ನಾಗನಾಳ ಕಲ್ಲು ಗಣಿಗಾರಿಕೆ ಅನುಮೋದನೆ ರದ್ದು ಮಾಡಿ


Team Udayavani, Jun 26, 2019, 12:34 PM IST

kolar-tdy-2..

ಕೋಲಾರ ತಾಲೂಕಿನ ನಾಗನಾಳ ಸರ್ವೇ ನಂ. 42 ರಲ್ಲಿ ನೀಡಿರುವ ಕಲ್ಲು ಗಣಿಗಾರಿಕೆಯ ಅನುಮೋದನೆ ರದ್ದುಪಡಿಸಿ ಮರುಪರಿಶೀಲಿಸಬೇಕೆಂದು ಗ್ರಾಮಸ್ಥರು ತಹಶೀಲ್ದಾರ್‌ರಿಗೆ ಮನವಿ ಸಲ್ಲಿಸಿದರು.

ಕೋಲಾರ: ತಾಲೂಕಿನ ನಾಗನಾಳ ಸರ್ವೇ ನಂ.42ರಲ್ಲಿ ನೀಡಿರುವ ಕಲ್ಲುಗಣಿಗಾರಿಕೆಯ ಅನುಮೋದನೆಯನ್ನು ರದ್ದುಪಡಿಸಿ ಮರುಪರಿಶೀಲಿಸಬೇಕೆಂದು ಒತ್ತಾಯಿಸಿ ನಾಗನಾಳ ಮತ್ತು ಮೇಡಿಹಾಳ ಸುತ್ತಮುತ್ತಲಿನ ಗ್ರಾಮಸ್ಥರು ತಹಸೀಲ್ದಾರ್‌ರಿಗೆ ಮನವಿ ಸಲ್ಲಿಸಿದರು.

ಮೇಡಿಹಾಳ ಮತ್ತು ಬೆಟ್ಟಹೊಸಪುರ ಗ್ರಾಮಗಳಲ್ಲಿ ಈಗಾಗಲೇ ಜಲ್ಲಿಕ್ರಶರ್‌ಗಳು ಹಾಗೂ ಕಲ್ಲುಗಣಿ ಕ್ವಾರಿಗಳು ಸೂಕ್ತವಲ್ಲದ ಕಾರ್ಯಾಚರಣೆ ಪರಿಯು ವಾಯುಮಾಲಿನ್ಯದ ಗುಣಮಟ್ಟವನ್ನು ಅಪಾಯಕಾರಿಯಾಗಿಸಿದೆ. ಪ್ರಕೃತಿಯ ವಾತಾವರಣ ಅಸಮತೋಲನ ಆಗುವಷ್ಟರ ಮಟ್ಟಿಗೆ ಕಲುಷಿತಗೊಳಿಸಿದೆ. ಸಾರ್ವಜನಿಕರ ಸುವ್ಯವಸ್ಥೆಗೆ ಮಾರಕವಾಗಿ ಪರಿಣಮಿಸಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿದರು.

ದೀನದಲಿತರು, ಆರ್ಥಿಕವಾಗಿ ಹಿಂದುಳಿದ ಕಡು ಬಡವರಿಗೆ ಸರಕಾರ ಕಾನೂನು ಬದ್ಧವಾಗಿ ಜಮೀನು ಮಂಜೂರು ಮಾಡಿರುತ್ತಾರೆ. ಆದರೆ ಸೂಕ್ತವಲ್ಲದ ಸ್ಥಳದಲ್ಲಿ ಜಲ್ಲಿಕ್ರಶರ್‌ ಮತ್ತು ಕಲ್ಲುಗಣಿಗಾರಿಕೆಯಿಂದಾಗಿ ನಮಗೆ ನೀಡಿರುವ ಜಮೀನಿನಲ್ಲಿ ಸಾಗುವಳಿ ಮಾಡಲು ಸಾಧ್ಯವಿಲ್ಲದಂತಾಗಿದೆ.

