ಕಾರುಗಳ ಡಿಕ್ಕಿ: ನಾಲ್ವರ ದುರ್ಮರಣ
Team Udayavani, Sep 28, 2018, 6:45 AM IST
ಬಂಗಾರಪೇಟೆ: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕೋಲಾರ ರಸ್ತೆಯ ಅನಿಗಾನಹಳ್ಳಿ ಗೇಟ್ ಬಳಿ ಟಾಟಾ ಸುಮೋ ಹಾಗೂ ಇಂಡಿಕಾಕಾರಿನ ನಡುವೆ ಸಂಭವಿಸಿದ ಮುಖಾಮುಖೀ ಡಿಕ್ಕಿಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಮೃತರನ್ನು ಕೆಜಿಎಫ್ನ ಚಾಂಪಿಯನ್ ರೀಪ್ಸ್ನ ಭರತ್ ಕುಮಾರ್(24), ಬಾಬು (30), ರಿಕೋ(28) ಹಾಗೂ ರಮೇಶ್ಬಾಬು(35)
ಎಂದು ಗುರುತಿಸಲಾಗಿದೆ.
ಸೇನಾಯೋಧ ಭರತ್ ಕುಮಾರ್ ಅವರನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಿಟ್ಟು ಬರಲು ಇವರೆಲ್ಲರೂ
ಇಂಡಿಕಾ ಕಾರಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಕೋಲಾರ ರಸ್ತೆ ಅನಿಗಾನಹಳ್ಳಿ ಗ್ರಾಮದ ಗೇಟ್ ಬಳಿ ಕೋಲಾರ ಕಡೆಯಿಂದ ವೇಗವಾಗಿ ಬಂದ ಟಾಟಾ ಸುಮೋ ಡಿಕ್ಕಿ ಹೊಡೆಯಿತು. ಇಂಡಿಕಾ ಕಾರು ಪಲ್ಟಿಯಾಗಿ ನಾಲ್ವರೂ ಸ್ಥಳದಲ್ಲೇ ಅಸುನೀಗಿದರು. ಟಾಟಾ ಸುಮೋದಲ್ಲಿದ್ದ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಕೋಲಾರದ ಆಸ್ಪತ್ರೆಗೆ ಸೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