ಟಿಕೆಟ್‌ಗಾಗಿ ಭುಗಿಲೆದಿದ್ದ ಬಿಜೆಪಿ ಭಿನ್ನಮತ ಶಮನ


Team Udayavani, Mar 30, 2019, 3:12 PM IST

ticketgagi

ಕೋಲಾರ: ಲೋಕಸಭೆ ಕ್ಷೇತ್ರದ ಟಿಕೆಟ್‌ ಸಂಬಂಧ ಭುಗಿಲೆದ್ದಿದ್ದ ಭಿನ್ನಮತ ಶಮನ ಮಾಡುವಲ್ಲಿ ಬಿಜೆಪಿ ವರಿಷ್ಠರು ಸಫಲರಾಗಿದ್ದು, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ವಿಧಾನ ಪರಿಷತ್‌ ಮಾಜಿ ಸದಸ್ಯ ಡಿ.ಎಸ್‌.ವೀರಯ್ಯ ನಾಮಪತ್ರ ಹಿಂಪಡೆದರು.

ಬಿಜೆಪಿ ಅಭ್ಯರ್ಥಿಯಾಗಿಯೇ ಕಣಕ್ಕಿಳಿದಿದ್ದ ವೀರಯ್ಯ, ಹೈಕಮಾಂಡ್‌ ಟಿಕೆಟ್‌ ತಮಗೆ ನೀಡುತ್ತದೆ ಎಂಬ ವಿಶ್ವಾಸದೊಂದಿಗೆ ಕ್ಷೇತ್ರದಲ್ಲಿ ಓಡಾಟ ನಡೆಸಿದ್ದರು. ಅಲ್ಲದೇ, ಕೋಲಾರದಲ್ಲೇ ಕೆಲವು ತಿಂಗಳ ಹಿಂದೆಯೇ ಮನೆ ಮಾಡಿದ್ದರು.

ನನಗೆ ಟಿಕೆಟ್‌ ತಪ್ಪಿಸಲು ಸಂಸದ ಕೆ.ಎಚ್‌.ಮುನಿಯಪ್ಪ ಕೈವಾಡವೇ ಕಾರಣವಾಗಿದೆ. ಪಕ್ಷ ಟಿಕೆಟ್‌ ನೀಡದಿದ್ದಲ್ಲಿ ಪಕ್ಷೇತರನಾಗಿ ನಿಲ್ಲುತ್ತೇನೆ ಎಂದು ಘೋಷಿಸಿದ್ದರು. ಕೊನೆಗೆ ಶುಕ್ರವಾರ ತಮ್ಮ ವಕೀಲ ಸತೀಶ್‌ ಮೂಲಕ ನಾಮಪತ್ರ ಹಿಂಪಡೆದಿದ್ದಾರೆ.

ಸಂಧಾನ ಸೂತ್ರ ಸಿದ್ಧ: ನಗರ ಹೊರವಲಯದ ಅಡಿಗಾಸ್‌ ಹೋಟೆಲ್‌ನಲ್ಲಿ ಗುರುವಾರ ಸಭೆ ಸೇರಿದ್ದ ಬಿಜೆಪಿ ಮುಖಂಡರಾದ ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ, ಲಕ್ಷ್ಮಯ್ಯ, ಶ್ರೀರಾಮ್‌, ಸಿ.ಎಂ.ರಘುನಾಥ್‌, ಕೆ.ಎಸ್‌.ರಾಜೇಂದ್ರ, ವೆಂಕಟಸ್ವಾಮಿಗೌಡ, ಕಲ್ಲಪಲ್ಲಿ ಪ್ರಕಾಶ್‌, ಪ್ರಸಾದ್‌, ಗಾಂಧಿನಗರ ವೆಂಕಟೇಶ್‌ ಮತ್ತಿತರರು ವೀರಯ್ಯ ಅವರ ಮನವೊಲಿಕೆಗೆ ಹೈಕಮಾಂಡ್‌ಗೆ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಹಳೆ ಕಾರ್ಯಕರ್ತರನ್ನು ಜತೆ ಕರೆದುಕೊಂಡು, ಚುನಾವಣೆ ಎದುರಿಸುವುದರ ಜತೆಗೆ ಮುಂದಿನ ದಿನಗಳಲ್ಲಿ ವೀರಯ್ಯ ಅವರಿಗೆ ಸೂಕ್ತ ಸ್ಥಾನಮಾನ ಒದಗಿಸಲು ಹೈಕಮಾಂಡ್‌ ನೀಡಿದ ಅಭಯದಿಂದ ನಾಮಪತ್ರ ವಾಪಸ್ಸಿಗೆ ಅವರು ಒಪ್ಪಿದರು.

