ಯುದ್ಧಕ್ಕೂ ಮುನ್ನವೇ ಬಿಜೆಪಿ ಶಸ್ತ್ರ ತ್ಯಾಗ


Team Udayavani, May 11, 2023, 2:36 PM IST

ಯುದ್ಧಕ್ಕೂ ಮುನ್ನವೇ ಬಿಜೆಪಿ ಶಸ್ತ್ರ ತ್ಯಾಗ

ಬಂಗಾರಪೇಟೆ: 2023ರ ವಿಧಾನಸಭೆ ಚುನಾವಣೆಗೆ ಉತ್ಸಾಹದಿಂದ ಸ್ಪರ್ಧಿಸಿ ಕ್ಷೇತ್ರದಲ್ಲಿ ಮತದಾನದವರೆಗೂ ಚುರುಕಿನಿಂದ ಓಡಾಡಿ ಗೆಲುವಿನ ಹಾದಿಯಲ್ಲಿದ್ದ ಬಿಜೆಪಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ, ಕೊನೆ ಕ್ಷಣದಲ್ಲಿ ಯಾರೂ ಕಣ್ಣಿಗೂ ಕಾಣಿಸಿಕೊಳ್ಳದೇ ನಾಪತ್ತೆಯಾಗಿದ್ದರಿಂದ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರ ಹಾಗೂ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಮಂಗಳವಾರ ಸಂಜೆಯಿಂದಲೇ ಅಭ್ಯರ್ಥಿ ಕಾಣೆ: ಬಿಜೆಪಿ ಪಕ್ಷದಲ್ಲಿ ಮೂವರು ಟಿಕೆಟ್‌ ಆಕಾಂಕ್ಷಿಗಳಿದ್ದರೂ ಕೊನೆ ಕ್ಷಣದಲ್ಲಿ ಮಾಜಿ ಶಾಸಕ ಎಂ.ನಾರಾಯಣಸ್ವಾಮಿಗೆ ಹೈಕಮಾಂಡ್‌ ಟಿಕೆಟ್‌ ಘೋಷಣೆ ಮಾಡಿ ಕಣಕ್ಕಿಳಿಸಿದ್ದು, ಪ್ರಬಲ ಆಕಾಂಕ್ಷಿಗಳಾಗಿದ್ದ ಬಿ.ವಿ.ಮಹೇಶ್‌ ಹಾಗೂ ವಿ.ಶೇಷು ಶಕ್ತಿಮೀರಿ ಬಿಜೆಪಿ ಪರವಾಗಿ ಮತಪ್ರಚಾರ ಮಾಡಿ ದ್ದರು. ಬುಧವಾರ ಮತದಾನ ಪ್ರಕ್ರಿಯೆಗೂ ಮುನ್ನ ಮಂಗಳವಾರ ಸಂಜೆಯಿಂದಲೇ ಬಿಜೆಪಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಚುನಾವ ಣೆಯಿಂದ ದೂರ ವಾಗಿದ್ದು, ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಎಂ.ನಾರಾಯಣಸ್ವಾಮಿ ಅವರಿಗೆ ಎಲ್ಲಾ ಆಕಾಂಕ್ಷಿಗಳು ಸೇರಿ ಬಿಜೆಪಿ ಟಿಕೆಟ್‌ ಘೋಷಣೆ ಮಾಡುವ ಬಗ್ಗೆ ತೀರ್ಮಾನ ಕೈಗೊಂಡು ಚುನಾವಣಾ ಕಾರ್ಯಗಳನ್ನು ಸುಗಮವಾಗಿ ಪ್ರಚಾರ ನಡೆಸುತ್ತಿದ್ದರು. ಇವರ ಬೆಂಬಲಿಗರಿಗೆ ಒಲವು ಇಲ್ಲದಿದ್ದರೂ, ಕೊನೆ ಚುನಾವಣೆ ಎಂದು ಮತದಾರರು ಹಾಗೂ ಬೆಂಬಲಿಗರಿಂದ ಅನುಕಂಪ ಗಿಟ್ಟಿಸಿಕೊಳ್ಳಲು ಹಲವಾರು ತಂತ್ರ ಉಪಯೋಗಿಸಿ ಬಿಜೆಪಿ ಗೆಲ್ಲಲು ಸಾಕಷ್ಟು ಪ್ರಯತ್ನ ನಡೆಸಿದ್ದ ಎಂ.ನಾರಾಯಣಸ್ವಾಮಿ ಕೊನೆ ಕ್ಷಣದಲ್ಲಿ ಆರ್ಥಿಕ ಸಂಪನ್ಮೂಲದ ಕೊರತೆಯಿಂದ ಚುನಾವಣೆ ನಡೆಸಲು ಹಿಂದೆ ಸರಿದಿರುವ ಬಗ್ಗೆ ಹೇಳುತ್ತಿದ್ದಂತೆ,ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಸಿಟ್ಟು, ಕೋಪ, ಆತಂಕ ಹೆಚ್ಚಾಗಿದೆ.

