ಮತ ಎಣಿಕೆಯಲ್ಲಿ ಜವಾಬ್ದಾರಿ ಇರಲಿ: ಡೀಸಿ


Team Udayavani, May 17, 2019, 2:45 PM IST

kol-1

ಕೋಲಾರ: ಲೋಕಸಭೆ ಚುನಾವಣೆ ಮತ ಎಣಿಕೆಗೆ ನೇಮಕಗೊಂಡಿರುವ ಸಿಬ್ಬಂದಿ ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸಬೇಕಿದ್ದು ಯಾವುದೇ ಕಾರಣಕ್ಕೂ ಲೋಪ ಆಗದಂತೆ ಎಚ್ಚರ ವಹಿಸಬೇಕೆಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಹೇಳಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಗುರುವಾರ ಮತ ಎಣಿಕೆ ಸಿಬ್ಬಂದಿ, ಅಧಿಕಾರಿಗಳಿಗೆ ನಡೆದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಮತ ಎಣಿಕೆ ಅಂತಿಮ ಮತ್ತು ಪ್ರಮುಖ ಘಟ್ಟವಾಗಿದೆ. ಮತ ಎಣಿಕೆಗೆ ಸಿಬ್ಬಂದಿ ತಪ್ಪದೇ ಕಡ್ಡಾಯವಾಗಿ ಬಂದು, ತಮ್ಮ ಜವಾಬ್ದಾರಿ ನಿರ್ವಹಿಸಬೇಕಿದೆ. ನಿಯಮ ಉಲ್ಲಂಘಿಸಿದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಶಿಕ್ಷೆಗೆ ಗುರಿಯಾಗುವಿರಿ: ಮತದಾನ ಪ್ರಕ್ರಿಯೆಯಂತೆಯೇ ಮತ ಎಣಿಕೆಗೂ ಸಾಕಷ್ಟು ಪ್ರಕ್ರಿಯೆಗಳಿದ್ದು, ಅವುಗಳನ್ನು ಅನುಸರಿಸಬೇಕಾಗಿದೆ. ಅನುಮಾನಗಳೇನಾದರೂ ಇದ್ದರೆ ಬಗೆಹರಿಸಿಕೊಳ್ಳಬೇಕು. ಅದನ್ನು ಬಿಟ್ಟು ಕರ್ತವ್ಯದಲ್ಲಿ ನಿಯಮಗಳನ್ನು ಮೀರಿದ್ದೇ ಆದಲ್ಲಿ ದಂಡದ ಸಮೇತ 3 ತಿಂಗಳು ವಿವಿಧ ಶಿಕ್ಷೆಗೆ ಗುರಿಯಾಗುತ್ತೀರಿ ಎಂದು ಹೇಳಿದರು.

ಅಗತ್ಯ ಸೌಲಭ್ಯ: ಈಗಾಗಲೇ ಮತಯಂತ್ರಗಳನ್ನು 15 ಭದ್ರತಾಕೊಠಡಿಗಳಲ್ಲಿ ಇರಿಸಲಾಗಿದ್ದು, ಅಂದು ಒಂದೊಂದೇ ಕೊಠಡಿಯನ್ನು ತೆರೆದು ಯಂತ್ರ ನೀಡಲಾಗುತ್ತದೆ. ಕನಿಷ್ಠ 17 ರಿಂದ 23 ಸುತ್ತುಗಳವರೆಗೆ ಎಣಿಕೆ ನಡೆಯಲಿರುವುದರಿಂದ ತಡವಾಗಲಿದೆ. ಆದರೂ ಅವಸರ ಪಡುವ ಅಗತ್ಯವಿಲ್ಲ. 8 ಗಂಟೆ ಒಳಗೆ ವರದಿ ನೀಡಬೇಕಿದ್ದು, ಸಿಬ್ಬಂದಿಗೆ ತಿಂಡಿ, ಊಟ ಸೇರಿ ಅಗತ್ಯ ಸೌಲಭ್ಯ ಕಲ್ಪಿಸಿರುವುದಾಗಿ ಹೇಳಿದರು.

ತರಬೇತುದಾರ ತಿಲಗರ್‌ ಮಾತನಾಡಿ, ಮತ ಎಣಿಕೆ ದಿನದಂದು ಗುರುತಿನ ಚೀಟಿಯೊಂದಿಗೆ ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಬೇಕು. ಮತದಾನ ಕೇಂದ್ರಕ್ಕೆ ಮುಖ್ಯವಾಗಿ ಮೊಬೈಲ್ಗಳನ್ನು ಕಡ್ಡಾಯವಾಗಿ ತರಬೇಡಿ ಎಂದು ಎಚ್ಚರಿಸಿದರು.

ಎಷ್ಟೆಷ್ಟು ಮತಗಟ್ಟೆ-ಟೇಬಲ್: ಶಿಡ್ಲಘಟ್ಟ ಕ್ಷೇತ್ರದ 242 ಮತಗಟ್ಟೆಗಳಿಗೆ ಸಂಬಂಧಿಸಿದಂತೆ 12 ಟೇಬಲ್, ಚಿಂತಾಮಣಿ 245 ಮತಗಟ್ಟೆಗಳಿಗೆ 14 ಟೇಬಲ್, ಶ್ರೀನಿವಾಸಪುರದ 266 ಮತಗಟ್ಟೆಗಳಿಗೆ 7 ಟೇಬಲ್, ಮುಳಬಾಗಿಲಿನ 279 ಮತಗಟ್ಟೆಗಳಿಗೆ 7 ಟೇಬಲ್, ಕೆಜಿಎಫ್‌ನ 234 ಟೇಬಲ್ಗಳಿಗೆ 7 ಟೇಬಲ್, ಬಂಗಾರಪೇಟೆ 259 ಮತಗಟ್ಟೆಗಳಿಗೆ 7 ಟೇಬಲ್, ಕೋಲಾರದ 284 ಮತಗಟ್ಟೆಗಳಿಗೆ 14 ಹಾಗೂ ಮಾಲೂರಿನ 249 ಮತಗಟ್ಟೆಗಳಿಗೆ 7 ಟೇಬಲ್ಗಳ ವ್ಯವಸ್ಥೆ ಮಾಡಿರುವುದಾಗಿ ವಿವರಿಸಿದರು.

ಹಾಗೆಯೇ ಚಾಚೂ ತಪ್ಪದೆ ಸಮಯ ಪಾಲನೆ ಮಾಡಬೇಕಿದ್ದು, ಚುನಾವಣಾಧಿಕಾರಿಗಳು ಆದೇಶ ಮಾಡುವವರೆಗೂ ಎಣಿಕಾ ಕೇಂದ್ರ ಬಿಟ್ಟು ಯಾರೂ ಬರುವಂತಿಲ್ಲ. ಮರು ಎಣಿಕೆ ಮತ್ತಿತರ ಸಮಸ್ಯೆಗಳಾಗುವ ಸಾಧ್ಯತೆಗಳಿರುತ್ತವೆ.

ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಕರ್ತವ್ಯವನ್ನು ಉತ್ತಮವಾಗಿ ನಿರ್ವಹಿಸಬೇಕು ಎಂದು ಹೇಳಿದರು. ಕಾರ್ಯಾಗಾರದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಾಹ್ನವಿ, ಉಪವಿಭಾಗಾಧಿಕಾರಿ ಸೋಮಶೇಖರ್‌ ಇದ್ದರು.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.