ಮಾವು ಮಾರ್ಕೆಟಲ್ಲಿ ಕಮಿಷನ್‌ ದಂಧೆಗೆ ಕಡಿವಾಣ ಹಾಕಿ

30ಕ್ಕೆ ಇಂದ್ರಭವನ್‌ ವೃತ್ತ ಬಂದ್‌ ಮಾಡಿ ಪ್ರತಿಭಟನೆಗೆ ರೈತ ಸಂಘ ನಿರ್ಧಾರ

Team Udayavani, May 27, 2019, 9:09 AM IST

KOLAR-TDY-2..

ಶ್ರೀನಿವಾಸಪುರ ತಾಲೂಕಿನ ರೋಜಾರ್‌ನಹಳ್ಳಿ ಗೇಟ್‌ನಲ್ಲಿ ನಡೆದ ರೈತ ಸಂಘದ ಸಭೆಯಲ್ಲಿ ಭಾಗವಹಿಸಿದ್ದ ರೈತ ಮುಖಂಡರು.

ಶ್ರೀನಿವಾಸಪುರ: ಮಾವು ಮಾರಾಟದಲ್ಲಿ ರೈತರನ್ನು ವಂಚನೆ ಮಾಡುತ್ತಿರುವ ದಲ್ಲಾಳಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ರಾತ್ರಿ ಹರಾಜು ನಿಲ್ಲಿಸಬೇಕು. ಬಿಳಿಚೀಟಿ, ಕಮಿಷನ್‌ ದಂಧೆಗೆ ಕಡಿವಾಣ ಹಾಕಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮೂಲ ಸೌಕರ್ಯ ಒದಗಿಸಲು ಮೇ 30ರಂದು ಹೋರಾಟ ಮಾಡಲಾಗುವುದು ಎಂದು ರೈತ ಸಂಘ ತಿಳಿಸಿದೆ.

ರೋಜಾರ್‌ನಹಳ್ಳಿ ಗೇಟ್‌ನಲ್ಲಿ ನಡೆದ ರೈತ ಸಂಘದ ಸಭೆಯಲ್ಲಿ ಮಾತನಾಡಿ, ಗುರುವಾರ ಪಟ್ಟಣದ ಇಂದ್ರಭವನ್‌ ವೃತ್ತ ಬಂದ್‌ ಮಾಡುವ ನಿರ್ಧಾರ ಮಾಡಲಾಗಿದ್ದು, ರೈತರು ಸೇರಿ ನ್ಯಾಯಕ್ಕಾಗಿ ಹೋರಾಡಬೇಕು ಎಂದು ಸಲಹೆ ನೀಡಿದರು.

ಬಿಳಿ ಚೀಟಿ ದಂಧೆ: ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಮಾವಿಗೆ ಪ್ರಸಿದ್ಧಿಯಾಗಿರುವ ಶ್ರೀನಿವಾಸಪುರ ಮಾರುಕಟ್ಟೆಯಲ್ಲಿ ದಲ್ಲಾಳಿಗಳದ್ದೇ ಆರ್ಭಟ. ಅಮಾಯಕ ರೈತರನ್ನು ವಂಚನೆ ಮಾಡುವ ದೊಡ್ಡ ಜಾಲವೇ ಇದೆ. ಸರ್ಕಾರದ ಆದೇಶದಂತೆ ಕಡ್ಡಾಯವಾಗಿ ಮಂಡಿ ಪರವಾನಗಿ ಇರುವ ಚೀಟಿಯನ್ನು ಕೊಡಬೇಕಾದ ಮಾಲಿಕರು, ಬಿಳಿಚೀಟಿ ನೀಡಿ ಕಮಿಷನ್‌ಅನ್ನು ರಾಜಾರೋಷವಾಗಿ ತೆಗೆದುಕೊಳ್ಳುತ್ತಿದ್ದರೂ ಅಧಿಕಾರಿಗಳು ಕ್ರಮಕೈಗೊಳ್ಳುತ್ತಿಲ್ಲ ಎಂದು ದೂರಿದರು.

