ಕೋಲಾರ : ಲಾಕ್‌ಡೌನ್‌ ಅವಧಿಯಲ್ಲಿ ಬಾಲ್ಯವಿವಾಹ ಸದ್ದು

ಸಾಂದರ್ಭಿಕ ಚಿತ್ರ

Team Udayavani, Sep 21, 2020, 4:17 PM IST

br-tdy-1

ಕೋಲಾರ: ಜಿಲ್ಲೆಯಲ್ಲಿ ಹಿಂದಿನ ವರ್ಷದಲ್ಲಿ ಪತ್ತೆಯಾಗಿದ್ದ ಬಾಲ್ಯವಿವಾಹಗಳಿಗಿಂತಲೂ ಒಂದೂವರೆ ಪಟ್ಟು ಹೆಚ್ಚು ಬಾಲ್ಯ ವಿವಾಹಗಳು ಈ ವರ್ಷದ ಕೋವಿಡ್‌-19 ಅವಧಿಯ ನಾಲ್ಕು ತಿಂಗಳುಗಳಲ್ಲಿಯೇ ಪತ್ತೆಯಾಗಿದೆ.

2019-20 ಏಪ್ರಿಲ್‌1 ರಿಂದ ಮಾರ್ಚ್‌ಅಂತ್ಯದವರೆವಿಗಿನ ಹನ್ನೆರೆಡು ತಿಂಗಳುಗಳಲ್ಲಿ 39 ಬಾಲ್ಯ ವಿವಾಹಗಳು ಕೋಲಾರ ಜಿಲ್ಲೆಯಲ್ಲಿ ಪತ್ತೆಯಾಗಿದ್ದರೆ,2020 ರ ಏಪ್ರಿಲ್‌ ನಿಂದ ಆಗಸ್ಟ್‌ವರೆಗೂ 61 ಬಾಲ್ಯ ವಿವಾಹಗಳು ಪತ್ತೆಯಾಗಿರುವುದು ವಿಶೇಷ.

ತಾಲೂಕುವಾರು: ಕೋಲಾರ ಜಿಲ್ಲೆಯಲ್ಲಿ ಏಪ್ರಿಲ್‌2020ರಿಂದ ಆಗಸ್ಟ್‌ ಅಂತ್ಯದ ವರೆಗೂ 61 ಬಾಲ್ಯ ವಿವಾಹಗಳು ಪತ್ತೆಯಾಗಿದ್ದು, ಬಂಗಾರಪೇಟೆ ತಾಲೂಕಿನಲ್ಲಿ 8, ಬೇತಮಂಗಲದಲ್ಲಿ8,ಕೋಲಾರದಲ್ಲಿ14,ಮಾಲೂರಿನಲ್ಲಿ5, ಮುಳಬಾಗಿಲಿನಲ್ಲಿ 12 ಹಾಗೂ ಶ್ರೀನಿವಾಸಪುರದಲ್ಲಿ 14 ಬಾಲ್ಯವಿವಾಹ ಪತ್ತೆ ಹಚ್ಚಲಾಗಿದೆ.

ಎರಡು ಎಫ್ಐಆರ್‌: ಪತ್ತೆಯಾಗಿರುವ 59 ಬಾಲ್ಯ ವಿವಾಹಗಳನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ನೇತೃತ್ವದ ತಂಡ ತಡೆದಿದ್ದು, ಈಗಾಗಲೇ ವಿವಾಹ ಆಗಿದ್ದ ಎರಡು ಪ್ರಕರಣಗಳಲ್ಲಿ ಎಫ್ಐಆರ್‌ ದಾಖಲಿಸಲಾಗಿದೆ. ಕೋಲಾರ ಜಿಲ್ಲೆಯ ಬೇತಮಂಗಲಠಾಣೆಹಾಗೂ ಮಾಲೂರು ತಾಲೂಕಿನ ಲಕ್ಕೂರು ವ್ಯಾಪ್ತಿಯಲ್ಲಿ ಪ್ರಕರಣಗಳು ಎಫ್ಐಆರ್‌ ದಾಖಲಾಗಿ ತನಿಖೆ ಮುಂದು ವರಿಯುತ್ತಿದೆ. ಎರಡೂ ಪ್ರಕರಣಗಳಲ್ಲಿ ಅಪ್ರಾಪ್ತೆ ಯನ್ನು ಕೆಜಿಎಫ್ ಬಾಲಮಂದಿರಕ್ಕೆ ಸೇರಿಸಲಾಗಿದೆ. ಶ್ರೀನಿವಾಸಪುರ ತಾಲೂಕಿನ ಮತ್ತೂಂದು ಪ್ರಕರಣ ಎಫ್ಐಆರ್‌ ದಾಖಲಾಗುವ ಹಂತದಲ್ಲಿದೆ.

