ಮುಲಾಜಿಲ್ಲದೆ ಭೂ ಒತ್ತುವರಿ ತೆರವು ಮಾಡಿ


Team Udayavani, Dec 13, 2019, 2:17 PM IST

kolar-tdy-1

ಮುಳಬಾಗಿಲು: ಸರ್ಕಾರಿ ಜಮೀನು ಯಾರೇ ಒತ್ತುವರಿ ಮಾಡಿದ್ದರೂ ಮುಲಾಜಿಗೆ ಒಳಗಾಗದೇ ತೆರವುಗೊಳಿಸಿ, ಜನವರಿ ತಿಂಗಳಿನಿಂದ ಗ್ರಾಪಂ ಮಟ್ಟದಲ್ಲಿ ಸಾರ್ವಜನಿಕ ಸಂಪರ್ಕ ಸಭೆ ಹಮ್ಮಿಕೊಳ್ಳಲಾಗುವುದು ಎಂದು ಅಬಕಾರಿ ಸಚಿವ ಎಚ್‌.ನಾಗೇಶ್‌ ಹೇಳಿದರು.

ತಾಲೂಕು ಆಡಳಿತದಿಂದ ಬೈರಕೂರು ಗ್ರಾಮದ ನೆಹರು ಕೆನಡಿ ಪ್ರೌಢಶಾಲೆ ಆವರಣದಲ್ಲಿ ಅಬಕಾರಿ ಸಚಿವ ಎಚ್‌.ನಾಗೇಶ್‌ ಅಧ್ಯಕ್ಷತೆಯಲ್ಲಿ ಏರ್ಪಡಿಸಿದ್ದ ಬೈರ ಕೂರು ಹೋಬಳಿ ಮಟ್ಟದ ಬೈರಕೂರು, ಮುಷ್ಟೂರು, ರಾಜೇಂದ್ರಹಳ್ಳಿ, ನಂಗಲಿ, ಮುದಿಗೆರೆ ಮ.ಗಡೂರು, ಗುಡಿಪಲ್ಲಿ, ಹೆಬ್ಬಣಿ ಗ್ರಾಪಂ ವ್ಯಾಪ್ತಿಯಲ್ಲಿ ಸಾರ್ವಜನಿಕ ಕುಂದುಕೊರತೆಗಳ ಸಭೆಯಲ್ಲಿ ಅಹವಾಲು ಸ್ವೀಕರಿಸಿ ಮಾತನಾಡಿದರು. ತಾವು ರಾಜ್ಯಕ್ಕೆ ಸಚಿವನಾದರೂ ನಿಮ್ಮಿಂದ ಶಾಸಕನಾಗಿದ್ದು, ಮುಳಬಾಗಿಲಿಗೆ ನನ್ನ ಮೊದಲ ಆದ್ಯತೆ. ಜನಸಾಮಾನ್ಯರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಸರ್ಕಾರಿ ಅಧಿಕಾರಿಗಳೇ ನಿಮ್ಮ ಮನೆ ಬಾಗಿಲಿಗೆ ಬಂದಿದ್ದಾರೆಂದರು.

ಅರ್ಜಿ ವಿಲೇವಾರಿ: ಈಗಾಗಲೇ ದುಗ್ಗಸಂದ್ರದ ಕುರುಡು ಮಲೆ, ಆವಣಿ, ಕಸಬಾ ಹೋಬಳಿಗಳಲ್ಲಿ ಸಭೆ ಗಳನ್ನು ಏರ್ಪಡಿಸಲಾಗಿದೆ. ಜನರಿಂದ ಪಡೆದು ಕೊಳ್ಳುವ ಅರ್ಜಿಗಳಲ್ಲಿ ಕೆಲವೊಂದನ್ನು ಸ್ಥಳದಲ್ಲಿಯೇ ಬಗೆ ಹರಿಸಿದರೆ ಉಳಿದ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ಅಧಿಕಾರಿಗಳು ಬಗೆಹರಿಸುವರು ಎಂದು ಹೇಳಿದರು.

ಪಟ್ಟಿ ಮಾಡಿಕೊಡಿ: ಇನ್ನು ತಾಯಲೂರು ಹೋಬಳಿಯಲ್ಲಿ ಮುಂದಿನ ಹತ್ತು ದಿನಗಳಲ್ಲಿ ಸಭೆ ನಡೆಸಿದ ನಂತರ ಜನವರಿ ತಿಂಗಳಿನಿಂದ ಪ್ರತಿ ಗ್ರಾಪಂ ಮಟ್ಟದಲ್ಲಿ ಸಾರ್ವಜನಿಕ ಸಂಪರ್ಕ ಸಭೆ ಹಮ್ಮಿಕೊಂಡು, ಆಯಾ ಗ್ರಾಪಂ ವ್ಯಾಪ್ತಿಯಲ್ಲಿ ಜನರು ಸಮಸ್ಯೆಗಳು ಮತ್ತು ಅಗತ್ಯ ಸೌಲಭ್ಯ ತಾವುಗಳೇ ಪಟ್ಟಿ ಮಾಡಿಕೊಟ್ಟರೆ ಇತ್ಯರ್ಥಪಡಿಸಲಾಗುದು. ಈಗಾಗಲೇ ನಾವು ತಾಲೂಕಾ ದ್ಯಂತ ಕೈಗೊಳ್ಳುತ್ತಿರುವ ಮೂಲ ಸೌಕರ್ಯಗಳೊಂದಿಗೆ ಕ್ಷೇತ್ರವನ್ನು ಅಭಿವೃದ್ಧಿಗೊಳಿಸಲು ಸದಾ ಸಿದ್ಧವಿರುವುದಾಗಿ ತಿಳಿಸಿದರು.

