ಅವಧಿ ಮುಗಿದ ಮಳಿಗೆಗಳ ತೆರವು


Team Udayavani, Feb 1, 2022, 1:15 PM IST

ಅವಧಿ ಮುಗಿದ ಮಳಿಗೆಗಳ ತೆರವು

ಕೋಲಾರ: ನಗರಸಭೆಗೆ ಸೇರಿದ 205 ಬಾಡಿಗೆಅವಧಿ ಮುಗಿದಿರುವ ವಾಣಿಜ್ಯ ಮಳಿಗೆಗಳನ್ನುಸೋಮವಾರ ಬೆಳಗ್ಗೆ ಹೈಕೋರ್ಟ್‌ ಆದೇಶದಮೇರೆಗೆ ಪೊಲೀಸರ ಸಹಕಾರದೊಂದಿಗೆನಗರಸಭೆ ಅಧಿಕಾರಿಗಳು ತಮ್ಮ ಸಿಬ್ಬಂದಿಜೊತೆಗೂಡಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಿದರು.

ಕೋರ್ಟ್‌ ಆದೇಶ ನೀಡಿದ ಹಿನ್ನೆಲೆಯಲ್ಲಿ ಕಳೆದ 45 ದಿನಗಳ ಹಿಂದೆಯೇ ನಗರಸಭೆಯಿಂದ ಅಂಗಡಿ ನಡೆಸುತ್ತಿರುವವರಿಗೆ ನೋಟಿಸ್‌ ಜಾರಿ ಮಾಡಿದ್ದರೂ, ಅಂಗಡಿಗಳನ್ನುಸ್ವಯಂಪ್ರೇರಿತರಾಗಿ ತೆರವುಗೊಳಿಸದ ಕಾರಣ,ನಗರದ ಎಂ.ಜಿ.ರಸ್ತೆಯಲ್ಲಿರುವ ಎಸ್‌.ಎಸ್‌.ಕಾಂಪ್ಲೆಕ್ಸ್‌ನಲ್ಲಿರುವ ನಗರಸಭೆ ಮಳಿಗೆಗಳನ್ನುಖಾಲಿ ಮಾಡಿಸಲು ಪೌರಾಯುಕ್ತ ಎಸ್‌.ಪ್ರಸಾದ್‌ ನೇತೃತ್ವದಲ್ಲಿ ಕಾರ್ಯಾಚರಣೆಪೊಲೀಸ್‌ ಬಿಗಿ ಭದ್ರತೆಯಲ್ಲಿ ನಡೆಯಿತು.

ಮಾತಿನ ಚಕಮಕಿಗೆ ಬ್ರೇಕ್‌: ಕೆಲವು ಅಂಗಡಿ ಮಾಲಿಕರು ಮಾತಿನ ಚಕಮಕಿಗೆ ಇಳಿದರಾದರೂ ಪೊಲೀಸರು ಯಾವುದೇ ಗಲಾಟೆಗೆ ಅವಕಾಶ ನೀಡಲಿಲ್ಲ, ಪರಿಸ್ಥಿತಿಯ ತೀವ್ರತೆ ಅರಿತ ಕೆಲವು ಅಂಗಡಿ ಮಾಲಿಕರು,ತಾವೇ ಅಂಗಡಿಯಲ್ಲಿನ ಸರಕನ್ನು ಹೊತ್ತೂಯ್ದು,ಖಾಲಿ ಮಾಡುತ್ತಿದ್ದ ದೃಶ್ಯ ಕಂಡು ಬಂತು. ಕೋರ್ಟ್‌ ಆದೇಶ ತೋರಿಸಿ ಮಳಿಗೆ ಖಾಲಿ:ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ವಾಣಿಜ್ಯ ಮಳಿಗೆಗಳಲ್ಲಿದ್ದ ವ್ಯಾಪಾರಿಗಳು ಖಾಲಿಮಾಡಲು ಹಿಂದೇಟು ಹಾಕುತ್ತಿದ್ದಾರೆ. ಆದರೆ,ಅಧಿಕಾರಿಗಳು ಕೋರ್ಟ್‌ ಆದೇಶವನ್ನು ತೋರಿಸಿ ಮಳಿಗೆ ಖಾಲಿ ಮಾಡಿಸುತ್ತಿದ್ದಾರೆ.

