮಂಜುನಾಥ್ ಮಾತ ನಾಡಿ, ಸರ್ವೆ ನಂ.73ರ ಗೋಮಾಳದಲ್ಲಿ ಸ್ಥಳೀಯರ ಪ್ರಭಾವದಿಂದ ಅಕ್ರಮವಾಗಿ ಮನೆ ನಿರ್ಮಿಸಿಕೊಳ್ಳುತ್ತಿ ರುವುದು ಗಮನಕ್ಕೆ ಬಂದಿದ್ದು, ಇದನ್ನು ಭೂಕಬಳಿಕೆ ವಿಶೇಷ ನ್ಯಾಯಾಲಯಕ್ಕೆ ದಾವೆ ಹೂಡಲಾಗುತ್ತದೆ.
ಈ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ. ಪಂಚಾ ಯ್ತಿಯಿಂದ ಏನಾದರೂ ಅಕ್ರಮ ಖಾತೆಗಳು ನಡೆದಿದೆ ಎಂಬುದರ ಬಗ್ಗೆ ವಿಚಾರಣೆ ನಡೆಸಲಾಗುವುದು ಎಂದು ಹೇಳಿದರು. ಟೇಕಲ್ ನಾಡಕಚೇರಿ ಉಪತಹಶೀಲ್ದಾರ್ ಜಗನ್ನಾಥ ರೆಡ್ಡಿ ಈ ಬಗ್ಗೆ ಪ್ರತಿಕ್ರಿಯಿಸಿ, ಸರ್ಕಾರಿ ಜಾಗದಲ್ಲಿ ಯಾವುದೇ ದಾಖಲೆಗಳು ಇಲ್ಲದೆ ಅತಿಕ್ರಮ ಪ್ರವೇಶ ಮಾಡಿದರೆ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತದೆ.
ಮನೆ ಇಲ್ಲದವರು ಪಂಚಾಯ್ತಿಯಲ್ಲಿ ಅರ್ಜಿ ನೀಡಿದರೆ ಅಂತಹವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮಾಹಿತಿ ನೀಡಿ ಸೌಲಭ್ಯ ಕಲ್ಪಿಸಿಕೊಡಲಾಗುತ್ತದೆ ಎಂದು ಹೇಳಿ ದರು. ಈ ವೇಳೆ ಉಪತಹಶೀಲ್ದಾರ್ ಜಗನ್ನಾಥರೆಡ್ಡಿ, ಕಂದಾಯ ಅಧಿಕಾರಿ ಮುನಿಸ್ವಾಮಿಶೆಟ್ಟಿ, ಗ್ರಾಮಲೆಕ್ಕಾಧಿ ಕಾರಿ ಸುಧಾಮಣಿ, ಗ್ರಾಪಂ ಸದಸ್ಯ ಮುರುಗೇಶ್ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