ಜನ ಜಾಗೃತಿ: ಬಾಲ್ಯ ವಿವಾಹಗಳನ್ನು ತಡೆಗಟ್ಟುವ ವಿಚಾರದಲ್ಲಿ ವ್ಯಾಪಕ ಮುಂಜಾಗ್ರತಾ ಜಾಗೃತಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ, ಚೈಲ್ಡ್‌ ಲೈನ್‌ ಸಹಕಾರದಿಂದ ಬಾಲ್ಯ ವಿವಾಹ ಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಶಾಲಾ ಮತ್ತು ಹಾಸ್ಟೆಲ್‌ ಹಂತದಲ್ಲಿ ಬಾಲ್ಯ ವಿವಾಹ ಆಗುವುದಿಲ್ಲವೆಂಬ ಪ್ರತಿಜ್ಞೆ ಸ್ವೀಕಾರ ನಡೆಸಲಾಗುತ್ತಿದೆ. ಬಾಲ್ಯ ವಿವಾಹ ಪತ್ತೆಯಾದಲ್ಲಿ ತಕ್ಷಣ ಮಕ್ಕಳ ಸಹಾಯವಾಣಿ 1098 ಗೆ ದೂರು ನೀಡಲುಸೂಚಿಸಲಾಗಿದೆ.

ಸ್ವಯಂ ಪ್ರೇರಿತ ಎಫ್ ಐಆರ್‌: ಬಾಲ್ಯ ವಿವಾಹ ನಿಷೇಧ ಕಾಯ್ದೆ 2016 ಕ್ಕೆ ತಿದ್ದುಪಡಿ ಆದ ನಂತರ ಬಾಲ್ಯ ವಿವಾಹಗಳನ್ನು ಮಕ್ಕಳ ರಕ್ಷಣಾಧಿಕಾರಿ ತಂಡ ಮಾತ್ರವೇ ಎಫ್ಐಆರ್‌ ದಾಖಲಿಸಬೇಕಾಗಿಲ್ಲ, ಪೊಲೀಸ್‌, ಗ್ರಾಪಂ ಪಿಡಿಒ, ಗ್ರಾಮ ಲೆಕ್ಕಿಗರು, ಆಯಾ ಶಾಲಾ ಮುಖ್ಯ ಶಿಕ್ಷಕರು ಸಹ ಎಫ್ಐಆರ್‌ ದಾಖಲಿಸಬಹುದಾಗಿದೆ. ಬಾಲ್ಯ ವಿವಾಹ ಸಂಬಂಧ ಸ್ವಯಂ ಪ್ರೇರಿತವಾಗಿಯೇಪ್ರಕರಣದಾಖಲಿಸಿಕೊಳ್ಳಬಹುದಾಗಿದೆ. ಕಾರಣಗಳು: ಬಹುತೇಕ ಬಾಲ್ಯ ವಿವಾಹಗಳು ಬಡತನ ಕಾರಣಕ್ಕೆ ನಡೆಯುತ್ತಿದೆ. ಬಡ ಕುಟುಂಬ ಗಳಲ್ಲಿ ಹೆಣ್ಣು ಮಕ್ಕಳ ರಕ್ಷಣೆ ಸಮಸ್ಯೆ ಹಾಗೂ ಹೆಣ್ಣು ಮಕ್ಕಳನ್ನು ಓದಿಸಲು ಆರ್ಥಿಕ ಸಾಮರ್ಥ್ಯವಿಲ್ಲದೆ ಮದುವೆ ಮಾಡಿ ಕಳುಹಿಸುವಮನಸ್ಥಿತಿಏರ್ಪಡುತ್ತಿದೆ.ಹೆಣ್ಣು ಮಕ್ಕಳು ಋತು ಮತಿ ಯಾಗು ತ್ತಿದ್ದಂ ತೆಯೇ ಮದುವೆ ಮಾಡ ಬಹುದು ಎಂಬ ಧಾರ್ಮಿಕ ನಂಬಿಕೆ ಬಾಲ್ಯ ವಿವಾಹಗಳನ್ನು ಹೆಚ್ಚಿಸುತ್ತಿದೆ.

