ಸುಸಜ್ಜಿತ ತಂಗುದಾಣ ನಿರ್ಮಿಸಿ

ರಾಷ್ಟ್ರೀಯ ಹೆದ್ದಾರಿ 75ರ ಗೇಟ್‌ಗಳಲ್ಲಿ ಹೆದ್ದಾರಿ ದಾಟಲು ಫ್ಲೇಓವರ್‌, ಅಂಡರ್‌ಪಾಸ್‌ ಮಾಡಿ

Team Udayavani, Aug 11, 2019, 3:11 PM IST

kolar-tdy-1

ಮುಳಬಾಗಿಲಿನ ರಾ.ಹೆ. 75ರ ಅಲಾಲಸಂದ್ರ ಗೇಟ್ಲ್ಲಿ ಜೆಎಸ್‌ಆರ್‌ ಕಂಪನಿ ನಿರ್ಮಿಸಿರುವ ಅವೈಜ್ಞಾನಿಕ ತಂಗುದಾಣ.

ಮುಳಬಾಗಿಲು:ನಗರದಂಚಿನಿಂದ ಕರ್ನಾ ಟಕ ಗಡಿ ಭಾಗದವರೆಗೆ ಜೆಎಸ್‌ಆರ್‌ ಟೋಲ್ವೇಸ್‌ ಕಂಪನಿ ನಿರ್ಮಿಸಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಲವು ಕಡೆ ರಸ್ತೆ ವಿಭಜಕ ಗಳನ್ನು ಕಿತ್ತುಹಾಕಿ ಸ್ಥಳೀಯ ಜನರು, ವಾಹನ ಸವಾರರು ಅಡ್ಡಾದಿಡ್ಡಿಯಾಗಿ ನುಗ್ಗುತ್ತಿರುವ ಕಾರಣ ಅಪಘಾತಗಳು ಸಂಭವಿಸುತ್ತಿವೆ. ಅಲ್ಲದೆ, ಗೇಟ್‌ಗಳಲ್ಲಿ ಸುಸಜ್ಜಿತ ತಂಗುದಾಣ ನಿರ್ಮಿಸಿದೇ ಜನ ಪರದಾಡುವಂತಾಗಿದೆ.

ಜೆಎಸ್‌ಆರ್‌ ಟೋಲ್ವೇಸ್‌ ಕಂಪನಿಯು 2015ರಲ್ಲಿ ಮುಳಬಾಗಿಲು ನಗರದಂಚಿನಿಂದ 15 ಕಿ.ಮೀ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿ 75 ಅನ್ನು ನಿರ್ಮಿಸಿದೆ. ಚೆನ್ನೈ, ತಿರುಪತಿ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಿಗೆ ಹೆದ್ದಾರಿಯು ಸಂಪರ್ಕ ಕಲ್ಪಿಸುವುದರಿಂದ ತಾಲೂಕಿನ ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ. ಆದರೆ, ಸ್ಥಳೀಯರ ಅನುಕೂಲತೆಗೆ ಯಾವುದೇ ಕ್ರಮಕೈಗೊಂಡಿಲ್ಲ.

ಈ ಮಾರ್ಗದಲ್ಲಿ ಹಲವು ಗ್ರಾಮಗಳಿದ್ದು, ಗೇಟ್‌ಗಳ ಬಳಿ ಪ್ರಯಾಣಿಕರು ಬಿಸಿಲು, ಮಳೆ, ಗಾಳಿಯಿಂದ ಪಾರಾಗಲು ಈಗಾಗಲೇ ಸೊನ್ನವಾಡಿ ಬೈಪಾಸ್‌ ಸಮೀಪ, ನರಸಿಂಥತೀರ್ಥ, ಸೀಗೇನಹಳ್ಳಿ, ಅಲಾಲಸಂದ್ರ ಗೇಟ್, ಕಪ್ಪಲಮಡಗು, ಶ್ರೀರಂಗಪುರ, ವೆಂಕಟಾಪುರ, ಎನ್‌.ವಡ್ಡಹಳ್ಳಿ, ಪದ್ಮಘಟ್ಟ, ತಾತಿಕಲ್, ಹಳೆಕುಪ್ಪ, ನಂಗಲಿ, ಮುದಿಗೆರೆ, ಗಡ್ಡೂರು ಗೇಟ್‌ಗಳಲ್ಲಿ ಬಸ್‌ ಶೆಲ್ಟರ್‌ ನಿರ್ಮಿಸಲಾಗಿದೆ. ಆದರೆ, ಬಸ್‌ ನಿಲುಗಡೆ ಒಂದು ಕಡೆಯಾದರೆ, ಶೆಲ್ಟರ್‌ ನಿರ್ಮಿಸಿರುವುದು ಮತ್ತೂಂದು ಕಡೆಯಾಗಿರುವುದರಿಂದ ಈ ಶೆಲ್ಟರ್‌ಗಳು ಜನರ ಉಪಯೋಗಕ್ಕೆ ಬರದಂತಾಗಿವೆ.

