ಸರ್ಕಾರಿ ಭೂಮಿ ಒತ್ತುವರಿ ತೆರವು
Team Udayavani, Nov 6, 2019, 3:09 PM IST
ಬೇತಮಂಗಲ: ಕಮ್ಮಸಂದ್ರ ಗ್ರಾಪಂನ ಕೆ.ಜಿ.ಕೋಟೆ ಗ್ರಾಮದಲ್ಲಿ ಬೆಂಗಳೂರು ಮೂಲದ ವ್ಯಕ್ತಿಯೊಬ್ಬ ಕೃಷಿಗಾಗಿ ಗ್ರಾಮದ ವೆಂಕಟೇಶಪ್ಪ ಅವರಿಂದ 4 ಎಕರೆ ಲೀಸ್ಗೆ ಪಡೆದುಕೊಂಡು, ಸರ್ಕಾರದ ಭೂಮಿ ಒತ್ತುವರಿ ಮಾಡಿಕೊಂಡಿದ್ದರು. ಅಲ್ಲದೆ, ಸುತ್ತಮುತ್ತಲಿನ ರೈತರಿಗೆ ತೊಂದರೆ ನೀಡುತ್ತಿದ್ದರು. ಈ ಬಗ್ಗೆ ಬಂದ ದೂರಿನ್ವಯ ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತೆರವುಗೊಳಿಸಿದರು.
ಬೆಂಗಳೂರು ಮೂಲದ ರೈತರೊಬ್ಬರು ತಾವು ಲೀಸ್ಗೆ ಪಡೆದ 4 ಎಕರೆ ಜಮೀನಿನ ಜೊತೆಗೆ ಸುತ್ತಮುತ್ತಲಿನ ಸರ್ಕಾರಿ ಗೋಮಾಳ, ರಸ್ತೆ ಇತರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡು, ಸುತ್ತಮುತ್ತಲಿನ ರೈತರು ತಮ್ಮ ಜಮೀನಿಗೆ ಹೋಗಲು ಸಹ ರಸ್ತೆ ಬಿಟ್ಟು ಕೊಡದೆ ತೊಂದರೆ ಮಾಡುತ್ತಿದ್ದ ಎನ್ನಲಾಗಿದೆ.
ಈ ಬಗ್ಗೆ ಸುತ್ತಮುತ್ತಿನ ರೈತರು ಜಿಲ್ಲಾಧಿಕಾರಿಗೆ ಮತ್ತು ಕಂದಾಯ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ನಂತರ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ತಕ್ಷಣ ಕಾರ್ಯಪ್ರವೃತ್ತರಾದ ತಹಶೀಲ್ದಾರ್ ಕೆ.ರಮೇಶ್, ಬೇತಮಂಗಲ ಉಪತಹಶೀಲ್ದಾರ್ ಧಮೇಂದ್ರ ಪ್ರಸಾದ್, ಕಂದಾಯ ಅಧಿಕಾರಿ ಮಂಜುನಾಥ್, ಗ್ರಾಮ ಲೆಕ್ಕಿಗ ದಿನೇಶ್, ಮಹೇಶ್ ಇತರೆ ಸಿಬ್ಬಂದಿ ಕಾರ್ಯಚರಣೆ ನಡೆಸಿ ಜೆಸಿಬಿ ಯಂತ್ರದೊಂದಿಗೆ ಒತ್ತುವರಿಯಾಗಿದ್ದ ರಸ್ತೆಯನ್ನು ತೆರವುಗೊಳಿಸಿ, ರೈತರ ಭೂಮಿ ಎಷ್ಟಿದಿಯೋ ಅಷ್ಟರಲ್ಲೇ ಕೃಷಿ ನಡೆಸಿಕೊಳ್ಳಲು ಸೂಚನೆ ನೀಡಲಾಯಿತು. ಮತ್ತೆ ಒತ್ತುವರಿಯಾದರೆ, ಇತರೆ ರೈತರಿಗೆ ತೊಂದರೆ ಕೊಟ್ಟರೆ ಕಠಿಣ ಕ್ರಮಕೈಗೊಳ್ಳುವುದಾಗಿ, ಅಕ್ರಮ ಪ್ರವೇಶ ಮಾಡಿದ್ದ ರೈತನಿಗೆ ಎಚ್ಚರಿಕೆ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