ಕೆರೆ ಕೋಡಿ ಹರಿಯಲು ಕೇವಲ 1 ಅಡಿ ಬಾಕಿ


Team Udayavani, Sep 26, 2021, 3:56 PM IST

ಕೆರೆ ಕೋಡಿ ಹರಿಯಲು ಕೇವಲ 1 ಅಡಿ ಬಾಕಿ

ಕೆಜಿಎಫ್: ತಾಲೂಕಿನ ಬೇತಮಂಗಲ ಕೆರೆ ಕೋಡಿ ಹರಿಯಲು ಕೇವಲ ಒಂದು ಅಡಿ ಮಾತ್ರವೇ ಬಾಕಿ ಇದ್ದು, ಈ ಸಂತಸದ ಕ್ಷಣವನ್ನು ಕಣ್ತುಂಬಿಕೊಳ್ಳಲು ಹೋಬಳಿಯ ಜನರು ಕಾತರದಿಂದ ಕಾಯುತ್ತಿದ್ದಾರೆ.

2017ರಲ್ಲಿ ಕೋಡಿ ಹರಿದಿದ್ದ ಕೆರೆ ಈಗ ಬಹುತೇಕ ಭರ್ತಿಯಾಗಿದೆ. ಶನಿವಾರದವರೆಗೆ ಕೋಡಿ ಹರಿಯಲು ಕೇವಲ ಒಂದು ಅಡಿ ಮಾತ್ರವೇ ಬಾಕಿ ಇತ್ತು. ಈವರೆಗೂ ಒಳ ಹರಿವು ಕಡಿಮೆ ಇದ್ದು ನೀರು ನಿಧಾನವಾಗಿ ಬೇರೆಕೆರೆಗಳಿಂದ ಹರಿದು ಬರುತ್ತಿದೆ. ಆದರೆ, ಶನಿವಾರಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಬಿದ್ದಿರುವುದರಿಂದ ಹಾಗೂ ಹೊಳಲಿ ಕೆರೆ ಕೋಡಿ ಬಿದ್ದಿರುವ ಕಾರಣ, ನೀರು ಹೆಚ್ಚಾಗಿ ಹರಿದು ಯಾವುದೇ ಕ್ಷಣದಲ್ಲಾದರೂ ಕೋಡಿ ಹರಿಯುವ ಸಾಧ್ಯತೆ ಇದೆ. ಇದಕ್ಕಾಗಿ ಜಲಮಂಡಳಿ ಅಧಿಕಾರಿಗಳು ಸನ್ನದ್ಧರಾಗಿದ್ದಾರೆ.

ನೋಡುವುದೇ ಖುಷಿ: ಬೇತಮಂಗಲ ಕೆರೆ (ಪಾಲಾರ್‌ ಕೆರೆ) ನೀರು ಹೆಚ್ಚಾದರೆ ಬೇತಮಂಗಲದ ವಿಜಯೇಂದ್ರ ಸ್ವಾಮಿ ದೇವಾಲಯದ ಹಿಂಭಾಗ ದಲ್ಲಿರುವ ಕಾಲುವೆಯಲ್ಲಿ ಹರಿದುಹೋಗುತ್ತದೆ. ಮತ್ತೂಂದೆಡೆ ಕೋಡಿಹಳ್ಳಿಯಲ್ಲಿರುವ ಕೋಡಿಯ ನೀರು ಹರಿದುಹೋಗುತ್ತದೆ. ಈ ಸ್ಥಳ ಅತ್ಯಂತ ಪ್ರೇಕ್ಷಣೀಯವಾಗಿದ್ದು, ಕೆರೆಯಲ್ಲಿ ನೀರು ತುಂಬಿದರೆ ನೋಡುವುದೇ ಒಂದು ಸೊಬಗು, ಇದಕ್ಕಾಗಿ ಸಾವಿರಾರು ಸಂಖ್ಯೆಯಲ್ಲಿ ಜನ ಆಗಮಿಸುತ್ತಾರೆ. ಕೋಡಿ ನೀರು ಬಂಡೆಕಲ್ಲುಗಳ ಮೇಲೆ ಹರಿದು ಹೋಗುವುದು ನೋಡಲು ರಮಣೀಯವಾಗಿರುತ್ತದೆ.

