ಕೋಟಿಲಿಂಗ ಶಾಂತಿಗೆ ಭಂಗ ತಂದ್ರೆ ಕ್ರಮ


Team Udayavani, Mar 2, 2019, 7:16 AM IST

kotilin.jpg

ಬಂಗಾರಪೇಟೆ: ಇಲ್ಲಿನ ಕಮ್ಮಸಂದ್ರ ಕೋಟಿಲಿಂಗ ದೇಗುಲದ ಪಟ್ಟಕ್ಕಾಗಿ ಕಿತ್ತಾಟ ಮತ್ತೆ ಶುರುವಾಗಿದೆ. ಸಂಸದ ಕೆ.ಎಚ್‌.ಮುನಿಯಪ್ಪ ಅವರ ಸಂಧಾನ ಸಭೆ ನಂತರ ಮತ್ತೆ ಶುಕ್ರವಾರ ಪೊಲೀಸ್‌ ಡಿವೈಎಸ್‌ಪಿ ಪರಮೇಶ್ವರ ಹೆಗಡೆ ಎರಡೂ ಕಡೆಯವರನ್ನು ಕರೆಸಿ ಶಾಂತಿಭಂಗ ಮಾಡದಂತೆ ಖಡಕ್‌ ಎಚ್ಚರಿಕೆ ನೀಡಿದರು.

ಮಾ.2ರಿಂದ 6ರವರೆಗೆ ಮಹಾಶಿವರಾತ್ರಿ ಅಂಗವಾಗಿ ಐದು ಜನರ ನೇತೃತ್ವದಲ್ಲಿ ಎಲ್ಲಾ ಪೂಜಾ ಕಾರ್ಯಗಳು ದೇಗುಲದಲ್ಲಿ ನಡೆಯಬೇಕಾಗಿದೆ. ಇದರಲ್ಲಿ ಬೇರೆಯವರು ಯಾರೇ ಹಸ್ತಕ್ಷೇಪ ಮಾಡಿದರೂ ಪೊಲೀಸ್‌ ಬಂದೋಬಸ್ತ್ನಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳೊಂದಿಗೆ ಮಹಾಶಿವರಾತ್ರಿ ಜಾತ್ರೆ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು. 

ಎರಡೂ ಗುಂಪುಗಳ ವಾದ -ವಿವಾದ ಆಲಿಸಿದ ನಂತರ ಮಾತನಾಡಿದ ಡಿವೈಎಸ್‌ಪಿ ಪರಮೇಶ್ವರ್‌ ಹೆಗಡೆ, ದೇಗುಲದಲ್ಲಿ ಮಹಾಶಿವರಾತ್ರಿ ಆಚರಣೆ ಮಾಡಲು ದೇಗುಲದ ಟ್ರಸ್‌ ಅಧ್ಯಕ್ಷ ಕೆ.ಎನ್‌.ನಾರಾಯಣಮೂರ್ತಿ, ಕಾರ್ಯದರ್ಶಿ ಕೆ.ವಿ.ಕುಮಾರಿ, ಧರ್ಮಾಧಿಕಾರಿ ಡಾ.ಶಿವಪ್ರಸಾದ್‌, ದೇಗುಲದ ಪ್ರಧಾನ ಅರ್ಚಕ ವೆಂಕಟಾಚಲಪತಿ ಹಾಗೂ ವೇಣುಗೋಪಾಲ್‌ರ ನೇತೃತ್ವದಲ್ಲಿ ಮಾತ್ರ ನಡೆಯಬೇಕೆಂದು ಸೂಚನೆ ನೀಡಿದರು.
 
ಸ್ವಾಮೀಜಿಗಳು ಲಿಂಗೈಕ್ಯರಾದ ನಂತರ ಯಾರ ಗಮನಕ್ಕೂ ತರದೇ ಸ್ವಾಮೀಜಿಗಳ ಸಹೋದರ ಕೆ.ಎನ್‌.ನಾರಾಯಣಮೂರ್ತಿ ಟ್ರಸ್ಟ್‌ ಅಧ್ಯಕ್ಷರಾಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಡಾ.ಶಿವಪ್ರಸಾದ್‌, ಮಾತನಾಡುವ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಲು ಪ್ರಯತ್ನ ಮಾಡಿದಾಗ ಡಿವೈಎಸ್‌ಪಿ ಪರಮೇಶ್ವರ್‌ ಹೆಗಡೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು, ನೀವೊಬ್ಬ ವೈದ್ಯರಾಗಿ ವಲ್ಗರ್‌ ಭಾಷೆ ಮಾತನಾಡಬಾರೆದೆಂದು ಎಚ್ಚರಿಕೆ ನೀಡಿದರು.