ಪಕ್ಷದ ವಿರುದ್ಧ ಕಾರ್ಯಕರ್ತರ ಆಕ್ರೋಶ: ಬಿಜೆಪಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ 2013ರ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಲೋಕಸಭೆ ಟಿಕೆಟ್‌ ನೀಡಿ ಸ್ಪರ್ಧಿಸಲು ಅವಕಾಶ ನೀಡಿತ್ತು. ಈ ಚುನಾವಣೆಯಲ್ಲಿಯೂ ಸಹ ಇದೇ ರೀತಿ ಮತದಾನಕ್ಕೂ ಮುನ್ನ ಇದೇ ರೀತಿ ಚುನಾವಣೆಯಿಂದ ಹಿಂದೆ ಸರಿದಿದ್ದರು. ಇದನ್ನು ತೀವ್ರ ಖಂಡಿಸಿ ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ ತೀವ್ರ ಹೋರಾಟ ನಡೆಸಿ ಚುನಾವಣೆ ಮಾಡಿದ್ದರು. ಇದರಲ್ಲಿ ಕಾಂಗ್ರೆಸ್‌ಗಿಂತ ಬಿಜೆಪಿಯೇ ಹೆಚ್ಚು ಮತಗಳನ್ನು ಪಡೆದಿದ್ದು ಎಲ್ಲರಿಗೂ ಗೊತ್ತಿದ್ದರೂ ಮತ್ತೇ ಏಕೆ ಬಿಜೆಪಿ ಟಿಕೆಟ್‌ ನೀಡಿದ್ದಾರೆಂದು ಬಿಜೆಪಿ ಹೈಕಮಾಂಡ್‌ ವಿರುದ್ಧ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಈ ಬಾರಿ ಟಿಕೆಟ್‌ ಘೋಷಣೆಗೂ ಮುನ್ನವೇ ಸಾಕಷ್ಟು ವದಂತಿಗಳನ್ನು ಹರಡಿತ್ತು. ಮತದಾನದ ಕೊನೆಕ್ಷಣದಲ್ಲಿ ನಾಪತ್ತೆ ಆಗುತ್ತಾರೆಂಬ ಕ್ಷೇತ್ರದ ಜನರು ಹೇಳುತ್ತಿದ್ದ ಭವಿಷ್ಯ ದಂತೆಯೇ ಚುನಾವಣೆಯಲ್ಲಿ ನಾಪತ್ತೆಯಾಗಿದ್ದಾರೆ.

ಬಿಜೆಪಿಗೆ ಭಾರೀ ಮುಖಭಂಗ: ಕೊನೆಕ್ಷಣದಲ್ಲಿ ಎಂ. ನಾರಾಯಣಸ್ವಾಮಿ ಕಾರ್ಯಕರ್ತರಿಗೆ ಕೈಗೆ ಸಿಗದೆ ದೂರ ಉಳಿದಿರುವ ಹಿನ್ನಲೆಯಲ್ಲಿ ಜೆಡಿಎಸ್‌ ಪಕ್ಷದೊಳಗೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿ ಬರುತ್ತಿದೆ. ಒಟ್ಟಿನಲ್ಲಿ ನಾರಾಯಣಸ್ವಾಮಿ ಅವರ ತಪ್ಪು ನಿರ್ಧಾರದಿಂದ ಕ್ಷೇತ್ರದಲ್ಲಿ ಬಿಜೆಪಿಗೆ ಮುಖಭಂಗ ಉಂಟಾಗಿದೆ.