ಕಲ್ಲುಗಣಿಗಾರಿಕೆಯಲ್ಲಿ ಅಪಾಯಕಾರಿ ನ್ಪೋಟಕಗಳನ್ನು ಸಿಡಿಸುವ ಮೂಲಕ ಗಣಿಗಾರಿಕೆ ನಡೆಸುತ್ತಿದ್ದು, ಇದರಿಂದ ಉತ್ಪತ್ತಿಯಾಗುವ ನೈಟ್ರೋಜನ್‌ ಡೈ ಆಕ್ಸೈಡ್‌, ಸಲ್ಫರ್‌ ಡೈ ಆಕ್ಸೈಡ್‌ ಮತ್ತು ಇನ್ನಿತರೆ ಸೀಸದ ಅಂಶಗಳು ಗಾಳಿಯಲ್ಲಿ ಬೆರೆಯುತ್ತ ವಾಯಮಾಲಿನ್ಯವನ್ನು ಉಂಟುಮಾಡುತ್ತಿದೆ. ಈ ಗಾಳಿಯನ್ನು ಉಸಿರಾಡುತ್ತಿರುವ ಗ್ರಾಮಸ್ಥರು ಹೃದಯ ಮತ್ತು ಶ್ವಾಸಕೋಶದ ತೊಂದರೆಗೆ ಒಳಗಾಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗಾಳಿಯಲ್ಲಿ ಬರುವ ಕಲ್ಲಿನ ಪುಡಿ ರೈತರು ಬೆಳೆದ ಬೆಳೆಗಳ ಮತ್ತು ಜಾನುವಾರುಗಳು ತಿನ್ನುವ ಹುಲ್ಲಿನ ಮೇಲೆ ಬೀಳುತ್ತಿರುವುದರಿಂದ ಜಾನುವಾರುಗಳು ಸಾವನ್ನಪ್ಪುತ್ತಿವೆ. ರೈತರು ಬೆಳೆದ ಬೆಳೆಗಳು ಕೈಗೆ ಸಿಗದೆ ಬೀದಿಪಾಲಾಗುವ ಸಂದರ್ಭ ಒದಗಿದೆ. ಇನ್ನು ಪಕ್ಕದಲ್ಲಿರುವ ಅರಣ್ಯ ಭೂಮಿಯಲ್ಲಿ ಕ್ರಷ‌ರ್‌ ಸ್ಥಾಪನೆಗೆ ಅನುಮತಿ ನೀಡಲು ಅರ್ಜಿ ಸಲ್ಲಿಸಿದ್ದು, ಅನುಮೋದನೆಯನ್ನು ನೀಡಿದೆ.

ಇದರಿಂದ ಆ ಸ್ಥಳದಲ್ಲಿ ಬೆಳೆದಿರುವ ಅಕೇಶಿಯಾ, ಹೊನ್ನೆ, ನೇರಳೆ, ಮರಗಳಿರುತ್ತವೆ. ಇದನ್ನೇ ನಂಬಿಕೊಂಡಿರುವ ಪ್ರಾಣಿ ಪಕ್ಷಿಗಳು ನಾಶವಾಗುತ್ತವೆ. ಇದಕ್ಕೆ ಸಂಬಂ—ಸಿದಂತೆ ಹಲವು ಬಾರಿ ಅಧಿಕಾರಿಗಳಿಗೆ ಮನವಿಗಳನ್ನು ಸಲ್ಲಿಸಲಾಗಿದೆ. ಇದೆಲ್ಲವೂ ಅ—ಕಾರಿಗಳಿಗೆ ತಿಳಿದಿದ್ದರೂ ಸಹ ಸಾರ್ವಜನಿಕರ ಹಿತದೃಷ್ಟಿಯಿಂದ ಗಾಳಿಗೆ ತೂರಿ ಕಲ್ಲುಗಣಿಕಾರಿಕೆಗೆ ನಾಗನಾಳ ಸರ್ವೇ ನಂ. 42 ರಲ್ಲಿ ಅನುಮೋದಿಸಿದ್ದು, ಕೂಡಲೇ ಅನುಮೋದನೆಯನ್ನು ರದ್ದುಪಡಿಸಿ ಮರುಪರಿಶೀಲಿಸಬೇಕೆಂದು ನಾಗನಾಳ ಮತ್ತು ಮೇಡಿಹಾಳ ಸುತ್ತಮುತ್ತಲಿನ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ನಿಯೋಗದಲ್ಲಿ (ಕೆ.ಡಿ.ಎಸ್‌.ಎಸ್‌) ಭೀಮವಾದ ಜಿಲ್ಲಾ ಸಂಚಾಲಕ ಮೇಡಿಹಾಳ ಚಂದ್ರಶೇಖರ್‌, ನಾಗನಾಳ ಶಂಕರ್‌, ಉರಿಗಿಲಿ ಆನಂದ್‌, ಕಲ್ಲೂರು ಆಂಜಿ, ಕೊಳಗಂಜನಹಲಿ ಚಂದ್ರಿ, ರಾಜಕಲ್ಲಹಳ್ಳಿ ಶಾಂತಕುಮಾರ್‌, ಸುನೀಲ್, ನಾಗರಾಜ್‌, ಕಲ್ಲೂರು ಚಂದ್ರು, ರಾಂಪುರ ವೆಂಕಟೇಶ್‌, ಜನ್ನಘಟ್ಟ ಹೆಚ್. ನಾರಾಯಣಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.