ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ ವ್ಹೀಲಿಂಗ್‌ ಕಿರಿಕಿರಿ

ಜಾಣ ಕುರುಡು ನೀತಿ ಅನುಸರಿಸುತ್ತಿರುವ ಜಿಲ್ಲಾ ಪೊಲೀಸ್‌ ಇಲಾಖೆ

Team Udayavani, Jun 8, 2019, 11:00 AM IST

kolar-tdy-1..

ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ ವ್ಹೀಲಿಂಗ್‌ ಮಾಡುತ್ತಿರುವ ಯುವಕ.

ಕೋಲಾರ: ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚೆಗೆ ಬೈಕ್‌ ವ್ಹೀಲಿಂಗ್‌ ಯುವಕರ ಹಾವಳಿ ಯಿಂದಾಗಿ ಸಾರ್ವಜನಿಕರು ಕಿರಿಕಿರಿ ಅನುಭವಿ ಸುತ್ತಿರುವುದಲ್ಲದೆ ತಮ್ಮ ಪ್ರಾಣಕ್ಕೆ ಎಲ್ಲಿ ಸಂಚಕಾರ ಬರುತ್ತದೆ ಎಂಬ ಆತಂಕದಲ್ಲಿದ್ದಾರೆ.

ಕೋಲಾರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಐದಾರು ಬೈಕ್‌ಗಳಲ್ಲಿ ಯುವಕರ ಬೈಕ್‌ ವ್ಹೀಲಿಂಗ್‌ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಇದಕ್ಕೆ ಕಡಿವಾಣ ಹಾಕಬೇಕಾದ ಪೊಲೀ ಸರು ಜಾಣ ಕುರುಡು ನೀತಿ ಅನುಸರಿಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.

ಹೆದ್ದಾರಿಯಲ್ಲಿ ಸಾಗುವ ಇತರ ವಾಹನ ಸವಾರ ರಿಗೂ ಪ್ರಾಣಕ್ಕೆ ಕುತ್ತು ತರುತ್ತಿರುವ ಯುವಕರ ವ್ಹೀಲಿಂಗ್‌ ಚಾಳಿ ಹೆದ್ದಾರಿಯ ಅಕ್ಕ ಪಕ್ಕದಲ್ಲಿರುವ ಜಮೀನಿನ ರೈತರಿಗಂತೂ ತಲೆನೋವಾಗಿ ಪರಿಣಮಿಸಿದೆ. ಯಾವಾಗ ಎಂತಹ ಅವಘಡ ಸಂಭವಿಸುತ್ತದೋ ಎಂಬ ಆತಂಕದಲ್ಲಿ ದಿನಗಳನ್ನು ಕಳೆಯುತ್ತಿರುವುದಾಗಿದೆ. ಸ್ಥಳೀಯ ಯುವಕರಷ್ಟೇ ಅಲ್ಲದೆ ಬೆಂಗಳೂರು, ಹೊಸಕೋಟೆ ಕಡೆಯಿಂದಲೂ ಯುವಕರು ಬೈಕ್‌ ವ್ಹೀಲಿಂಗ್‌ ಮಾಡಲು ಕೋಲಾ ರದ ಹೆದ್ದಾರಿಗಳಿಗೆ ಬರುತ್ತಾರೆ. ಈಗಾಗಲೇ ಫ್ಲ್ತ್ರೈ ಓವರ್‌ ಕೆಲವೆಡೆ ಇಲ್ಲದೆ ಅಪಘಾತಗಳ ಸರಣಿ ಹೆಚ್ಚಾಗಿದೆ, ಇದೀಗ ಆ ಪಟ್ಟಿಗೆ ಬೈಕ್‌ ವ್ಹೀಲಿಂಗ್‌ ಚಾಳಿ ಸೇರಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಬಂಗಾರಪೇಟೆಯಲ್ಲಿ ಓರ್ವ ಯುವಕ ಹಾಗೂ ಇತ್ತೀಚೆಗೆ ಶಿಕ್ಷಕರೊಬ್ಬರು ಬೈಕ್‌ ವ್ಹೀಲಿಂಗ್‌ ಚಾಳಿಗೆ ತಮ್ಮ ಪ್ರಾಣ ಬಲಿ ನೀಡಿರುವ ಪ್ರಕರಣಗಳು ಮಾಸುವ ಮುನ್ನವೇ ಹೆದ್ದಾರಿಯಲ್ಲಿ ಯುವಕರ ದಂಡು ಬೈಕ್‌ ವ್ಹೀಲಿಂಗ್‌ ಮಾಡಲು ಗುಂಪು ಗುಂಪಾಗಿ ಹೈವೆಗಳಿಗೆ ಲಗ್ಗೆಯಿಡುತ್ತಿರುವುದು ಸಾರ್ವಜನಿಕರಿಗೆ ಆತಂಕ ತಂದಿದೆ. ಬೈಕ್‌ ವ್ಹೀಲಿಂಗ್‌ ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣ ಗಳಲ್ಲಿ ವೈರಲ್ ಆಗುತ್ತಿದ್ದರೂ ಪೊಲೀಸ್‌ ಇಲಾಖೆ ಕ್ರಮಕ್ಕೆ ಮುಂದಾಗದಿರುವ ಬಗ್ಗೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ಹೆಚ್ಚು ಕಾಲೇಜು ಯುವಕರೇ ಬೈಕ್‌ ವ್ಹೀಲಿಂಗ್‌ ನಲ್ಲಿ ಭಾಗಿಯಾಗುತ್ತಿದ್ದು, ಇಂತಹವರಿಗೆ ಅರಿವು ಮೂಡಿಸುವ ಕೆಲಸವಾಗಬೇಕಿದೆ. ಪೋಷಕರು ಸಹ ತಮ್ಮ ಮಕ್ಕಳಿಗೆ ಈ ನಿಟ್ಟಿನಲ್ಲಿ ಬುದ್ಧಿವಾದ ಹೇಳ ಬೇಕಾಗಿದೆ. ಹೈವೆಯಲ್ಲಿ ಯುವಕರ ವ್ಹೀಲಿಂಗ್‌ ಹುಚ್ಚಾಟಕ್ಕೆ ಪೊಲೀಸರು ಬ್ರೇಕ್‌ ಹಾಕದಿದ್ದರೆ ಅತಿ ಹೆಚ್ಚು ಜೀವಗಳಿಗೆ ಕುತ್ತು ಬರುವುದರಲ್ಲಿ ಸಂದೇ ಹವೇ ಇಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ಗಂಭೀರವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.