![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್ ಪ್ರತಿಭಟನೆ: ಅಶ್ವತ್ಥನಾರಾಯಣ
Team Udayavani, May 28, 2024, 6:45 AM IST
![ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್ ಪ್ರತಿಭಟನೆ: ಅಶ್ವತ್ಥನಾರಾಯಣ](https://www.udayavani.com/wp-content/uploads/2024/05/Ashwatthanarayan-620x403.jpg)
ಕೋಲಾರ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಭ್ರಷ್ಟಾಚಾರ, ದುರಾಡಳಿತ, ಜನ, ರೈತ ವಿರೋಧಿ ನಿಲುವುಗಳ ವಿರುದ್ಧ ಮೇ 28ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಮಾಜಿ ಸಚಿವ ಡಾ| ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.
ನಗರದಲ್ಲಿ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ| ವೈ.ಎ.ನಾರಾಯಣ ಸ್ವಾಮಿ ಪರ ಪ್ರಚಾರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಒಂದು ವರ್ಷದಿಂದ ಒಂದು ಸಮುದಾಯದ ತುಷ್ಟೀಕರಣ ನೀತಿಯಿಂದ ಸಮಾಜದ ವಿಭಜನೆ ಯತ್ನ ನಡೆದಿದೆ.
ಪ್ರತಿನಿತ್ಯ ಕೊಲೆ, ಸುಲಿಗೆ, ಅತ್ಯಾಚಾರ ನಡೆಯುತ್ತಿದ್ದು, ಅತಿ ಹೆಚ್ಚು ಕ್ರಿಮಿನಲ್ ಕೇಸ್ ದಾಖಲಾಗುತ್ತಿದೆ. ರಾಜ್ಯ ಸರಕಾರ ಮನಬಂದಂತೆ ಆಡಳಿತ ನಡೆಸುತ್ತಿದ್ದು, ಪೊಲೀಸ್ ವರ್ಗಾವಣೆಯಲ್ಲೂ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ. ಬೆಂಗಳೂರು ನಗರದಲ್ಲಿ ಅತಿವೃಷ್ಟಿಯ ಸಮಸ್ಯೆ ನಿಯಂತ್ರಿಸುವಲ್ಲಿ ವಿಫಲವಾಗಿದ್ದು, ಇದೆಲ್ಲವನ್ನೂ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.
ಅಮಾಯಕ ಹೆಣ್ಣು ಮಕ್ಕಳ ಹಿತ ಕಾಯುವಲ್ಲಿ ಸಿಎಂ, ಡಿಸಿಎಂ ವಿಫಲ: ಅಶ್ವತ್ಥನಾರಾಯಣ
ಕೋಲಾರ: ಪೆನ್ಡ್ರೈವ್ ಹಂಚಿಕೆ ತಪ್ಪಲ್ಲ ಎಂದು ರಾಜ್ಯದ ಓರ್ವ ಮಹಾನ್ ನಾಯಕ ಹೇಳುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ಧಾಳಿ ನಡೆಸಿದ ಮಾಜಿ ಸಚಿವ ಡಾ.ಅಶ್ವತ್ಥನಾರಾಯಣ, ಮಹಿಳೆಯರ ಮಾನ ಹರಾಜು ಹಾಕುವ ಮೂಲಕ ಅಮಾಯಕ ಹೆಣ್ಣು ಮಕ್ಕಳ ಹಿತ ಕಾಯುವಲ್ಲಿ ಸಿಎಂ, ಡಿಸಿಎಂ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಸಿದ್ದರಾಮಯ್ಯ ಅಜ್ಞಾನಿಯಂತೆ ಕೆಲಸ ಮಾಡುತ್ತಿದ್ದಾರೆ. ಬಡವರ ಮಕ್ಕಳು ಉನ್ನತ ಹುದ್ದೆಗೆ ಹೋಗಬಾರದು ಎಂಬಂತೆ ಅವರನ್ನು ಹಗಲು ಕಂಡ ಬಾವಿಗೆ ನೂಕುತ್ತಿದ್ದಾರೆ. ಯುಜಿಸಿ ನಿಯಮ ಅನುಷ್ಠಾನಗೊಂಡರೆ ತಾನಾಗಿಯೇ ಎನ್ಇಪಿ ಜಾರಿಯಾಗುತ್ತದೆ, ಅದನ್ನು ತಡೆಯಲು ಸಾಧ್ಯವಿಲ್ಲ. ಶಿಕ್ಷಣ, ಆರೋಗ್ಯ ಸೇವೆಗಳ ಬಗ್ಗೆ ಕೇಳಿದರೆ ಮೋದಿ ಕಡೆ ಕೈ ತೋರಿಸ್ತಾರೆ. ಗ್ಯಾರಂಟಿಗಳ ಆಶ್ರಯದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಇಂತಹ ಕೆಟ್ಟ ಆಡಳಿತ ಎಂದೂ ನೋಡಿರಲಿಲ್ಲ ಎಂದು ಟೀಕಿಸಿದರು.
ಆಪರೇಷನ್ಮಾಡಲ್ಲ: ನಾವು ಯಾವುದೇ ಆಪರೇಷನ್ ಮಾಡಲ್ಲ, ಅಭಿವೃದ್ಧಿ ಶೂನ್ಯ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ಅಲ್ಲಿ ನಾನೇ ಸಿಎಂ ಎಂಬ ಗಲಾಟೆ ಆರಂಭವಾಗಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ತಾನಾಗಿಯೇ ಪತನಗೊಳ್ಳಲಿದೆ ಎಂದರು.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kempegowda Jayanti: ಜಯಂತಿಗೆ ಎಚ್ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ](https://www.udayavani.com/wp-content/uploads/2024/06/11-16-150x90.jpg)
Kempegowda Jayanti: ಜಯಂತಿಗೆ ಎಚ್ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ
![14](https://www.udayavani.com/wp-content/uploads/2024/06/14-10-150x90.jpg)
KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!
![Tomato-Price](https://www.udayavani.com/wp-content/uploads/2024/06/Tomato-Price-150x90.jpg)
Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ
![ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್](https://www.udayavani.com/wp-content/uploads/2024/05/ASHOK-S-150x97.jpg)
ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್
![Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆSiddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ](https://www.udayavani.com/wp-content/uploads/2024/05/HDK-10-150x104.jpg)
Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.