ಮತ ಖರೀದಿ ಮಾಡುವವರನ್ನು ಬಹಿಷ್ಕರಿಸಿ; ನ್ಯಾ.ಗೋಪಾಲಗೌಡ

ಈಗ ವ್ಯವಸ್ಥೆಯು ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕುವ ಹಂತಕ್ಕೂ ಬಂದು ನಿಂತಿದೆ.

Team Udayavani, Jul 7, 2022, 6:24 PM IST

Justice-gopal

ಕೋಲಾರ: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾರರನ್ನು ಹಣಕ್ಕೆ ಕೊಂಡುಕೊಳ್ಳುವವರನ್ನು ಚುನಾವಣೆ ವ್ಯವಸ್ಥೆಯಿಂದ ಬಹಿಷ್ಕರಿಸುವಂತ ಆಂದೋಲನವನ್ನು ಕೋಲಾರದಿಂದ ಆರಂಭಗೊಳಿಸಿ ದೇಶಾದ್ಯಂತ ಮಾಡಬೇಕಾಗಿದೆ ಎಂದು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾ. ವಿ.ಗೋಪಾಲಗೌಡ ತಿಳಿಸಿದರು.

ನಗರದ ಹೊರವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳಿಂದ ಸ್ವಾಭಿಮಾನಿ ಕೋಲಾರ ಆಂದೋಲನಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು. ಚುನಾವಣೆಯ ವ್ಯವಸ್ಥೆಯಲ್ಲಿ ಮತಗಳನ್ನು ಸರಕು ಮಾಡಿಕೊಂಡು ಜನರಿಗೆ ಹಣ ಹಂಚಿ ಖರೀದಿಸುತ್ತಿರುವ ರಾಜಕಾರಣಿಗಳು ಗೆದ್ದ ಮೇಲೆ ಅಭಿವೃದ್ಧಿ ಕೆಲಸಗಳಲ್ಲಿ ಪರ್ಸೆಂಟೇಜ್‌ ರೂಪದಲ್ಲಿ ವಸೂಲಿ ಮಾಡುತ್ತಿದ್ದಾರೆ. ಭ್ರಷ್ಟರಹಿತವಾಗಿ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೂ ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ವರ್ಗಾವಣೆಯಲ್ಲಂತೂ ಕೋಟ್ಯಂತರ ರೂ. ಹರಿದಾಡುತ್ತಿದೆ. ಎಸಿಪಿ, ಎಸ್‌ಐ, ತಹಶೀಲ್ದಾರ್‌, ಉಪನೋಂದಣಾಧಿಕಾರಿ, ಜಿಲ್ಲಾಧಿಕಾರಿಗಳು ಶಾಸಕರಿಗೆ, ಮಂತ್ರಿಗಳಿಗೆ ಕೋಟ್ಯಂತರ ಹಣ ನೀಡಿ ಆಯಕಟ್ಟಿನ ಜಾಗಕ್ಕೆ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದಾರೆ. ಈ ಅಧಿ ಕಾರಿಗಳು ಜನರಿಂದ ಹಣ ಹೀರುತ್ತಾರೆ. ಇಡೀ ಸಮಾಜ ಲಂಚಮಯವಾಗಿದೆ. ಜೈಲಿನಲ್ಲಿರಬೇಕಾದವರು ಹೊರಗಿದ್ದಾರೆ. ಖುಲಾಸೆ ಆಗಬೇಕಾದವರು ಜೈಲಿನಲ್ಲಿದ್ದಾರೆ
ಇದು ನಮ್ಮ ಸಮಾಜದ ನಿಜವಾದ ವ್ಯವಸ್ಥೆ ಎಂದರು.

ಈಗ ವ್ಯವಸ್ಥೆಯು ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕುವ ಹಂತಕ್ಕೂ ಬಂದು ನಿಂತಿದೆ. ಅವರು ಹೇದರ ಕೂಡದು. ಭ್ರಷ್ಟಾಚಾರ ಎಸಗಿರುವುದು ಗೊತ್ತಾದರೆ ಚಾಲ್ತಿಯಲ್ಲಿರುವ ಕಾಯ್ದೆ ಬಳಸಿಕೊಂಡು ಜನಪ್ರತಿನಿಧಿಗಳನ್ನು ಅನರ್ಹಗೊಳಿಸಬೇಕು ಎಂದರು. ಸಮಾನ ಮನಸ್ಕರ ಸಂಘಟನೆಯ ಮುಖಂಡರಾದ ಕೋಟಿಗಾನಹಳ್ಳಿ ರಾಮಯ್ಯ ಮಾತನಾಡಿ, ಸ್ವಾಭಿಮಾನಿ ಕೋಲಾರ ಆಂದೋಲನದ ಮೂಲಕ ಭ್ರಷ್ಟ ರಹಿತವಾದ ಚುನಾವಣಾ ವ್ಯವಸ್ಥೆ ಬೇಕೆಂಬ ಕೂಗು ಕೋಲಾರದಿಂದಲೇ ಆರಂಭವಾಗುತ್ತಿರುವುದಕ್ಕೆ ಕಾರಣ ಕೋಲಾರದ ಜನ ಮೂಲತಃ ಸ್ವಾಭಿಮಾನಿಗಳಾಗಿರುವುದೇ ಕಾರಣ ಎಂದರು.

ಮುಖಂಡ ಶ್ರೀಕೃಷ್ಣ ಮಾತನಾಡಿ, ಚುನಾವಣಾ ವ್ಯವಸ್ಥೆಯಲ್ಲಿ ಹಣ ಪಡೆದವರನ್ನು ಮತ್ತು ನೀಡಿದವರನ್ನು ಮತದಾರರ ಪಟ್ಟಿಯಿಂದಲೇ ವಜಾಗೊಳಿಸುವಂತ ಕಾನೂನು ಜಾರಿಯಾಗಬೇಕೆಂದರು.

ಮುಖಂಡ ಯಲವಾರ ಸೊಣ್ಣೇಗೌಡ, ಪತ್ರಕರ್ತ ಕೆ.ಎಸ್‌ ಗಣೇಶ್‌, ಜನವಾದಿ ವಿ.ಗೀತಾ ಮಾತನಾಡಿದರು. ಡಾ.ಉದಯಕುಮಾರ್‌, ಜೆಪಿ ವೇದಿಕೆ ದಯಾನಂದ್‌, ರೆಡ್‌ಕ್ರಾಸ್‌ ಛೇರ್ಮನ್‌ ಗೋಪಾಲಕೃಷ್ಣ, ನಗರಸಭೆ ಮಾಜಿ ಸದಸ್ಯ ಸಲ್ಲಾವುದ್ದೀನ್‌ ಬಾಬು, ಅಬ್ಬಣಿ ಶಿವಪ್ಪ, ಗಾಂ ಧಿನಗರ ನಾರಾಯಣಸ್ವಾಮಿ, ಟಿ.ವಿಜಿಕುಮಾರ್‌, ವಕೀಲ ಸತೀಶ್‌, ಮಂಜುನಾಥ್‌ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.