ಆಲಂಬಗಿರಿಯಲ್ಲಿ ವೈಭವದ ಬ್ರಹ್ಮರಥೋತ್ಸವ


Team Udayavani, Apr 20, 2019, 11:03 AM IST

2

ಕೋಲಾರ: ಜಿಲ್ಲೆಯ ಆಲಂಬಗಿರಿ ಗ್ರಾಮದಲ್ಲಿರುವ ಪುರಾಣ ಪ್ರಸಿದ್ಧ ಕಲ್ಕಿ ಲಕ್ಷ್ಮಿವೆಂಕಟರಮಣಸ್ವಾಮಿ ಬ್ರಹ್ಮ ರಥೋತ್ಸವವು ವಿಕಾರಿನಾಮ ಸಂವತ್ಸರದ ಚೈತ್ರ ಮಾಸದ ಹುಣ್ಣಿಮೆಯಂದು ವೈಭವವಾಗಿ ನಡೆಯಿತು.

ರಥೋತ್ಸವದ ಸಂದರ್ಭದಲ್ಲಿ ಆಕಾಶದಲ್ಲಿ ಬಂದ ಗರುಡಪಕ್ಷಿ ರಥವನ್ನು ಪ್ರದಕ್ಷಿಣೆ ಮಾಡಿ ಭಕ್ತರಿಗೆ ದರ್ಶನವನ್ನು ನೀಡಿತು. ನಂತರ ಗೋವಿಂದ, ಗೋವಿಂದ ಎಂದು ಸ್ಮರಿಸುತ್ತಾ ಸಹಸ್ರಾರು ಭಕ್ತರು ಬೃಹತ್‌ ರಥವನ್ನು ಎಳೆದು ಕೃತಾರ್ಥರಾದರು.

ರಥೋತ್ಸವದ ಅಂಗವಾಗಿ ದೇವಾಲಯವನ್ನು ವಿಶೇಷವಾಗಿ  ಅಲಂಕರಿಸಲಾಗಿತ್ತು. ಬೆಳಗ್ಗಿನಿಂದಲೇ ದೂರದ ಊರಿನ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದರು. ಕೈವಾರದಿಂದ ಅಲಂಕೃತ ಪಲ್ಲಕ್ಕಿಯಲ್ಲಿ ಸದ್ಗುರು ತಾತಯ್ಯನವರ ಉತ್ಸವ ಮೂರ್ತಿಯನ್ನು ತಂದು, ಬ್ರಹ್ಮ ರಥೋತ್ಸವದ ಅಂಗವಾಗಿ ದೇವಾಲಯದ ಪ್ರಾಂಗಣದಲ್ಲಿರುವ ಕಲ್ಯಾಣ ಮಂಟಪದಲ್ಲಿ ಗುರುಗಳ ವತಿಯಿಂದ ಶ್ರೀಕೃಷ್ಣ ಗಂಧೋತ್ಸವ ವಿಶೇಷ ಸೇವೆಯನ್ನು ಶ್ರೀಯೋಗಿನಾರೇಯಣ ಮಠದ ಧರ್ಮಾ ಕಾರಿ
ಡಾ.ಎಂ.ಆರ್‌.ಜಯರಾಮ್‌ ದಂಪತಿಗಳು ಶ್ರದ್ಧಾಭಕ್ತಿಗಳಿಂದ ನೇರವೇರಿಸಿದರು. ಶ್ರೀಕೃಷ್ಣ ಗಂಧೋತ್ಸವ ಸೇವೆಯ ನಂತರ ಆಸ್ಥಾನ ಸೇವೆಯನ್ನು ನೇರವೇರಿಸಿ, ಅಲಂಕೃತಗೊಂಡಿದ್ದ ರಥಕ್ಕೆ ಶ್ರೀಭೂನೀಳಾ ಸಮೇತ ಶ್ರೀಲಕ್ಷಿ ವೆಂಕಟರಮಣ ಸ್ವಾಮಿಯ ಉತ್ಸವ ಮೂರ್ತಿಗಳನ್ನು ಉತ್ಸವ ಪಲ್ಲಕ್ಕಿಯಲ್ಲಿ ವೇದ ಘೋಷದಲ್ಲಿ ಕರೆತರ ಲಾಯಿತು. ರಥದಲ್ಲಿ ದೇವರನ್ನು ಇಡುತ್ತಿದ್ದಂತೆಯೇ ಗೋವಿಂದ ನಾಮಸ್ಮರಣೆ ಮುಗಿಲು ಮುಟ್ಟಿತು. ಭಕ್ತರು ತೇರು ಬಾಳೆಹಣ್ಣು, ಧವನ ತೇರಿಗೆ ಅರ್ಪಿಸಿದರು.

ನೀರು ಮಜ್ಜಿಗೆ ವಿತರಣೆ: ಬಿಸಿಲಿನ ಬೇಗೆಯನ್ನು ತಣಿಸಲು ಸುತ್ತಮುತ್ತಲಿನ ಗ್ರಾಮಸ್ಥರು ಎತ್ತಿನಬಂಡಿಗಳಲ್ಲಿ ಮತ್ತು ಟ್ರ್ಯಾಕ್ಟರ್‌ಗಳಲ್ಲಿ ಮಜ್ಜಿಗೆ, ಪಾನಕ ಕೊಸಂಬರಿ ಹಂಚುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಉಚಿತ ನೀರಿನ ಪ್ಯಾಕೆಟ್‌ಗಳನ್ನು ಸಹ ಹಂಚುತ್ತಿದ್ದರು. ನಾದಸ್ವರ, ತಮಟೆ ವಾದ್ಯದೊಂದಿಗೆ ರಥೋತ್ಸವವು ಸಾಗಿತು.

ವಿವಿಧ ವಾಹನೋತ್ಸವ: 11 ದಿನಗಳು ನಡೆಯುವ ಈ ಬ್ರಹ್ಮ ರಥೋತ್ಸವ ಕೈಂಕರ್ಯಗಳು ಶ್ರೀರಾಮ  ನವಮಿ ಯಿಂದ ಆರಂಭವಾಗಿ ಅಂಕುರಾರ್ಪಣೆ, ಧ್ವಜಾರೋಹಣ ಕಾರ್ಯಕ್ರಮಗಳು ನಡೆಯುತ್ತದೆ. ನಂತರದ ದಿನಗಳಲ್ಲಿ, ಸಿಂಹವಾಹನೋತ್ಸವ, ಹನುಮಂತವಾಹನೋತ್ಸವ, ಶೇಷವಾಹನೋತ್ಸವ, ಸೂರ್ಯಪ್ರಭವಾಹನೋತ್ಸವ, ಗರುಡೋತ್ಸವ, ಗಜವಾಹನೋತ್ಸವ ಹೀಗೆ ಹಲವಾರು ವಿಶೇಷ ವಾಹನಗಳ ಸೇವೆಯನ್ನು ಸ್ವಾಮಿಗೆ ಸಲ್ಲಿಸಲಾಯಿತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.