ಮುಂದೇನು?: ಬಾಲ್ಯ ವಿವಾಹ ಪ್ರಕರಣಗಳಲ್ಲಿ ಪತ್ತೆಯಾದ ಬಹುತೇಕ ಹೆಣ್ಣು ಮಕ್ಕಳಿಗೆ ಬಾಲ ಮಂದಿರದಲ್ಲಿಯೇ ಅನೌಪಚಾರಿಕವಾಗಿ ವಿದ್ಯಾಭ್ಯಾಸ ಮುಂದುವರೆಸಲು ಅವಕಾಶ ಕಲ್ಪಿಸಲಾಗುತ್ತಿದೆ. ಇಂತ ಹೆಣ್ಣು ಮಕ್ಕಳ ಭವಿಷ್ಯತ್ತು ರೂಪಿಸಲು ಪ್ರಾಯೋಜಕ ಪೋಷಕರನ್ನು ಹುಡುಕಲಾಗುತ್ತಿದೆ. ಹೆಣ್ಣು ಮಕ್ಕಳಿಗೆ ವೃತ್ತಿ ಕೌಶಲ್ಯ ತರಬೇತಿ ನೀಡಲು ಕ್ರಿಯಾ ಯೋಜನೆಯೊಂದನ್ನುಜಿಲ್ಲಾ ಮಟ್ಟದಲ್ಲಿ ರೂಪಿಸಲಾಗುತ್ತಿದೆ. ಕಣ್ತಪ್ಪಿ ಹೋದ ಬಾಲ್ಯವಿವಾಹಗಳು: ಕೋಲಾರ ಜಿಲ್ಲೆ ಯಲ್ಲಿಈ ವರ್ಷ 61ಬಾಲ್ಯ ವಿವಾಹಗಳು ಪತ್ತೆಯಾಗಿದ್ದು, ಇವು ಮಕ್ಕಳ ರಕ್ಷಣಾಧಿಕಾರಿಗಳ ಗಮನಕ್ಕೆ ಬಂದಿವೆ. ಆದರೆ, ಇವರ ಗಮನಕ್ಕೆ ಬಾರದೆಯೇ ಮದುವೆಯಾಗಿರುವ ಅದೆಷ್ಟೋ ಪ್ರಕರಣಗಳು ಇನ್ನೂ ಪತ್ತೆಯಾಗದೆ ಇರಬಹುದಾದ ಸಾಧ್ಯತೆಗಳು ಹೆಚ್ಚಾಗಿವೆ.

‌ಮನೆಗೆ ಹೋಗದ ಬಾಲಕಿ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಅಲೆಮಾರಿ ಅಪ್ರಾಪೆ¤ಗೆ ಬಾಲ್ಯವಿವಾಹ ಮಾಡುವುದನ್ನು ತಡೆಗಟ್ಟಲಾಗಿದೆ. ಈ ಯುವತಿಗೆ ಓದಿನಲ್ಲಿ ಅಪಾರ ಆಸಕ್ತಿ, ಈಕೆ ಶಾಲೆಗೆ ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾಗುತ್ತಿದ್ದರು. ಇದೀಗ ಬಾಲ ಮಂದಿರದಲ್ಲಿರುವ ಈ ಯುವತಿಯನ್ನು ಬಿಡಿಸಲು ಪೋಷ ಕರು ಎಲ್ಲಾ ರೀತಿಯ ಒತ್ತಡಗಳನ್ನು ಹಾಕಿಸಿದ್ದರು. ಆದರೆ, ಬಾಲಕಿಯೇ ಖುದ್ದು ತಾನು ಓದುವ ನಿರ್ಧಾರ ತೆಗೆದುಕೊಂಡು ಮನೆಗೆ ಹೋಗದೆಬಾಲಮಂದಿರದಲ್ಲಿಯೇ ವ್ಯಾಸಂಗ ಮುಂದು ವರಿಸುತ್ತಿರುವುದು ವಿಶೇಷವೆನಿಸಿದೆ.

