ರಂಜಾನ್‌ ಶಾಂತಿ, ಸೌಹಾರ್ದಯುತವಾಗಿ ಆಚರಿಸಿ

ರಂಜಾನ್‌ ಶಾಂತಿ, ಸೌಹಾರ್ದಯುತವಾಗಿ ಆಚರಿಸಿ

Team Udayavani, Jun 3, 2019, 12:25 PM IST

kolar-tdy-4..

ಮಾಸ್ತಿ ಪೊಲೀಸ್‌ ಠಾಣೆಯಲ್ಲಿ ರಂಜಾನ್‌ ಪ್ರಯುಕ್ತ ನಡೆದ ಸರ್ವಧರ್ಮಗಳ ಶಾಂತಿ ಸಭೆಯಲ್ಲಿ ಪಿಎಸ್‌ಐ ವಸಂತ್‌ ಮಾತನಾಡಿದರು.

ಮಾಸ್ತಿ: ಮುಸ್ಲಿಮರ ಪವಿತ್ರ ಹಬ್ಬ ರಂಜಾನ್‌ ಅನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಲು ಎಲ್ಲಾ ಧರ್ಮದವರು ಸಹಕರಿಸಬೇಕು ಎಂದು ಪಿಎಸ್‌ಐ ವಸಂತ್‌ ಹೇಳಿದರು.

ಗ್ರಾಮದ ಪೊಲೀಸ್‌ ಠಾಣೆಯಲ್ಲಿ ರಂಜಾನ್‌ ಪ್ರಯುಕ್ತ ಸರ್ವಧರ್ಮಗಳ ಶಾಂತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮಗಳಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬರದಂತೆ ನೋಡಿಕೊಳ್ಳುವ ಹೊಣೆ ನಮ್ಮದಾಗಿದೆ. ಹಿಂದಿನಂತೆ ಹಬ್ಬವನ್ನು ಸೌಹಾರ್ದಯುತವಾಗಿ ಆಚರಿಸಿ, ಅಹಿತಕರ ಘಟನೆಗಳಿಗೆ ಅವಕಾಶ ಕೊಡಬೇಡಿ, ಒಂದು ವೇಳೆ ಗೊಂದಲ ಅಥವಾ ಯಾವುದೇ ರೀತಿಯ ಘಟನೆಗಳು ಕಂಡು ಬಂದಲ್ಲಿ ಪೊಲೀಸ್‌ ಇಲಾಖೆ ಗಮನಕ್ಕೆ ತಂದರೆ ಈ ಬಗ್ಗೆ ಎಚ್ಚರಿಕೆ ವಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮಾಸ್ತಿ ಗ್ರಾಪಂ ಸದಸ್ಯ ಹಾಗೂ ಅಲ್ಪ ಸಂಖ್ಯಾತರ ಮುಖಂಡ ಎಂ.ಎಸ್‌.ಶೌಕತ್‌ಉಲ್ಲಾ ಬೇಗ್‌ ಮಾತನಾಡಿ, ಮಾಸ್ತಿ ಸೇರಿ ಗೊಲ್ಲಪೇಟೆ, ಕೆ.ಉಪ್ಪಾರಹಳ್ಳಿ, ಕೃಷ್ಣಾಪುರ, ನಾಗದೇನಹಳ್ಳಿ ಗ್ರಾಮಗಳ ಮುಸ್ಲಿಮರು ಮಾಸ್ತಿ ಗ್ರಾಮದ ಮಧ್ಯ ಭಾಗದಲ್ಲಿ ಜಮಾಯಿಸಿ, ನಂತರ ನಿಗದಿತ ವೇಳೆಯಲ್ಲಿ ದೇವರ ನಾಮ ಸ್ಮರಣೆ ಮಾಡಿ, ಮುಖ್ಯರಸ್ತೆ ಮೂಲಕ ಈದ್ಗಾ ಮೈದಾನಕ್ಕೆ ತೆರಳಿ ಅಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಮನೆಗಳಲ್ಲಿ ಹಬ್ಬ ಆಚರಿಸಿಕೊಳ್ಳುತ್ತಾರೆ ಎಂದು ಹೇಳಿದರು.

