ವ್ಯಾಪಾರದ ಜೊತೆ ಶೈಕ್ಷಣಿಕವಾಗಿ ಮುಂದೆ ಬನ್ನಿ


Team Udayavani, Sep 23, 2019, 2:51 PM IST

kolara-tdy-1

ಕೋಲಾರ: ಆರ್ಯವೈಶ್ಯ ಸಮುದಾಯ ವ್ಯಾಪಾರದ ಜೊತೆಗೆ ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಮುಂಚೂಣಿಗೆ ಬಂದು ಆಡಳಿತ ನಡೆಸುವಂತಾಗಬೇಕೆಂದು ಕೇಂದ್ರ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ಆಶಿಸಿದರು.

ಕರ್ನಾಟಕ ಆರ್ಯವೈಶ್ಯ ಮಹಾಸಭಾ ಭಾನುವಾರ ಆಯೋಜಿಸಿದ್ದ 10ನೇ ವರ್ಷದ ರಾಜ್ಯ ಮಟ್ಟದ ಪ್ರತಿಭೋತ್ಸವದ ಮೆರವಣಿಗೆಗೆ ಕಠಾರಿಪಾಳ್ಯದ ಸರ್ಕಾರಿ ಶಾಲೆ ಆವರಣ ದಲ್ಲಿ ಚಾಲನೆ ನೀಡಿ ಮಾತನಾಡಿ, ಆರ್ಯವೈಶ್ಯ ಸಮುದಾಯ ವ್ಯಾಪಾರದ ಕಡೆ ನೀಡುವ ಒತ್ತನ್ನು ಮಕ್ಕಳ ಶಿಕ್ಷಣಕ್ಕೆ ನೀಡಿಲಿ. ಐಎಎಸ್‌, ಐಪಿಎಸ್‌, ಕೆಎಎಸ್‌ ಅಧಿಕಾರಿಗಳನ್ನಾಗಿಸಿ ಆಡಳಿತ ದಲ್ಲಿ ಭಾಗಿದಾರರನ್ನಾಗಿಸಿ, ಅಂತೆಯೇ ರಾಜಕೀಯವಾಗಿಯೂ ಮುನ್ನಲೆಗೆ ಬರಬೇಕು ಎಂದು ಹೇಳಿದರು.

ಶನಿವಾರ ನಡೆದ ಶ್ರೀನಿವಾಸ ಕಲ್ಯಾಣೋತ್ಸವದ ವೇಳೆ ಜಿಲ್ಲಾದ್ಯಂತ ಉತ್ತಮ ಮಳೆಯಾಗಿದೆ. ನಿಮ್ಮ ಸೇವೆ ಭಗವಂತನಿಗೆ ತಲುಪಿದೆ. ಭಗವಂತನ ಸೇವೆ ಮುಂದುವರಿಸಿ ಎಂದು ನುಡಿದರು.

ಉತ್ತಮ ಮಳೆ: ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಮಾತನಾಡಿ, ಜಿಲ್ಲೆ ಸತತ ಬರಗಾಲ ಎದುರಿಸುತ್ತಿದೆ. ಈ ವರ್ಷವೂ ಮಳೆಯಾಗಿರಲಿಲ್ಲ. ಕಲ್ಯಾಣೋತ್ಸವದ ವೇಳೆ ಭಾರೀ ಮಳೆಯಾಗಿ 65 ರಿಂದ 75 ಮಿಮೀ ಮಳೆ ದಾಖಲಾಗಿದೆ. ಜಿಲ್ಲಾದ್ಯಂತ ಮಳೆಯಾಗಿರುವುದರಿಂದ ಜಿಲ್ಲಾಡಳಿತದ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು. ಜಿಲ್ಲಾ ವರಿಷ್ಠಾಧಿಕಾರಿ ಕಾರ್ತಿಕ್‌ರೆಡ್ಡಿ ಆರ್ಯವೈಶ್ಯ ಮಹಾಸಭಾದ ರಾಜ್ಯಾಧ್ಯಕ್ಷ ಆರ್‌.ಪಿ.ರವಿಶಂಕರ್‌, ಸಮಿತಿ ಅಧ್ಯಕ್ಷ ಕೆ.ವಿ.ರಾಮಪ್ರಸಾದ್‌, ಮಹಾಸಭಾದ ಜಿಲ್ಲಾಧ್ಯಕ್ಷ ವೈ.ಆರ್‌. ಶಿವಪ್ರಕಾಶ್‌ ಇತರರಿದ್ದರು.

ಅದ್ಧೂರಿ ಮೆರವಣಿಗೆ: ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋ ತ್ತರ, ಉನ್ನತ ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿ ಗಳನ್ನು 10ಕ್ಕೂ ಹೆಚ್ಚು ಬೆಳ್ಳಿ ಪಲ್ಲಕಿ, ಕುದುರೆ ಸಾರೋಟು, ಕುದುರೆಗಳ ಮೇಲೆ ಕುಳ್ಳಿರಿಸಿ ನಗರದಾದ್ಯಂತ ಮೆರವಣಿಗೆ ನಡೆಸಲಾಯಿತು. ಸುಮಾರು 850ಕ್ಕೂ ಹೆಚ್ಚು ಪ್ರತಿಭಾ ಪುರಸ್ಕೃತರು ಶೋಭಾ ಯಾತ್ರೆಯಲ್ಲಿ ಸಾಗುತ್ತಿದ್ದಂತೆ ವಿವಿಧೆಡೆ ಪುಷ್ಪವೃಷ್ಟಿ ಸುರಿಸ ಲಾಯಿತು. ಡೊಳ್ಳುಕುಣಿತ, ದೇವರುಗಳ ದ್ವಿಪಾತ್ರ ಪ್ರದರ್ಶನ, ವೀರಗಾಸೆ, ಡೊಳ್ಳುಕುಣಿತ ವಿವಿಧ ಜಾನಪದ ಕಲಾ ಪ್ರಕಾರಗಳು ಗಮನ ಸೆಳೆಯಿತು.

ಅಂಬಾರಿ ಮೆರವಣಿಗೆ: ಶ್ರೀವಾಸವಿ ಕನ್ನಿಕಾ ಪರಮೇಶ್ವರಿ ದೇವಿಯನ್ನು ಅಂಬಾರಿಯಲ್ಲಿಟ್ಟು, ಮೆರವಣಿಗೆ ನಡೆಸಲಾಯಿತು. ಸಾರ್ವಜನಿಕರನ್ನು ಕಂಡು ಆನೆ ಬೆದರದಂತೆ ಎರಡು ಸುತ್ತಿನ ರಕ್ಷಣಾ ಕೋಟೆಯಲ್ಲಿ ಕರೆದೊಯ್ಯಲಾಯಿತು. ಸಮುದಾಯದ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.