ಅಪರಿಚಿತರ ಬಗ್ಗೆ ಎಚ್ಚರ: ಎಸ್ಪಿ


Team Udayavani, Apr 29, 2019, 10:27 AM IST

rohini

ಮುಳಬಾಗಿಲು: ತಾಲೂಕಿನಲ್ಲಿ ಯಾರೇ ಅನುಮಾನಾಸ್ಪದವಾಗಿ ಕಂಡು ಬಂದರೂ ಕೂಡಲೇ ಹತ್ತಿರದ ಪೊಲೀಸ್‌ ಠಾಣೆಗೆ ಮಾಹಿತಿ ನೀಡುವ ಮೂಲಕ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ಸಹಕಾರ ನೀಡಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ರೋಹಿಣಿ ಕಟೋಚ್ ಸೆಪಟ್ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಉತ್ತಮ ಕಾನೂನು ಸುವ್ಯವಸ್ಥೆಗಾಗಿ ಪೊಲೀಸ್‌ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಅದರಲ್ಲೂ ಮುಖ್ಯವಾಗಿ ಅಪರಾಧಗಳ ತಡೆಗೆ ಅಲ್ಲದೇ ಅಪರಾಧ ಪತ್ತೆಗಾಗಿ ಪೊಲೀಸರು ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅಲ್ಲದೇ, ಈ ಕುರಿತು ಜನರೂ ಸಾಕಷ್ಟು ಜಾಗೃತರಾಗಿಬೇಕು ಎಂದು ತಿಳಿಸಿದರು.

ಅಪರಿಚಿತರ ಬಗ್ಗೆ ಎಚ್ಚರ: ಮನೆ ಬಾಗಿಲಿಗೆ ಒಳಗಡೆಯಿಂದ ಡೋರ್‌ ಲಾಕ್‌ ಅಳವಡಿಸಿ ಕಳವಾಗುವುದನ್ನು ತಪ್ಪಿಸಿ, ಅಪರಿಚಿತರು ಮನೆಗೆ ಬಂದರೆ ಪರೀಕ್ಷಿಸಿದೇ ಒಳಗೆ ಕರೆದುಕೊಳ್ಳಬಾರದು, ಮಹಿಳೆಯರು ರಸ್ತೆಯಲ್ಲಿ ನಡೆದು ಹೋಗುವಾಗ ನಿಮ್ಮ ಹಿಂದೆ ಮತ್ತು ಮುಂದೆ ಓಡಾಡುವ ಅಪರಿಚಿತರ ಬಗ್ಗೆ ಎಚ್ಚರವಾಗಿರಬೇಕೆಂದರು.

ಪೊಲೀಸರಿಗೆ ಮಾಹಿತಿ ನೀಡಿ: ನಿಮ್ಮ ಕಾರು ಅಥವಾ ಜೀಪುಗಳಲ್ಲಿ ವಸ್ತುಗಳನ್ನು ಇಟ್ಟು ಬೀಗ ಹಾಕದೇ ಇರಬೇಡಿ, ಎಟಿಎಂ ಕಾರ್ಡ್‌ ಹಿಂದೆ ನಿಮ್ಮ ಗುಪ್ತ ಪಿನ್‌ ಕೋಡನ್ನು ಬರೆಯಬೇಡಿರಿ. ಎಟಿಎಂನಲ್ಲಿ ಹಣ ಪಡೆಯುವಾಗ ಅಪರಿಚಿತರ ಸಹಾಯ ಪಡೆಯಬೇಡಿ, ಮೈಮೇಲೆ ಹೇಸಿಗೆ ಎರಚಿ ಗಮನ ಬೇರೆಡೆ ಸೆಳೆದು ಹಣದ ಚೀಲ/ಪೆಟ್ಟಿಗೆ ಕದಿಯುತ್ತಿರುವ ಕಳ್ಳರ ಬಗ್ಗೆ ಎಚ್ಚರವಿರಲಿ, ಅಪರಿಚಿತರು-ಸಂಶಯಾಸ್ಪದ ವ್ಯಕ್ತಿಗಳು ದಾಖಲೆಯಿಲ್ಲದೇ ಮೊಬೈಲ್ ಅಥವಾ ಇನ್ನಾವುದೇ ಸ್ವತ್ತಿನ ವಸ್ತುಗಳನ್ನು ಮಾರಾಟ ಮಾಡಲು ಅಥವಾ ಅಡ ಇಡಲು ಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಅಪರಾಧಗಳಿಗೆ ಕಡಿವಾಣ ಹಾಕಬೇಕೆಂದರು.

