ಕೋಚಿಮಲ್‌ ಚುನಾವಣೆಯಲ್ಲಿ ಕೈ ಪ್ರಾಬಲ್ಯ

ಕಾಂಗ್ರೆಸ್‌ 10, ಜೆಡಿಎಸ್‌ 2, ಸುಧಾಕರ್‌ ಬಣಕ್ಕೆ 1 ಸ್ಥಾನ „ ಮಾಜಿ ಶಾಸಕರ ಬೆಂಬಲಿಗನ ವಿರುದ್ಧ ಶಾಸಕ ನಂಜೇಗೌಡಗೆ ಜಯ

Team Udayavani, May 14, 2019, 12:15 PM IST

KOLAR-TDY-6

ಕೋಲಾರ: ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಆಡಳಿತ ಮಂಡಳಿಯ 9 ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ 6 ಹಾಗೂಜೆಡಿಎಸ್‌ನ 2 ಹಾಗೂ ಚಿಂತಾಮಣಿ ಮಾಜಿಶಾಸಕ ಸುಧಾಕರ್‌ ಬಣದ ಓರ್ವಅಭ್ಯರ್ಥಿ ಆಯ್ಕೆಯಾಗಿದ್ದು,ಈಗಾಗಲೇ 4 ಮಂದಿ ಅವಿರೋಧಆಯ್ಕೆಯಾಗಿರುವುದರೊಂದಿಗೆಒಕ್ಕೂಟದಲ್ಲಿ 10 ಸ್ಥಾನಗಳೊಂದಿಗೆ ಕಾಂಗ್ರೆಸ್‌ ಪ್ರಾಬಲ್ಯ ಮೆರೆದಿದೆ.ಒಟ್ಟು 13 ಸ್ಥಾನಗಳ ಪೈಕಿ ನಾಲ್ಕುಸ್ಥಾನಗಳಿಗೆ ಅವಿರೋಧ ಆಯ್ಕೆ ನಂತರ ಉಳಿದ 9 ಸ್ಥಾನಗಳಿಗೆ ಇಂದು ಚುನಾವಣೆ ನಡೆದಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದ ಕೋಲಾರ ಕ್ಷೇತ್ರದ ಡಿ.ವಿ.ಹರೀಶ್‌, ಶ್ರೀನಿವಾಸಪುರ ಕ್ಷೇತ್ರದ ಹನುಮೇಶ್‌, ಮಹಿಳಾ ಕ್ಷೇತ್ರದಿಂದ ಕಾಂತಮ್ಮ, ಶಿಢಘಟ್ಟದಿಂದ ಶ್ರೀನಿವಾಸ್‌, ಮಾಲೂರಿನಿಂದ ಕೆ.ವೈ.ನಂಜೇಗೌಡ, ಬಾಗೇಪಲ್ಲಿನಮಂಜುನಾಥರೆಡ್ಡಿ ಆಯ್ಕೆಯಾದರು.
ಚಿಂತಾಮಣಿ ತಾಲೂಕಿನಿಂದ ಮಾಜಿ ಶಾಸಕ ಸುಧಾಕರ್‌ ಬಣದಿಂದಕಣಕ್ಕಿಳಿದಿದ್ದ ಅಶ್ವತ್ಥ್ನಾರಾಯಣರೆಡ್ಡಿ ಹಾಗೂ ಜೆಡಿಎಸ್‌ನ ಇಬ್ಬರು ಆಯ್ಕೆಯಾಗಿದ್ದು, ಮುಳಬಾಗಿಲು ಕ್ಷೇತ್ರದಿಂದ ಕಾಡೇನಹಳ್ಳಿ ನಾಗರಾಜ್‌,
ಚಿಕ್ಕಬಳ್ಳಾಪುರದ ವೆಂಕಟೇಶ್‌ ಆಯ್ಕೆಯಾಗಿದ್ದಾರೆ. ಈಗಾಗಲೇ ಬಂಗಾರಪೇಟೆ ಕ್ಷೇತ್ರದಿಂದ ಕಾಂಗ್ರೆಸ್‌ನ ಜಯಸಿಂಹ ಕೃಷ್ಣಪ್ಪ, ಗೌರಿಬಿದನೂರಿನಿಂದ ಕಾಂತರಾಜು,ಗುಡಿಬಂಡೆಯ ಅಶ್ವತ್ಥ್ ರೆಡ್ಡಿ, ಮಹಿಳಾ ಕ್ಷೇತ್ರದಿಂದ ಸುನಂದಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತೀವ್ರ ಜಿದ್ದಾಜಿದ್ದಿನ ಕಣ: ತೀವ್ರ ಜಿದ್ದಾಜಿದ್ದಿನ ಚುನಾವಣೆ ನಡೆದಿದ್ದು, ಭಾರಿ ಪ್ರಮಾಣದ ಹಣ, ಚಿನ್ನಾಭರಣ,ಬುಲೆಟ್‌, ದ್ವಿಚಕ್ರವಾಹನ ಸೇರಿ ಮತದಾರರಿಗೆ ಪ್ರವಾಸಭಾಗ್ಯವನ್ನು ಕಲ್ಪಿಸಲಾಗಿತ್ತು. ಶತಾಯಗತಾಯ ಗೆಲ್ಲುವ ಆಶಯದೊಂದಿಗೆ
ಕಣಕ್ಕಿಳಿದಿದ್ದ ಮಾಜಿ ಶಾಸಕ ಕೊತ್ತೂರು ಮಂಜುನಾಥ್‌ ಬೆಂಬಲಿತ ರಾಜೇಂದ್ರಗೌಡ, ಮಹಿಳಾ ಅಭ್ಯರ್ಥಿ ಎಸ್‌.ಪ್ರಭಾವತಿ, ಜೆಡಿಎಸ್‌ ಮಾಜಿ ಶಾಸಕ ಮಂಜುನಾಥಗೌಡರ ಬೆಂಬಲದಿಂದ ಕಣಕ್ಕಿಳಿದಿದ್ದ ಡಾ.ಪ್ರಸನ್ನ ಸೋಲುಂಡಿದ್ದಾರೆ.