ವಿಶ್ರಾಂತಿ ಕೊಠಡಿ ಇಲ್ಲ: ಜೊತೆಗೆ ಸಾವಿರಾರು ಕೋಟಿ ರೂ. ವ್ಯವಹಾರ ನಡೆಯುವ ಮಾರುಕಟ್ಟೆಯಲ್ಲಿ ಭದ್ರತಾ ಸಿಬ್ಬಂದಿ ಇಲ್ಲ. ಸಿಸಿ ಕ್ಯಾಮೆರಾ ಹಾಗೂ ಪೊಲೀಸ್‌ ವ್ಯವಸ್ಥೆಯಿಲ್ಲ. ಮಾರುಕಟ್ಟೆಯಲ್ಲಿ ಆಗುವ ಅನಾಹುತಗಳ ಬಗ್ಗೆ ಕೇಳುವವರು ಇಲ್ಲ. ಇನ್ನು ಮಾರುಕಟ್ಟೆಗೆ ಆಗಮಿಸುವ ರೈತರಿಗೆ ನೀರು, ಶೌಚಾಲಯ, ಊಟದ ವ್ಯವಸ್ಥೆ, ವಿಶ್ರಾಂತಿ ಕೊಠಡಿ ಇಲ್ಲದೆ ಮಾವು ಮಾರಾಟ ಮಾಡುವವರೆಗೆ ಸೊಳ್ಳೆಗಳಿಂದ ಕಚ್ಚಿಸಿಕೊಂಡು ರೈತರು ರೋಗಗಳಿಗೆ ತುತ್ತಾಗಬೇಕಾದೆ ಎಂದು ಹೇಳಿದರು.

ಜಿಲ್ಲಾಡಳಿತಕ್ಕೆ ಮನವಿ: ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್‌ ಮಾತನಾಡಿ, ಶ್ರೀನಿವಾಸಪುರ ಕೃಷಿ ಉತ್ಪನ್ನ ಮಾರುಕಟ್ಟೆ ಮಾವಿನ ಸುಗ್ಗಿಯ ಸಮಯದಲ್ಲಿ ಅಧಿಕಾರಿಗಳಿಗೆ ಹಾಗೂ ದಲ್ಲಾಳಿಗಳಿಗೆ ಚಿನ್ನದ ಮೊಟ್ಟೆ ಇಡುವ ಮಾರುಕಟ್ಟೆಯಾಗಿದೆ ಎಂದು ಹೇಳಿದರು.

ರೈತರ ಹೆಸರಿನಲ್ಲಿ ಲಕ್ಷಾಂತರ ರೂ. ಲೂಟಿ ಮಾಡುವ ಕಾಯಕವೇ ಹೊರತು, ಮೂಲ ಸೌಕರ್ಯ, ರೈತರನ್ನು ಸಂರಕ್ಷಣೆ ಮಾಡುತ್ತಿಲ್ಲ. ಕಷ್ಟಾಪಟ್ಟು ಬೆಳೆದ ಬೆಳೆ ಮಾರುಕಟ್ಟೆಗೆ ತಂದರೆ ಅದನ್ನು ಕಾಲಕಸದಂತೆ ಕಾಣುವ ದಲ್ಲಾಳಿಗಳು ಅವರ ತಾಳಕ್ಕೆ ತಕ್ಕಂತೆ ಕುಣಿಯುವ ಅಧಿಕಾರಿಗಳ ಮಧ್ಯೆ ನಲುಗಿರುವ ರೈತರ ರಕ್ಷಣೆಗಾಗಿ ಜಿಲ್ಲಾಡಳಿತ ಕ್ರಮ ವಹಿಸಬೇಕಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾಧ್ಯಕ್ಷೆ ಎ.ನಳಿನಿ, ತಾಲೂಕು ಅಧ್ಯಕ್ಷ ತೆರ್ನಹಳ್ಳಿ ಆಂಜಿನಪ್ಪ, ಹಸಿರು ಸೇನೆ ಅಧ್ಯಕ್ಷ ಆಚಂಪಲ್ಲಿ ಗಂಗಾಧರ, ಹೊಸಹಳ್ಳಿ ಚಂದ್ರಪ್ಪ, ಬಂಗವಾದಿ ನಾಗರಾಜಗೌಡ, ಮುನಿಯಪ್ಪ, ತೆರ್ನಹಳ್ಳಿ ರಮೇಶ್‌, ನಾಗರಾಜ, ವೆಂಕಿ, ರಾಯಲ್ಪಾಡು ಹರೀಶ್‌, ಪುತ್ತೇರಿ ರಾಜು ಮುಂತಾದವರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.