ನಗರಸಭೆ ಜೆ.ಇ ಪ್ರಸಾದ್ ವಿರುದ್ಧ ಗರಂ ಆದ ಸದಸ್ಯ ಜೈ ಭೀಮ್ ಮುರಳಿ
Team Udayavani, Oct 21, 2021, 2:03 PM IST
ಚಿಂತಾಮಣಿ : ಕೊಳವೆ ಬಾವಿಗೆ ಪೈಪ್ಲೈನ್ ಸಂಪರ್ಕ ನೀಡಿ ಗಂಗಾನಗರಕ್ಕೆ ಕುಡಿಯುವ ನೀರು ಕಲ್ಪಿಸುವಂತೆ ಕಳೆದ ಆರು ತಿಂಗಳುಗಳಿಂದ ಮನವಿ ಮಾಡಿದರೂ ನಗರಸಭೆ ಜೆ.ಇ ಪ್ರಸಾದ್ ಯಾವುದೆ ಕ್ರಮ ಕೈಗೊಂಡಿಲ್ಲವೆಂದು ವಾರ್ಡ್ ನಂ 2 ರ ಸದಸ್ಯ ಜೈ ಭೀಮ್ ಮುರಳಿ ಆರೋಪಿಸಿದ್ದಾರೆ.
ಗುರುವಾರ ನಗರಸಭೆಗೆ ಭೇಟಿ ನೀಡಿ ಪ್ರಸಾದ್ ರವರನ್ನು ತರಾಟೆಗೆ ತೆಗೆದುಕೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಾರ್ಡ್ ನಂ 2ರ ಗಂಗಾನಗರ ಬಡಾವಣೆಯು ಬೆಟ್ಟದ ತಪ್ಪಲಿನಲ್ಲಿದ್ದು ಇಲ್ಲಿಗೆ ಪೈಪ್ ಲೈನ್ ಸಂಪರ್ಕ ಸಹ ಕಲ್ಪಿಸಿ ಅರಣ್ಯ ಇಲಾಖೆಗೆ ಸೇರಿದ ಕೊಳವೆ ಬಾವಿಯನ್ನು ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಮುಖಾಂತರ ಅರಣ್ಯ ಅಧಿಕಾರಿಗಳ ಜೊತೆ ಮಾತನಾಡಿ ಕೊಳವೆ ಬಾವಿ ಬಳಲೆಗೆ ಒಪ್ಪಿಗೆ ಪಡೆದಿದ್ದೆವೆ. ಸದರಿ ಕೊಳವೆ ಬಾವಿಗೆ ಪೈಪ್ ಲೈನ್ ಸಂಪರ್ಕ ಕಲ್ಪಿಸಿ ನೀರು ಬಿಡುವಂತೆ ಕಳೆದ ಆರು ತಿಂಗಳುಗಳಿಂದ ನಗರಸಭೆ ಜೆ.ಇ. ಪ್ರಸಾದ್ ರವರನ್ನು ಕೇಳುತ್ತಿದ್ದರೂ ಪೈಪ್ ಲೈನ್ ಸಂಪರ್ಕ ಮಾಡುತ್ತಿಲ್ಲ ಎಂದು ದೂರಿದರು.
ಇದನ್ನೂ ಓದಿ:ಬಾಲಿವುಡ್ ನಟಿ ಅನನ್ಯ ಪಾಂಡೆ ನಿವಾಸದ ಮೇಲೆ ಎನ್ ಸಿಬಿ ದಾಳಿ, ಫೋನ್, ಲ್ಯಾಪ್ ಟಾಪ್ ವಶಕ್ಕೆ
ನಗರಸಭೆ ಸದಸ್ಯರಾಗಿ ನಾವೆ ಆರು ತಿಂಗಳುಗಳಿಂದ ಕೇಳುತ್ತಿದ್ದರೂ ಕೆಲಸ ಮಾಡದ ಇವರು ಜನಸಾಮಾನ್ಯರ ಮನವಿಗೆ ಹೇಗೆ ಸ್ಪಂದಿಸುತ್ತಾರೆ ಎಂದು ಆಕ್ರೋಶಗೊಂಡ ಅವರು ಪ್ರಸಾದ್ ರವರು ಕೇವಲ ಗುತ್ತಿಗೆದಾರರ ಪರವಾಗಿ ಕೆಲಸಮಾಡಿ ಕಮೀಷನ್ ಗಾಗಿ ಕೆಲಸ ಮಾಡುತ್ತಿದ್ದಾನೆ ಎಂದು ಆರೋಪಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಜೆ.ಇ ಪ್ರಸಾದ್ ಮೂರು ದಿನಗಳೊಳಗೆ ಕೊಳವೆ ಬಾವಿಗೆ ಪೈಪ್ ಲೈನ್ ಸಂಪರ್ಕ ಕಲ್ಪಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