ಕೋಲಾರಕ್ಕೆ ಚೀನಿಯರ ಭೇಟಿ; ಆರೋಗ್ಯ ತಪಾಸಣೆ


Team Udayavani, Feb 5, 2020, 3:00 AM IST

kolarakke

ಕೋಲಾರ: ವಿಶ್ವಾದ್ಯಂತ ಕೊರೊನಾ ವೈರಸ್‌ ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಗೆ ಭೇಟಿ ನೀಡಿರುವ 23 ಚೀನಿಯರ ತಂಡದವರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ನಡೆದಿದ್ದು, ಯಾವುದೇ ಆತಂಕವಿಲ್ಲ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಗೆ ಚೀನಾದಿಂದ 23 ಮಂದಿಯ ತಂಡ ಬಂದಿರುವ ವಿಷಯ ತಿಳಿದ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಮಾಡಿದ ಆರೋಗ್ಯ ಇಲಾಖೆಯ ಅಧಿಕಾರಿಗಳು ಅವರ ರಕ್ತ ಹಾಗೂ ಕಫ ಮಾದರಿಯನ್ನು ಪುಣೆಯಲ್ಲಿರುವ ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷಿಸಿದಾಗ ಕೊರೊನಾ ವೈರಸ್‌ ಲಕ್ಷಣಗಳು ಇಲ್ಲದಿರುವುದು ಕಂಡುಬಂದಿದೆ.

ಕೋಲಾರದ ನರಸಾಪುರ ಕೈಗಾರಿಕೆ ಪ್ರದೇಶದಲ್ಲಿ ನೂತನ ಕಂಪನಿಯೊಂದಲ್ಲಿ ಸಾಫ್ಟ್‌ವೇರ್‌ ಅಳವಡಿಕೆಗೆ ತಂಡವು ಜನವರಿಯಲ್ಲಿ ಜಿಲ್ಲೆಗೆ ಆಗಮಿಸಿದೆ. ಅದರಂತೆ ಚೀನಾದಲ್ಲಿ ವೈರಸ್‌ ಹೆಚ್ಚು ಹರಡಿರುವ ಭೀತಿಯಿಂದ ಚೀನಿ ತಂಡವರು ತಂಗಿದ್ದ ಹೋಟೆಲ್‌ನವರು ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಅದರಂತೆ ಕೂಡಲೇ ಚೀನಾ ತಂಡವನ್ನು ಭೇಟಿ ಮಾಡಿದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಚಾರಣಿ ನೇತೃತ್ವದ ಕೊರೊನಾ ವೈರಸ್‌ ಬಗ್ಗೆ ಸ್ಥಳೀಯರು ಆತಂಕಗೊಂಡಿರುವ ಬಗ್ಗೆ ಮನವರಿಗೆ ಮಾಡಿ ಅವರಿಂದ ಕಫಾ ಹಾಗೂ ರಕ್ತದ ಮಾದರಿಗಳನ್ನು ಪಡೆದುಕೊಂಡಿದ್ದಾರೆ.

ಅದರಂತೆ ಚೀನಿಯರ ತಂಡದಲ್ಲಿ ಸದಸ್ಯರಲ್ಲಿ ಕೊರೊನಾ ವೈರಸ್‌ ಲಕ್ಷಣಗಳು ಇಲ್ಲದಿರುವ ಅಂಶ ಪ್ರಯೋಗಾಲಯದ ವರದಿಯಿಂದ ಬೆಳಕಿಗೆ ಬಂದಿದೆ. ಇದರಿಂದ ಜಿಲ್ಲೆಯ ಜನರು ನಿಟ್ಟುಸಿರು ಬಿಡುವಂತಾಗಿದ್ದು, ಚೀನಾ ತಂಡವರು ಕಂಪನಿಯಲ್ಲಿ ಸಾಫ್ಟ್‌ವೇರ್‌ ಅಳವಡಿಕೆಯಲ್ಲಿ ತೊಡಗಿರುವುದು.