ಶ್ರದ್ಧಾಂಜಲಿ ಪೋಸ್ಟರ್‌ ಹಾಕಿ ಆಕ್ರೋಶ: ಬಿಜೆಪಿ ಮರ್ಯಾದೆ ಎಲ್ಲಾ ಹೋಯ್ತು, ಬಿಜೆಪಿಗೆ ಹೇಗೆ ಮತ ಕೇಳಬೇಕು. ಮುಂದೆ ನಮ್ಮ ರಾಜಕೀಯ ಭವಿಷ್ಯ ಹಾಳಾಯಿತು ಎಂದು ಅಭ್ಯರ್ಥಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಹಲವರು ಸಾಮಾಜಿಕ ಜಾಲತಾಣದಲ್ಲಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ವಿರುದ್ಧ ಶ್ರದ್ಧಾಂಜಲಿ ಪೋಸ್ಟರ್‌ಗಳನ್ನು ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ಷೇತ್ರದಲ್ಲಿ ಕಾಣದ ಮುಖಂಡರು: ಬಿಜೆಪಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಅವರ ಹಿಂದೆ ಸರಿದಿರುವ ನಿರ್ಧಾರದಿಂದ ಅಸಮಾಧಾನಗೊಂಡ ಬಿಜೆಪಿ ಮುಖಂಡರು ಮತದಾನದ ವೇಳೆಯಲ್ಲಿ ಹೊರಗಡೆ ಎಲ್ಲೂ ಕಾಣಿಸಿಕೊಂಡಿಲ್ಲ. ಸುಮಾರು 259 ಮತಗಟ್ಟೆ ಕೇಂದ್ರಗಳ ಬಳಿ ಒಂದೇ ಒಂದು ಬಿಜೆಪಿ ಟೇಬಲ್‌ ಹಾಕಿಲ್ಲ. ಮತಗಟ್ಟೆ ಕೇಂದ್ರದೊಳಗಡೆ ಒಬ್ಬೇ ಒಬ್ಬ ಏಜೆಂಟ್‌ರು ಸಹ ಇಲ್ಲವಾಗಿತ್ತು. ಕ್ಷೇತ್ರದಲ್ಲಿ ಬಿಜೆಪಿ ಪಕ್ಷವು ನನಗೆ ಹೆಚ್ಚಿನ ಒಲವು ನೀಡಿ ಸ್ಪರ್ಧಿಸಲು ಅವಕಾಶ ನೀಡಿದ್ದು ನನ್ನ ಮಹಾಭಾಗ್ಯವಾಗಿದೆ. ಆದರೆ, ಮತದಾನಕ್ಕೂ ಮುನ್ನ ಆರ್ಥಿಕ ಸಂಪನ್ಮೂಲ ನೀಡುವಲ್ಲಿ ವಿಫ‌ಲಗೊಂಡ ಹಿನ್ನಲೆಯಲ್ಲಿ ಮತದಾನಕ್ಕೂ ಮುನ್ನ ಬೇರೆ ಪಕ್ಷಗಳಿಗೆ ಪೈಪೋಟಿ ನೀಡಲು ಪಕ್ಷದ ಕೆಲವು ಮುಖಂಡರುಗಳ ಸಹಕಾರ ಇಲ್ಲದೇ ಇರುವುದರಿಂದ ಹಿಂದೆ ಸರಿಯಲು ಕಾರಣವಾಗಿದೆ. ನಾನೂ ಯಾರ ಬಳಿಯೂ ಡೀಲ್‌ ಮಾಡಿಕೊಂಡಿಲ್ಲ. ಒಳ ಒಪ್ಪಂದವೂ ಮಾಡಿಕೊಂಡಿಲ್ಲ. – ಎಂ.ನಾರಾಯಣಸ್ವಾಮಿ, ಬಿಜೆಪಿ ಅಭ್ಯರ್ಥಿ

ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.