ಬಾಲ್ಯ ವಿವಾಹ ತಡೆಗಟ್ಟುವ ಅಧಿಕಾರಿಗಳೆಂದು ಗುರುತಿಸಿಕೊಂಡಿರುವ ಪೊಲೀಸ್‌, ಮುಖ್ಯ ಶಿಕ್ಷಕರು, ಪಿಡಿಒಗಳು,ಕಂದಾಯಾಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದಕೆಲಸ ಮಾಡಿದರೆ ಮತ್ತಷ್ಟು ಪರಿಣಾಮಕಾರಿಯಾಗಿ ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಚೌಡಪ್ಪ, ಅಧ್ಯಕ್ಷರು, ಮಕ್ಕಳ ಕಲ್ಯಾಣ ಸಮಿತಿ

ಪತ್ತೆಗೆ ಹಚ್ಚಲು ತೊಡಕು :  ಕೋಲಾರ ಜಿಲ್ಲೆಯು ಆಂಧ್ರಪ್ರದೇಶ ಹಾಗೂ ತಮಿಳು ನಾಡು ಗಡಿ ಹೊಂದಿರುವುದರಿಂದ ಬಾಲ್ಯ ವಿವಾಹಗಳು ಆಗಿ ಹೊರ ರಾಜ್ಯಕ್ಕೆ ಹೋಗುವುದು ಹಾಗೂ ಹೊರ ರಾಜ್ಯದಲ್ಲಿ ಬಾಲ್ಯ ವಿವಾಹವಾಗಿ ಜಿಲ್ಲೆಗೆ ಬರುವ ಪ್ರಕರಣಗಳು ಪತ್ತೆ ಹಚ್ಚುವುದು ಸಮಸ್ಯೆಯಾಗುತ್ತಿದೆ. ಬಾಲ್ಯವಿವಾಹಗಳನ್ನು ಪತ್ತೆ ಹಚ್ಚಿದರೂ ಎಫ್ಐಆರ್‌ ದಾಖಲಿಸಲು ಪೊಲೀಸರು ಸಾಕ್ಷ್ಯಾಧಾರಗಳನ್ನು ಹುಡುಕಿಕೊಡಿ ಎನ್ನುತ್ತಿರುವುದು. ಶೀಘ್ರ ಶಿಕ್ಷೆ ವಿಧಿಸಿ, ದಂಡ ಹಾಕಲು ಅವಕಾಶ ಇಲ್ಲದಿರುವುದು ಬಾಲ್ಯವಿವಾಹದ ತೊಡಕುಗಳಾಗಿವೆ.

ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಸಾರ್ವಜನಿಕರು ಹಾಗೂ ಎಲ್ಲಾ ಇಲಾಖೆಗಳ ಸ್ಪಂದನೆ ಅತ್ಯಗತ್ಯ. ಬಾಲ್ಯವಿವಾಹದಲ್ಲಿ ಪತ್ತೆಯಾದಯುವತಿಯರ ಭವಿಷ್ಯ ರೂಪಿಸುವಂತ ವೃತ್ತಿಕೌಶಲ್ಯ ಕಾರ್ಯಕ್ರಮಗಳ ತರಬೇತಿ ನೀಡಲು ಸದ್ಯಕ್ಕೆ ಕ್ರಿಯಾಯೋಜನೆ ರೂಪಿಸಲಾಗುತ್ತಿದೆ. -ಎಂ.ರಮೇಶ್‌, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ

-ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.