 ಜಾತ್ರೆ ನಡೆಯುವ ಆರು ದಿನಗಳ ಕಾಲ ದೇಗುಲದ ಪ್ರವೇಶ, ವಾಹನಗಳ ನಿಲುಗಡೆ, ಕ್ಯಾಮರಾ ಬಳಸುವುದು ಸೇರಿ  ದೇವಾಲಯದಲ್ಲಿ ನಡೆಯುವ ಎಲ್ಲಾ ಸೇವೆಗಳನ್ನು ಶ್ರೀಗಳ ಜ್ಞಾಪಕಾರ್ಥವಾಗಿ ಉಚಿತವಾಗಿ ನೀಡಬೇಕೆಂದು ಟ್ರಸ್ಟ್‌ ತೀರ್ಮಾನ ಕೈಗೊಂಡಿದೆ. ಈ ಬಗ್ಗೆ ಹಾಗೂ ಜಾತ್ರೆ ಸಮಯದಲ್ಲಿ ಎರಡೂ ಗುಂಪುಗಳು ನಡೆದುಕೊಳ್ಳುವ ಬಗ್ಗೆ ಜಂಟಿ ಹೇಳಿಕೆಯನ್ನು ಪೊಲೀಸ್‌ ಇಲಾಖೆ ಸಿದ್ಧಪಡಿಸಿದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಡಾ.ಶಿವಪ್ರಸಾದ್‌, ತಾನೇ ಬರವಣಿಗೆಯಲ್ಲಿ ಬರೆದುಕೊಡುತ್ತೇನೆ. ಪೊಲೀಸ್‌ ಇಲಾಖೆ ಬರೆದಿರುವ ಹೇಳಿಕೆಯಲ್ಲಿ ಸಹಿ ಮಾಡುವುದಿಲ್ಲ ಎಂದು ತಿರಸ್ಕಾರ ಮಾಡಿದರು.

ದೇವಾಲಯ ಆರಂಭವಾದಾಗಿನಿಂದ ಸ್ವಾಮೀಜಿಗಳು ಶಿವಪಾರ್ವತಿ ಕಲ್ಯಾಣೋತ್ಸವ ನಡೆಸಲು ಉತ್ಸವ ಮೂರ್ತಿಗಳನ್ನು ಸ್ಥಾಪನೆ ಮಾಡಿದ್ದಾರೆ. ಆದರೆ, ಶ್ರೀಗಳ ಪುತ್ರ ಶಿವಪ್ರಸಾದ್‌ ಹೊಸ ಉತ್ಸವ ಮೂರ್ತಿ ತಂದಿರುವುದರ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕೆ.ವಿ.ಕುಮಾರಿ, ಹಳೆ ಪದ್ಧತಿಯಲ್ಲಿ ಉತ್ಸವ ಮೂರ್ತಿಗಳ ಆರಾಧನೆಯಾಗಬೇಕೆಂದು ಪಟ್ಟುಹಿಡಿದರು. ಇದಕ್ಕೆ ಸಭೆಯಲ್ಲಿ ಸ್ವಾಮೀಜಿಗಳು ಉಪಯೋಗಿಸುತ್ತಿದ್ದ ಉತ್ಸವ ಮೂರ್ತಿಗಳನ್ನೇ ಪೂಜಿಸಲು ತೀರ್ಮಾನಿಸಿದರು.

ಸಭೆಯಲ್ಲಿ ಜಿಪಂ ಮಾಜಿ ಸದಸ್ಯ ರಾಮಚಂದ್ರಪ್ಪ, ಬೆಂಗಳೂರು ನ್ಯೂ ಬಾಲ್ಡವಿನ್‌ ಶಾಲೆ ಮುಖ್ಯಸ್ಥ ವೇಣುಗೋಪಾಲ್‌, ಕಮ್ಮಸಂದ್ರ ಗ್ರಾಪಂ ಅಧ್ಯಕ್ಷ ನಾಗರಾಜ್‌, ಮಾಜಿ ಅಧ್ಯಕ್ಷ ಪ್ರಸಾದ್‌, ದಲಿತ ಮುಖಂಡ ಹೂವರಸನಹಳ್ಳಿ ರಾಜಪ್ಪ, ತಾಪಂ ಮಾಜಿ ಉಪಾಧ್ಯಕ್ಷ ಒ.ಎಂ.ಗೋಪಾಲ್‌, ಕಪಾಲಿ ಶಂಕರ್‌ ಮತ್ತಿತರರಿದ್ದರು.

