ಅನುಮತಿ ಇಲ್ಲದ ಜೆಡಿಎಸ್ ಸಭೆ ರದ್ದು
Team Udayavani, Oct 18, 2020, 6:01 PM IST
ಕೋಲಾರ: ಜಿಲ್ಲಾಡಳಿತದ ಅನುಮತಿ ಪಡೆಯದೇ ಜಾತ್ಯತೀತ ಜನತಾದಳ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಸಂಬಂಧ ಕರೆದಿದ್ದ ಪೂರ್ವಭಾವಿ ಸಭೆ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ರದ್ದಾದ ಘಟನೆ ನಗರದಲ್ಲಿ ಶನಿವಾರ ನಡೆಯಿತು.
ತಾಲೂಕು ಜೆಡಿಎಸ್ ಅಧ್ಯಕ್ಷರು ಚುನಾವಣಾ ಸಂಬಂಧ ಜಿಲ್ಲಾಧ್ಯಕ್ಷ ವೆಂಕಟಶಿವಾರೆಡ್ಡಿ, ಶಾಸಕರಾದ ಶ್ರೀನಿವಾಸಗೌಡ, ಗೋವಿಂದರಾಜು,ಅಭ್ಯರ್ಥಿ ಚೌಡರೆಡ್ಡಿ ನೇತೃತ್ವದಲ್ಲಿ ಈ ಸಭೆ ನಡೆಯುತ್ತದೆ ಎಂದು ತಿಳಿಸಲಾಗಿತ್ತು. ಈಹಿನ್ನಲೆಯಲ್ಲಿ ಆರ್ಟಿಒ ಕಚೇರಿ ಸಮೀಪದ ಜೆಡಿಎಸ್ ನಿವೇಶನದಲ್ಲಿ ಬೃಹತ್ ಪೆಂಡಾಲ್ ಹಾಕಿ ವೇದಿಕೆ ಸಿದ್ಧಪಡಿಸಲಾಗಿತ್ತು. ಈ ಸಭೆಗೆ ಜೆಡಿಎಸ್ನ ಹಲವಾರುಮುಖಂಡರು, ಕಾರ್ಯಕರ್ತರು ಆಗಮಿಸಿದ್ದರಾದರೂ, ಚುನಾವಣಾ ಪ್ಲೆಯಿಂಗ್ ಸ್ಕ್ಯಾಡ್ ಅಧಿಕಾರಿಗಳು ಬಂದು ಸಭೆಗೆ ಅನುಮತಿ ಪಡೆದಿರುವಿರಾಎಂದುಪ್ರಶ್ನಿಸಿದಾಗಮುಖಂಡರು ತಬ್ಬಿಬ್ಟಾದರು.
ರದ್ದಾಯಿತು: ಕೋವಿಡ್ ಮಾರ್ಗಸೂಚಿ ಪಾಲಿಸಿಲ್ಲ, ಸಭೆಗೆ ಅನುಮತಿ ಪಡೆದಿಲ್ಲ, ಸಭೆ ನಡೆಸಲು ಬಿಡೋದಿಲ್ಲ ಎಂದು ಅಧಿಕಾರಿಗಳು ತಿಳಿಸಿದಾಗಕೂಡಲೇ ಮಧ್ಯಾಹ್ನ3 ಗಂಟೆಗಾದರೂ ಅನುಮತಿ ಪಡೆದು ಸಭೆ ನಡೆಸುವ ಪ್ರಯತ್ನಕ್ಕೆ ಮುಖಂಡರು ಮುಂದಾದರು. ಶಾಸಕರು, ಮುಖಂಡರು ಒತ್ತಡ ಹಾಕಿದರೂ ಅಧಿಕಾರಿಗಳು ಅನುಮತಿ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಜೆಡಿಎಸ್ ಮುಖಂಡರಾದ ಬಾಬು ಮೌನಿ, ಬಣಕನಹಳ್ಳಿ ನಟರಾಜ್, ತೂಪಾಲ್ಲಿ ನಾರಾಯಣಸ್ವಾಮಿ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