ನಿರ್ಲಕ್ಷ್ಯ ವಹಿಸದಿರಿ: ಜಿಲ್ಲೆಯಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಾಪಾಡುವುದೇ ತಮ್ಮ ಮೂಲ ಉದ್ದೇಶ. ಯಾರೇ ಜನಸಾಮಾನ್ಯರು ಪೊಲೀಸ್‌ ಠಾಣೆಗೆ ಬಂದರೂ ಪೊಲೀಸರಿಗೆ ಭಯಪಡದೇ ಕಾನೂನು ಕ್ರಮ ಕೈಗೊಳ್ಳಬಹುದು. ಒಂದು ವೇಳೆ ಯಾವುದೇ ಪೊಲೀಸರು ತಮ್ಮ ಕೆಲಸ ಮಾಡಿಕೊಡದೇ ನಿರ್ಲಕ್ಷ್ಯಿಸಿದ್ದಲ್ಲಿ ಅವರ ಹೆಸರನ್ನು ತಿಳಿದುಕೊಂಡು ಅವರ ವಿರುದ್ಧ ತಮ್ಮ ಕಚೇರಿಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಜನಸಾಮಾನ್ಯರೂ ಪೊಲೀಸರು ಸೂಚಿಸುವ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದರೊಂದಿಗೆ ಪೊಲೀಸರೊಂದಿಗೆ ಉತ್ತಮ ಬಾಂಧವ್ಯ ಕಾಯ್ದುಕೊಳ್ಳಬೇಕೆಂದು ಸಲಹೆ ನೀಡಿದರು.

ಡಕಾಯಿತರು ನುಗ್ಗಿದರೆ ಖಾರದ ಪುಡಿ ಎರಚಿ

ನಿಮ್ಮ ಮನೆ ಹತ್ತಿರ ಬೆಲೆಬಾಳುವ ಚಿನ್ನದ ಆಭರಣಗಳಿಗೆ ಪಾಲೀಶ್‌ ಮಾಡುವವರನ್ನು ಟೀವಿ, ಫ್ರಿಡ್ಜ್, ಗ್ಯಾಸ್‌-ಸ್ಟವ್‌ ರಿಪೇರಿ ಮಾಡುವವರೆಂದು ಬರುವವರ ಬಗ್ಗೆ ಎಚ್ಚರದಿಂದಿರಿ. ಆಟೋರಿಕ್ಷಾ, ಟ್ಯಾಕ್ಸಿಗಳಲ್ಲಿ ಹತ್ತುವ ಮೊದಲು ಅದರ ಸಂಖ್ಯೆ ಗುರುತು ಮಾಡಿಕೊಳ್ಳಿ. ಮನೆಯಲ್ಲಿ ಬೆಲೆ ಬಾಳುವ ಬಂಗಾರ, ಬೆಳ್ಳಿ ಆಭರಣಗಳು ಮತ್ತು ಹಣ ಇಡದೇ ಬ್ಯಾಂಕ್‌ ಲಾಕರ್‌ನಲ್ಲಿಡಿ. ಮನೆಗಳಿಗೆ/ಅಂಗಡಿಗಳಿಗೆ ಸಿ.ಸಿ ಕ್ಯಾಮೆರಾ ಅಳವಡಿಸಿಕೊಳ್ಳಿ. ಒಂದು ವೇಳೆ ಮನೆಗೆ ಅಪರಿಚಿತ ಡಕಾಯಿತರು ನುಗ್ಗಲು ಪ್ರಯತ್ನಿಸಿದರೆ ಕಣ್ಣಿಗೆ ಖಾರದ ಪುಡಿ ಎರಚಿ ಹೊಡೆದು ಹಿಡಿಯಿರಿ ಎಂದು ಜಿಲ್ಲಿ ಪೊಲೀಸ್‌ ವರಿಷ್ಠಾಧಿಕಾರಿ ರೋಹಿಣಿ ಕಟೋಚ್ ಸೆಪಟ್ ನಾಗರಿಕರಿಗೆ ಸಲಹೆ ನೀಡಿದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.