ಸಭೆ ನಡೆದಿದ್ದು ಏಕೆ?: ಉತ್ತರಾಧಿಕಾರಿ ಕೆ.ವಿ.ಕುಮಾರಿ ಹಾಗೂ ಧರ್ಮಾಧಿಕಾರಿ ಡಾ.ಶಿವಪ್ರಸಾದ್‌ ನಡುವೆ ಭುಗಿಲೆದ್ದ ಭಿನ್ನಮತದಿಂದಾಗಿ ಎರಡೂ ಕಡೆಯವರು ಪ್ರತ್ಯೇಕವಾಗಿ ಕರಪತ್ರ ಹಂಚುವುದರ ಮೂಲಕ ಪೈಪೋಟಿ ನಡೆಸುತ್ತಿದ್ದರು. ಹೀಗಾಗಿ ದೇವಾಲಯದಲ್ಲಿ ಅಶಾಂತಿ ಹಾಗೂ ಭಕ್ತರಿಗೆ ಕಿರಿಕಿರಿಯಾಗುವ ಸಂಭವ ಹೆಚ್ಚಾಗಿರುವುದರಿಂದ ಪೊಲೀಸ್‌ ಎಸ್ಟಿ ರೋಹಿಣಿ ಕಟೋಚ್‌ ಸೂಚನೆ ಮೇರೆಗೆ ಪೊಲೀಸ್‌ ಡಿವೈಎಸ್‌ಪಿ ಪರಮೇಶ್ವರ ಹೆಗಡೆ ಸಭೆ ನಡೆಸಿದರು. 

10 ಹುಂಡಿಗಳ ಬೀಗ ಒಡೆದ ಶಿವಪ್ರಸಾದ್‌: ದೇವಾಲಯದಲ್ಲಿ ಪ್ರತಿ 2 ತಿಂಗಳಿಗೊಮ್ಮೆ ಹುಂಡಿಗಳನ್ನು ತೆರೆಯುವ ಸಂಪ್ರದಾಯವಿದೆ. ದೇಗುಲದ 10 ಹುಂಡಿಗಳ ಬೀಗಗಳು ಕಾರ್ಯದರ್ಶಿ ಕೆ.ವಿ.ಕುಮಾರಿ ಬಳಿ ಇದ್ದರೂ ಏಕಾಏಕಿಯಾಗಿ ಯಾರ ಗಮನಕ್ಕೂ ತರದೇ ಧರ್ಮಾಧಿಕಾರಿ ಡಾ.ಶಿವಪ್ರಸಾದ್‌ ಗುರುವಾರ ಮಧ್ಯರಾತ್ರಿ ಹುಂಡಿ ಬೀಗ ಒಡೆದು ಹಣ ದೋಚಿದ್ದಾರೆಂದು ಕೆ.ವಿ.ಕುಮಾರಿ ದೂರಿದರು. ಈ ಕುರಿತು ಜಾತ್ರೆ ನಡೆಸಲು ಹಣ ಇಲ್ಲದೇ ಇರುವುದರಿಂದ ತಾವೇ ಹುಂಡಿಗಳನ್ನು ಒಡೆದಿರುವುದಾಗಿ ಶಿವಪ್ರಸಾದ್‌ ಸ್ಪಷ್ಟಪಡಿಸಿದಾಗ, ಸಭೆಯಲ್ಲಿದ್ದವರು ತೀವ್ರ ತರಾಟೆಗೆ ತೆಗೆದುಕೊಂಡರು.

ಸಭೆಯಲ್ಲಿ ಕೇಳಿಬಂದ ಸಲಹೆ ಇದು!: ಟ್ರಸ್ಟ್‌ನ ಜನ ಬಿಟ್ಟು 6ನೇ ವ್ಯಕ್ತಿಯಾಗಿ ದೇವಾಲಯದ ಆಡಳಿತದಲ್ಲಿ ಯಾರೇ ಹಸ್ತಕ್ಷೇಪ ಮಾಡಿದ್ದಲ್ಲಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿ ಮುಜರಾಯಿ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಾರ್ವಜನಿಕರ ಹಿತದೃಷ್ಟಿಯಿಂದ ವಹಿಸಲಾಗುವುದು. ಅಲ್ಲದೇ, ಈ ಐದೂ ಜನರು ಕಡ್ಡಾಯವಾಗಿ ಕಮ್ಮಸಂದ್ರದಿಂದ ಹೊರಹೋಗಬೇಕಾಗುತ್ತದೆ.

ಹಾಗೆಯೇ ದೇವಾಲಯದ ಆಡಳಿತದ ವಿಚಾರದಲ್ಲಿ ಡಾ.ಶಿವಪ್ರಸಾದ್‌ರ ತಂಗಿ ಕೆ.ಅನುರಾಧಾ ಯಾವುದೇ ಕಾರಣಕ್ಕೂ ಹಸ್ತಕ್ಷೇಪ ಮಾಡಬಾರದು. ಗಲಭೆ ಸೃಷ್ಟಿಸಲು ಯಾರಾದರೂ ಪ್ರಯತ್ನ ಮಾಡಿದ್ದಲ್ಲಿ ಸೆಕ್ಷನ್‌ 107ರಂತೆ ದೂರು ದಾಖಲಿಸಿ ಪೊಲೀಸ್‌ ವಶಕ್ಕೆ ಪಡೆದು ದೂರು ದಾಖಲು ಮಾಡಲಾಗುವುದು ಎಂದು ಡಿವೈಎಸ್‌ಪಿ ಪರಮೇಶ್ವರ ಹೆಗಡೆ ಎಚ್ಚರಿಸಿದರು. 

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.