ಕೊರೊನ ವೈರಸ್‌ ಬಗ್ಗೆ ಆತಂಕ ಬೇಡ: ಜಿಲ್ಲೆಯಲ್ಲಿ ಹಲವು ಬಹುರಾಷ್ಟ್ರೀಯ ಕಂಪನಿಗಳು ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಚೀನಾ ಸೇರಿದಂತೆ ಇತರೆ ದೇಶಗಳ ಜನರು ಭೇಟಿ ನೀಡುತ್ತಾರೆ. ಕೊರೊನಾ ವೈರಸ್‌ ಆತಂಕವಿದ್ದರಿಂದ ಜ್ವರ, ಕೆಮ್ಮು, ನೆಗಡಿ ಕಾಣಿಸಿಕೊಂಡಿದ್ದ ಚೀನಾ ತಂಡದವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಲ್ಲಿ ಅಂತಹ ವೈರಸ್‌ ಲಕ್ಷಣಗಳು ಇಲ್ಲದಿರುವುದು ಕಂಡುಬಂದಿದೆ. ಹೀಗಾಗಿ ಜಿಲ್ಲೆಯ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಸ್ಪಷ್ಟಪಡಿಸಿದರು.

ಸರ್ವೇಕ್ಷಣಾಧಿಕಾರಿ ಚಾರಿಣಿ ಸ್ಪಷ್ಟನೆ: ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಣಿ, ಹೋಟೆಲ್‌ ಸಿಬ್ಬಂದಿಯ ಮಾಹಿತಿ ಮೇರೆಗೆ ಚೀನಾ ತಂಡದವರನ್ನು ಭೇಟಿ ಮಾಡಿ ಅವರ ಕಫಾ ಹಾಗೂ ರಕ್ತದ ಮಾದರಿಯನ್ನು ಪುಣೆಯಲ್ಲಿರುವ ಲ್ಯಾಬ್‌ಗ ಕಳುಹಿಸಲಾಗಿತ್ತು. ಅದರಂತೆ ಅವರಲ್ಲಿ ಕೊರೊನದ ಯಾವುದೇ ಲಕ್ಷಣಗಳು ಇಲ್ಲದಿರುವುದು ಕಂಡುಬಂದಿದೆ ಎಂದು ಸ್ಪಷ್ಟನೆ ನೀಡಿದರು.

ಭಾಷೆ ಅರ್ಥವಾಗದೆ, ಅಧಿಕಾರಿಗಳ ಪರದಾಟ: ಕೊರೊನಾ ವೈರಸ್‌ ಕುರಿತು ಸಾರ್ವಜನಿರಲ್ಲಿ ಹರಡಿರುವ ಆತಂಕದ ಕುರಿತು ಚೀನಿಯರಿಗೆ ಆರ್ಥ ಮಾಡಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಹರಸಾಹಸ ಪಟ್ಟಿರುವ ಘಟನೆ ನಡೆದಿದೆ.

ಚೀನಾ ತಂಡವರಿಗೆ ಭಾರತೀಯ ಇಂಗ್ಲಿಷ್‌ ಅರ್ಥವಾಗದ ಹಿನ್ನೆಲೆಯಲ್ಲಿ ಅಧಿಕಾರಿಗಳು ಹೇಳಬೇಕಿರುವ ವಿಷಯ ಮುಟ್ಟಿಸಲು ಕೊನೆಗೆ ಗೂಗಲ್‌ ಟ್ರಾನ್ಸ್‌ಲೇಟರ್‌ ಬಳಸಬೇಕಾಯಿತು. ನಾನು ಹೇಳಬೇಕಾದ ವಿಷಯವನ್ನು ಗೂಗಲ್‌ ಟ್ರಾನ್ಸ್‌ಲೇಟರ್‌ನಲ್ಲಿ ಇಂಗ್ಲಿಷ್‌ನಲ್ಲಿ ಟೈಪ್‌ ಮಾಡಿ ಚೀನಾ ಭಾಷೆಗೆ ಭಾಷಾಂತರ ಮಾಡಿ ಅವರಿಗೆ ಮನವರಿಗೆ ಮಾಡಿಕೊಡಲಾಯಿತು ಎಂದು ಅಧಿಕಾರಿಯೊಬ್ಬರು ವಿವರಿಸಿದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.