ಈದ್ಗಾ ಮೈದಾನಕ್ಕೆ ತೆರಳುವ ವೇಳೆ ಮುಖ್ಯ ರಸ್ತೆಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳಿಸಿ ಅನುಕೂಲ ಕಲ್ಪಿಸಿ ಹಾಗೂ ರಂಜಾನ್‌ ಹಬ್ಬ ಮುಗಿಯುವವರಿಗೂ ಗ್ರಾಮದಲ್ಲಿ ರಾತ್ರಿ ವೇಳೆ ಹೆಚ್ಚಿನ ಗಸ್ತು ಪೊಲೀಸ್‌ ವ್ಯವಸ್ಥೆ ಕಲ್ಪಿಸಿ ಕೊಡಿ ಎಂದು ಮನವಿ ಮಾಡಿದರು.

ಉರೂಸ್‌ಗೆ ಅನುಮತಿ ನೀಡಬೇಡಿ: ಮಾಸ್ತಿ ಗ್ರಾಮದಲ್ಲಿ ತಮ್ಮದೇ ಸಮುದಾಯದ ಕೆಲವು ಕುಟುಂಬಗಳು ಇದ್ದು, ಬೇರೆ ಕಡೆಯಿಂದ ಉರೂಸ್‌ ಮಾಡುವವರನ್ನು ಕರೆಸಿ ಕಾರ್ಯಕ್ರಮ ಏರ್ಪಡಿಸುತ್ತಿರುವ ಬಗ್ಗೆ ಮಾಹಿತಿ ಕೇಳಿ ಬರುತ್ತಿದ್ದು, ಉರೂಸ್‌ ಹಮ್ಮಿಕೊಳ್ಳಲು ಪೊಲೀಸ್‌ ಇಲಾಖೆ ಅನುಮತಿಗಾಗಿ ಬಂದಲ್ಲಿ ಯಾವುದೇ ಕಾರಣಕ್ಕೂ ನೀಡಬಾರದು ಎಂದು ಶಾಂತಿ ಸಭೆಯಲ್ಲಿ ಮುಸ್ಲಿಂ ಸಮುದಾಯದವರು ಮನವಿ ಮಾಡಿದರು.

ಕ್ರಮಕೈಗೊಳ್ಳಿ: ಗೊಲ್ಲಪೇಟೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ರಾತ್ರಿ ವೇಳೆ ಡಮರು ಬಾರಿಸಿಕೊಂಡು ಹೆಚ್ಚಿನ ಶಬ್ದ ಮಾಡಿ ಸುತ್ತ ಮುತ್ತಲಿನ ಕುಟುಂಬಗಳಿಗೆ ತೊಂದರೆ ನೀಡುತ್ತಿದ್ದಾನೆ. ಅಲ್ಲದೆ, ವಾಮಾಚಾರಗಳನ್ನು ಮಾಡುತ್ತಿರುವ ಬಗ್ಗೆ ತಿಳಿದು ಬಂದಿದೆ. ಈ ಬಗ್ಗೆ ಗಮನ ಹರಿಸಿ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಎಸ್‌ಐಗೆ ಮನವಿ ಮಾಡಿದರು. ಜಿಪಂ ಸದಸ್ಯ ಎಚ್.ವಿ.ಶ್ರೀನಿವಾಸ್‌, ಎಪಿಎಂಸಿ ನಿರ್ದೇಶಕ ಸಬ್ದಾರ್‌ಬೇಗ್‌, ತಾಪಂ ಮಾಜಿ ಸದಸ್ಯರಾದ ಕೆಂಭೋಡಿ ನಾರಾಯಣಪ್ಪ, ಮುನಿಕೃಷ್ಣಪ್ಪ, ಗ್ರಾಪಂ ಉಪಾಧ್ಯಕ್ಷ ಎಚ್.ವಿ. ಸತೀಶ್‌, ಸದಸ್ಯರಾದ ಎಂ.ಎನ್‌.ಮೋಹನ್‌ರಾವ್‌, ಜೆಸಿಬಿ ನಾಗರಾಜ್‌, ಕಾಂಗ್ರೆಸ್‌ ಪಕ್ಷದ ಅಲ್ಪ ಸಂಖ್ಯಾತರ ವಿಭಾಗದ ಜಿಲ್ಲಾ ಉಪಾಧ್ಯಕ್ಷ ಅಕ್ರಂಪಾಷ, ಟೆಂಟ್ವೆಂಕಟೇಶ್‌, ಎಸ್‌.ಖಲೀಲ್, ಷೇಕ್‌ ಇಮ್ರಾನ್‌, ಮುರುಗೇಶ್‌, ಅಯ್ಯಪ್ಪ, ಚಂದ್ರಪ್ಪ ದೊಡ್ಡಕಲ್ಲಹಳ್ಳಿ ವೆಂಕಟೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.