ಪಟಾಕಿ ಸಿಡಿಸಿ ವಿಜಯೋತ್ಸವ: ಮತದಾನ ಬೆಳಗ್ಗೆ 9 ಗಂಟೆಯಿಂದ 4ರವರೆಗೂ ನಡೆದಿದ್ದು, ಸಂಜೆ ಮತ ಎಣಿಕೆ ನಡೆಯಿತು. ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ನಗರದ ಗೋಕುಲ ವಿದ್ಯಾಸಂಸ್ಥೆ ಸುತ್ತ ಆಗಮಿಸಿದ್ದ ಅಭ್ಯರ್ಥಿಗಳ ನೂರಾರು ಅಭಿಮಾನಿಗಳು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ತೀವ್ರ ಪ್ರತಿಷ್ಠೆಯ ಕಣಗಳಾಗಿದ್ದ ಕೋಲಾರ ಕ್ಷೇತ್ರದಲ್ಲಿ ಡಿ.ವಿ.ಹರೀಶ್‌, ಶ್ರೀನಿವಾಸಪುರದಲ್ಲಿ ಹನುಮೇಶ್‌, ಮಾಲೂರಿನ ಶಾಸಕ ಕೆ.ವೈ.ನಂಜೇಗೌಡರ ಬೆಂಬಲಿಗರು ಅಪಾರ ಪ್ರಮಾಣದಲ್ಲಿ ಜಮಾಯಿಸಿದ್ದರು.ಗೆಲುವು ಘೋಷಣೆಯಾಗಿ ಅಭ್ಯರ್ಥಿಗಳು ಹೊರ ಬರುತ್ತಿದ್ದಂತೆ ಅಭಿಮಾನಿಗಳು ಅವರನ್ನು ಹೆಗಲ ಮೇಲೆ ಹೊತ್ತುಮೆರವಣಿಗೆ ಮಾಡಿ ಸಂಭ್ರಮಿಸಿದರು.

ಮಹಿಳಾ ಮೀಸಲು: ಕೋಲಾರ ಮಹಿಳಾ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಕಾಂತಮ್ಮಆರ್‌. 23 ಮತ ಪಡೆದು ವಿಜಯಿಯಾಗಿದ್ದು, ಪ್ರತಿಸ್ಪರ್ಧಿ ಪ್ರಭಾವತಿ ಎಸ್‌. 22 ಮತಪಡೆದು ಸೋಲುಂಡರೆ, ಮತ್ತೂಬ್ಬ ಅಭ್ಯರ್ಥಿ ರತ್ನಮ್ಮ 5 ಹಾಗೂ ಶಾಂತಮ್ಮಶೂನ್ಯಮತ ಪಡೆದರು. 9 ಕ್ಷೇತ್ರಗಳಿಗೆ ಒಟ್ಟು ಚಲಾವಣೆಯ ಮತಗಳು 1,312 ಮತ್ತುತಿರಸ್ಕೃತ 7 ಆಗಿದ್ದವು.

 

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.