ಅಧಿಕಾರಿಗಳು ಬೀಗ ಒಡೆದು ಮಳಿಗೆಗಳನ್ನು ಸೀಜ್‌ ಮಾಡುವುದರ ಮೂಲಕ ಮುಂದೆಹರಾಜುದಾರರಿಗೆ ನೀಡಲು ಕ್ರಮ ಕೈಗೊಳ್ಳಲಿ ದ್ದಾರೆ ಎಂದು ಆಯುಕ್ತರು ತಿಳಿಸಿದರು.

ಮಳಿಗೆಯಲ್ಲಿದ್ದ ವಸ್ತುಗಳು ಮುಟ್ಟುಗೋಲು: ಸ್ವಯಂ ಪ್ರೇರಣೆಯಿಂದ ಅಂಗಡಿಗಳನ್ನುಖಾಲಿ ಮಾಡದ ಕಾರಣ, ನಗರಸಭೆ ಸಿಬ್ಬಂದಿ ಮಳಿಗೆಗಳ ಬೀಗ ಹೊಡೆದು, ಮಳಿಗೆಯಲ್ಲಿದ್ದವಸ್ತುಗಳನ್ನು ಹೊರ ಹಾಕುವ ಕೆಲಸಮಾಡಿದ್ದಲ್ಲದೆ, ಮಳಿಗೆಯಲ್ಲಿದ್ದ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಂಡರು.

ನೋಟಿಸ್‌ ನೀಡಿದ್ರೂ ಪ್ರಯೋಜನವಿಲ್ಲ: ಕಳೆದ ಒಂದೂವರೆ ವರ್ಷದ ಹಿಂದೆ ಹಲವುಬಿಡ್‌ದಾರರು ಹೆಚ್ಚಿನ ಬಾಡಿಗೆ ಹಾಗೂಮುಂಗಡ ನೀಡಲು ಒಪ್ಪಿ ಹಾರಾಜಿನಲ್ಲಿಮಳಿಗೆಗಳನ್ನು ಪಡೆದುಕೊಂಡಿದ್ದು, ಇದುವರೆಗೆಹಲವು ಬಾರಿ ನಗರಸಭೆ ನೋಟಿಸ್‌ ನೀಡಿತೆರವುಗೊಳಿಸಲು ಪ್ರಯತ್ನಪಟ್ಟರೂ ಸಾಧ್ಯವಾಗಿರಲಿಲ್ಲ.

ಪ್ರಸ್ತುತ ಕಾನೂನಿನ ತೊಡಕುಗಳನ್ನುನಿವಾರಿಸಿಕೊಂಡಿರುವ ನಗರಸಭೆ ಕೋರ್ಟ್‌ಆದೇಶದಂತೆ ಮಳಿಗೆಗಳ ತೆರವಿಗೆ ಕ್ರಮಕೈಗೊಂಡಿರುವುದು ಸಾರ್ವಜನಿಕರ ಪ್ರಶಂಸೆಗೆಪಾತ್ರವಾಗಿದೆ. ಮಳಿಗೆಗಳನ್ನು ತೆರವುಗೊಳಿಸುವಕಾರ್ಯದ ವೇಳೆ ಯಾವುದೇ ಅಹಿತಕರಘಟನೆಗಳು ನಡೆಯದಂತೆ ತಡೆಯಲು ಎಸ್‌.ಎಸ್‌.ಕಾಂಪ್ಲೆಕ್ಸ್‌ ಸುತ್ತಲಿನ ರಸ್ತೆಗಳನ್ನು ಬಂದ್‌ಮಾಡಲಾಗಿತ್ತು ಹಾಗೂ ಸ್ಥಳದಲ್ಲಿ ಹೆಚ್ಚಿನಪೊಲೀಸ್‌ ಬಂದೋಬಸ್ತ್ ಹಾಕಲಾಗಿತ್ತು.

ಪೊಲೀಸರು ಬೆಳಗ್ಗೆ 8ರಿಂದಲೇ ತೆರವುಕಾರ್ಯಾಚರಣೆ ನಡೆಸುವ ಭಾಗದ ಎಲ್ಲಾರಸ್ತೆಗಳನ್ನು ಬ್ಯಾರಿಕೇಡ್‌ಗಳನ್ನು ಹಾಕಿ ಬಂದ್‌ಮಾಡಿದ್ದು, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಲಿಲ್ಲ.

ಟಾಪ್ ನ್ಯೂಸ್

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.