ಪಕ್ಷದ ಸೂಚನೆಗೆ ಬದ್ಧ: ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ 20 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ, 2004 ಮತ್ತು 2014 ರಲ್ಲಿ ಕ್ರಮವಾಗಿ 11800 ಹಾಗೂ 23 ಸಾವಿರ ಮತಗಳಿಂದ ಸೋತಿದ್ದೇನೆ. ಈ ಬಾರಿ ಜನರ ಬೆಂಬಲ ನನಗಿದ್ದು, ಗೆಲ್ಲುವ ಸಂಪೂರ್ಣ ವಿಶ್ವಾಸವಿತ್ತು ಎಂದು ತಿಳಿಸಿದರು.

ಕುತಂತ್ರ ರಾಜಕಾರಣದ ಮೂಲಕ 7 ಬಾರಿ ಗೆದ್ದು ಹೋಗಿರುವ ಮುನಿಯಪ್ಪಗೆ ಈ ಬಾರಿ ಪಾಠ ಕಲಿಸಲು ಕ್ಷೇತ್ರದ ಮತದಾರರು ಸಿದ್ಧವಾಗಿದ್ದರು. ಸುಲಭವಾಗಿ ಗೆಲುವು ಸಾಧಿಸುವ ವಿಶ್ವಾಸದೊಂದಿಗೆ ಟಿಕೆಟ್‌ ಸಿಗುವ ನಿರೀಕ್ಷೆಯಲ್ಲಿದ್ದು ನಿರಾಸೆಯಾಗಿದೆ ಎಂದು ಕಣ್ಣೀರು ಹಾಕಿದ್ದರು.

ಬಿಜೆಪಿ ಗೆಲುವಿಗೆ ಸಾಕಾರ: ಕಾಂಗ್ರೆಸ್‌ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ, ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಮಂಜುನಾಥ್‌ ಕೆ.ಎಚ್‌.ಎಂ ಸೋಲಿಸಲು ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಘೋಷಿಸುವ ಮೂಲಕ ತಿರುಗೇಟು ನೀಡಿದ್ದಾರೆ. ಮುನಿಯಪ್ಪ ವಿರೋಧಿ ಅಲೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮುಖಂಡರೇ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಕಾರಣವಾಗಲಿದ್ದಾರೆ ಎಂಬ ಮಾತುಗಳು ಕ್ಷೇತ್ರದಲ್ಲಿ ಪ್ರತಿಧ್ವನಿಸುತ್ತಿವೆ.

ಬಿಜೆಪಿ ಟಿಕೆಟ್‌ ಪಡೆದಿರುವ ಮುನಿಸ್ವಾಮಿ, ಈಗಾಗಲೇ ಕಾಂಗ್ರೆಸ್‌ ಭಿನ್ನಮತಿಯ ನಾಯಕರೊಂದಿಗೆ ಒಂದು ಸುತ್ತು ಮಾತುಕತೆ ನಡೆಸಿದ್ದಾರೆ. ಪ್ರಚಾರ ತಂತ್ರಗಳ ಕುರಿತು ಅತೃಪ್ತ ಮುಖಂಡರು ಬಿಜೆಪಿ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.