ಕೆರೆ ನೋಡಲು ಜನ ಸಾಗರ: 2017ರಲ್ಲಿ ಕೆರೆ ತುಂಬಿದಾಗ ಪ್ರತಿನಿತ್ಯ ಸಾವಿರಾರು ಮಂದಿ ಕುಟುಂಬ ಸಮೇತರಾಗಿ ಆಗಮಿಸಿ ಕಣ್ತುಂಬಿಕೊಳ್ಳುತ್ತಿದ್ದರು. ಕೋಡಿಹಳ್ಳಿಯ ಸಣ್ಣ ರಸ್ತೆ ವಾಹನಗಳಿಂದ ತುಂಬಿ ಹೋಗಿತ್ತು. ಕಿ.ಮೀ. ಗಟ್ಟಲೆ ವಾಹನಗಳನ್ನು ನಿಲ್ಲಿಸಲಾಗುತ್ತಿತ್ತು. ಈಗ ಕೆರೆ ಕೋಡಿ ಹೋಗುವ ಸನ್ನಿವೇಶ ಉದ್ಭವವಾಗಿರುವುದರಿಂದ ಕೋಡಿಹಳ್ಳಿಗೆ ಜನಸಾಗರ ಹರಿದುಬರುವ ನಿರೀಕ್ಷೆ ಇದೆ.

ಸುಗಮ ರಸ್ತೆ ಅಗತ್ಯ: ಶನಿವಾರದಂದೇ ನೂರಾರು ಜನ ಕೋಡಿ ಹರಿಯುವುದಕ್ಕೆ ಇನ್ನು ಎಷ್ಟು ನೀರು ಬರಬೇಕು ಎಂದು ತವಕದಿಂದ ಬಂದು ನೋಡುತ್ತಿದ್ದರು. ಆದರೆ, ಈ ಗ್ರಾಮ ಸೇರುವ ಹುಲ್ಕೂರು ಗ್ರಾಪಂನವರು ಇನ್ನೂ ರಸ್ತೆ ದುರಸ್ತಿ ಮಾಡಿಲ್ಲ. ಸಾವಿರಾರು ಜನ ಮತ್ತು ನೂರಾರು ಸಂಖ್ಯೆಯ ವಾಹನಗಳು ಸುಗಮವಾಗಿ ಸಂಚರಿಸಲು ಅನುವು ಮಾಡಿಕೊಟ್ಟಿಲ್ಲ. ಕಳೆದ ಬಾರಿ ಗ್ರಾಪಂನಿಂದ ಕೋಡಿವರೆಗೂ ಕಾಂಕ್ರೀಟ್‌ ಹಾಕಲಾಗಿತ್ತು. ಇನ್ನೂ ಸ್ವಲ್ಪ ಕಾಮಗಾರಿ ಬಾಕಿ ಇತ್ತು ಎಂದು ಹುಲ್ಕೂರು ಗ್ರಾಪಂ ಮಾಜಿ ಅಧ್ಯಕ್ಷ ಪ್ರಸನ್ನ ಹೇಳುತ್ತಾರೆ. ಕೆರೆ ಕೋಡಿ ನೀರು ನೋಡಲು ಬರುವವರುತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗುತ್ತಾರೆ. ಕಳೆದ ಬಾರಿ ಇಡೀ ಪ್ರದೇಶ ತ್ಯಾಜ್ಯಮಯ ವಾಗಿತ್ತು. ಈ ಬಾರಿ ಪಂಚಾಯ್ತಿ ಅಧಿಕಾರಿಗಳು ಎಚ್ಚರವಹಿಸ ಬೇಕೆಂದು ಪರಿಸರವಾದಿಗಳು ಹೇಳುತ್ತಾರೆ.

-ಬಿ.ಆರ್‌.ಗೋಪಿನಾಥ್‌

ಟಾಪ್ ನ್ಯೂಸ್

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.