ಬೆಟ್ಟಬೆಣಜೇನಹಳ್ಳಿ ಶಾಲೆ ಶಿಥಿಲ
Team Udayavani, Dec 7, 2019, 1:22 PM IST
ಕೋಲಾರ: ತಾಲೂಕಿನ ವಕ್ಕಲೇರಿಹೋಬಳಿ ಬೆಟ್ಟಬೆಣಜೇನಹಳ್ಳಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕನ್ನಡ ಕಿರಿಯ ಪ್ರಾಥಮಿಕ ಶಾಲೆ ಶಿಥಿಲವಾಗಿದ್ದು, ನೂತನ ಶಾಲಾ ಕಟ್ಟಡ ನಿರ್ಮಿಸಿಕೊಡುವುದಾಗಿ ಜಿಪಂ ಸದಸ್ಯ ಸಿ.ಎನ್.ಅರುಣ್ ಪ್ರಸಾದ್ ಭರವಸೆ ನೀಡಿದರು.
ಶಾಲೆಗೆ ಭೇಟಿ ನೀಡಿದ ಸಿ.ಎನ್. ಅರುಣ್ ಪ್ರಸಾದ್, ಶಿಥಿಲವಾದ ಶಾಲಾ ಕಟ್ಟಡ, ಕಾಂಪೌಂಡ್, ಶೌಚಾಲಯ, ಗೋಡೆ ಬಿರುಕು, ಉದುರಿದ್ದ ಕಾಂಕ್ರೀಟ್ ಛಾವಣಿ, ಅಡುಗೆ ಕೋಣೆ ಪರಿಶೀಲಿಸಿ ಮಾತನಾಡಿ, ಸರ್ಕಾರಿ ಶಾಲೆಗಳು ಯಾವುದೇ ಕಾರಣಕ್ಕೂ ಮುಚ್ಚಬಾರದು, ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ದಾಖಲಾಗಬೇಕು. ಇದಕ್ಕೆ ಬೇಕಾದ ಮೂಲ ಸೌಕರ್ಯವನ್ನು ಜಿಪಂನಿಂದ ನೀಡುವುದಾಗಿ ತಿಳಿಸಿದ ಅವರು, ಸಂಬಂಧ ಪಟ್ಟ ಅಧಿ ಕಾರಿಗಳೊಂದಿಗೆ ಚರ್ಚಿಸಿ ನೂತನ ಶಾಲಾ ಕಟ್ಟಡ ನಿರ್ಮಿಸಿ ಕೊಡುವ ಭರವಸೆ ನೀಡಿದರು.
ಸರ್ಕಾರಿ ಉರ್ದು ಶಾಲೆಯಲ್ಲಿ 15 ಮಕ್ಕಳು, ಕನ್ನಡ ಶಾಲೆಯಲ್ಲಿ 12 ಮಕ್ಕಳು ಓದುತ್ತಿದ್ದು, ಶಾಲೆಗೆ ಮಕ್ಕಳನ್ನು ಕಳುಹಿ ಸಲು ಪೋಷಕರು ಆತಂಕ ಪಡಬಾರದು. ನೂತನ ಕಟ್ಟಡ ನಿರ್ಮಿಸುವವರೆಗೂಬೇರೆ ಕಟ್ಟಡಕ್ಕೆ ಮಕ್ಕಳನ್ನು ಸ್ಥಳಾಂತರಿಸುವಂತೆ ಶಿಕ್ಷಕರಿಗೆ ಸೂಚಿಸುವುದಾಗಿ ತಿಳಿಸಿದರು. ಬೆಟ್ಟಬೆಣಜೇನಹಳ್ಳಿ ಗ್ರಾಮದ ಮುಖಂಡರಾದ ಜಹೀರ್, ಖದೀರ್, ಹನುಮಂತಪ್ಪ, ಗೋಪಾಲಣ್ಣ, ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ನಯುಬ್ವುನೀಸಾ, ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸ್ವರ್ಣಲತಾ, ಸಹಶಿಕ್ಷಕರಾದ ನಂಜುಂಡಪ್ಪ, ನಾರಾಯಣಸ್ವಾಮಿ, ನಾಜಿಮಾ ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