ಸೂಕ್ತ ತಂಗುದಾಣ ನಿರ್ಮಿಸಿ: ಮಳೆ, ಬಿರು ಗಾಳಿಯಿಂದ ತಪ್ಪಿಸಿಕೊಳ್ಳಲು ಒಂದು ವೇಳೆ ಈ ಬಸ್‌ ಗೇಟ್‌ಗಳಲ್ಲಿ ನಿರ್ಮಿಸಿರುವ ತಂಗುದಾಣಗಳಲ್ಲಿ ಆಶ್ರಯಿಸಿದರೆ ಮತ್ತಷ್ಟು ಸಮಸ್ಯೆಗೆ ಸಿಲುಕುವುದು ಗ್ಯಾರಂಟಿ. ಏಕೆಂದರೆ ಈ ತಂಗುದಾಣಗಳು ವೈಜ್ಞಾನಿಕವಾಗಿದ್ದು, ಜನರಿಗೆ ಸೂಕ್ತ ರಕ್ಷಣೆ ಒದಗಿಸುವುದೇ ಇಲ್ಲ. ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಿರುವ ಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಯಾವುದೇ ಸೌಲಭ್ಯಗಳಿಲ್ಲ. ಪ್ರತಿಯೊಂದು ಗೇಟ್‌ನ ಎರಡೂ ಕಡೆಗಳಲ್ಲಿ ಸುರಕ್ಷತೆಯುಳ್ಳ ತಂಗುದಾಣ ನಿರ್ಮಾಣ ಮಾಡಲು ಜಿಲ್ಲಾಡಳಿತ, ಹೆದ್ದಾರಿ ಪ್ರಾಧಿಕಾರ ಈ ಹೆದ್ದಾರಿ ನಿರ್ಮಿಸಿದ ಕಂಪನಿಗೆ ತಿಳಿಸಬೇಕಿದೆ.

ವಾರದಲ್ಲಿ ಎರಡು ಮೂರು ಅಪಘಾತ: ಪ್ರಮುಖವಾಗಿ ಈ ಹೆದ್ದಾರಿಯಲ್ಲಿ ಕೆ.ಜಿ.ಎಫ್, ತಾಯಲೂರು ಬೈಪಾಸ್‌, ಕೆ.ಬೈಯಪಲ್ಲಿ ರಸ್ತೆ, ನರಸಿಂಥತೀರ್ಥ, ಎನ್‌.ವಡ್ಡಹಳ್ಳಿ, ನಂಗಲಿ ಗ್ರಾಮಗಳಲ್ಲಿ ಹೆದ್ದಾರಿ ಪ್ರಾಧಿಕಾರವು ಯಾವುದೇ ಫ್ಲೈಓವರ್‌ ಆಥವಾ ಅಂಡರ್‌ಪಾಸ್‌ ನಿರ್ಮಿಸದ ಕಾರಣ, ಜನರೇ ಡಿವೈಡರ್‌ ಹೊಡೆದು ನಿರ್ಮಿಸಿಕೊಂಡಿರುವ ಜಾಗದಲ್ಲಿ ಹೆದ್ದಾರಿ ದಾಟಲು ಹೋಗಿ ವಾರದಲ್ಲಿ ಎರಡು ಮೂರು ಅಪಘಾತಗಳು ಸಂಭವಿಸುತ್ತಲೇ ಇವೆ.

ಅತೀ ವೇಗವಾಗಿ ಬರುವ ವಾಹನಗಳಿಂದ ತಪ್ಪಿಸಿಕೊಳ್ಳಲು ಹೋಗಿ ಜನ ಅಪಘಾತಗಳಿಗೆ ತುತ್ತಾಗುತ್ತಿದ್ದಾರೆ. ಹಲವು ಮಂದಿ ಶಾಶ್ವತ ಅಂಗವೈಕಲ್ಯಕ್ಕೆ ತುತ್ತಾಗುತ್ತಿದ್ದಾರೆ. ತೆರಿಗೆ ಹಣದಲ್ಲಿ ರಸ್ತೆ ನಿರ್ಮಿಸಿ ಈಗ ವಾಹನಗಳಿಂದ ಟೋಲ್ ಶುಲ್ಕ ವಸೂಲಿ ಮಾಡಿದರೂ ಜನರ ಪ್ರಾಣಕ್ಕೆ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದು ವಿಪರ್ಯಾಸ.

 

● ಎಂ.ನಾಗರಾಜಯ್ಯ

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.