ನೇರವಾಗಿ ಭೇಟಿ ಮಾಡಿ: ಜಿಪಂ ಅಧ್ಯಕ್ಷ ವೆಂಕಟೇಶ್‌ ಮಾತನಾಡಿ, ತನ್ನ ಆಯ್ಕೆಯಲ್ಲಿ ಸಚಿವ ನಾಗೇಶ್‌ ಅವರ ಸಹಕಾರವೂ ಸಾಕಷ್ಟಿದೆ. ವಿಶೇಷವಾಗಿ ಈ ಕ್ಷೇತ್ರದ ಅಭಿವೃದ್ಧಿಗೆ ತಾನೂ ಹೆಚ್ಚಿನ ಸಹಕಾರ ನೀಡುತ್ತನೆ. ಅಲ್ಲದೇ, ತಮ್ಮ ಕಡೆಯಿಂದ ಯಾವುದೇ ಕೆಲಸವಾಗಬೇಕಾದರೂ ನೇರವಾಗಿ ಭೇಟಿ ಮಾಡಿದ್ರೆ ಶೀಘ್ರ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಗ್ರಾಪಂ ಮಟ್ಟದಲ್ಲಿ ಸಭೆ: ತಾಪಂ ಅಧ್ಯಕ್ಷ ಎ.ವಿ. ಶ್ರೀನಿವಾಸ್‌ ಮಾತನಾಡಿ, ಕುಂದುಕೊರತೆಗಳ ಸಭೆಗಳಲ್ಲಿ ಸಚಿವರೊಂದಿಗೆ ಪಾಲ್ಗೊಂಡು ಶೀಘ್ರ ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗುತ್ತಿದೆ. ಗ್ರಾ.ಪಂ. ಮಟ್ಟದಲ್ಲಿ ಸಭೆಗಳನ್ನು ಕೈಗೊಂಡು ಹಳ್ಳಿಗಳಲ್ಲಿನ ಪೂರ್ಣ ಸಮಸ್ಯೆಗಳನ್ನು ಅರಿತು ಬಗೆಹರಿಸಲಾಗುವುದು ಎಂದು ಹೇಳಿದರು.

ತಹಶೀಲ್ದಾರ್‌ ರಾಜಶೇಖರ್‌, ಇಒ ಎಂ.ಬಾಬು, ಟಿಎಪಿಸಿಎಂಎಸ್‌ ಅಧ್ಯಕ್ಷ ಆಲಂಗೂರು ಶಿವಣ್ಣ, ರಾಜ್ಯ ಬಿಜೆಪಿ ಮುಖಂಡ ಸುರೇಂದ್ರಗೌಡ, ಜಿಪಂ ಸದಸ್ಯರಾದ ಪ್ರಕಾಶ್‌ ರಾಮಚಂದ್ರ, ಅರವಿಂದ್‌, ನಾಗಮಣಿ

ಸುಬ್ರಮಣಿರೆಡ್ಡಿ, ಜೆಡಿಯು ಮುಖಂಡ ಎಂ. ಗೋಪಾಲ್‌, ತಾಪಂ ಸದಸ್ಯರಾದ ಮಾರಪ್ಪ, ಶ್ರೀನಾಥ್‌, ಬೈರಕೂರು ಹೋಬಳಿ ರಾಜಸ್ವ ನಿರೀಕ್ಷಕ ವೆಂಕಟೇಶ್‌, ತಾಲೂಕು ಬಿಜೆಪಿ ಅಧ್ಯಕ್ಷ ಪುಣ್ಯಹಳ್ಳಿ ನಾಗಾರ್ಜುನ, ರಾಜೇಂದ್ರಹಳ್ಳಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮೀದೇವಿ, ಪಿಡಿಒಗಳಾದ ಚಂದ್ರಶೇಖರ್‌, ಎನ್‌

.ನರಸಿಂಹಮೂರ್ತಿ, ಗೇಮ್‌ ಚೌಹಾಣ್‌, ವಿಜಯಮ್ಮ, ಈರಪ್ಪ, ಶ್ರೀನಿವಾಸ್‌, ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.