ಬಾಕಿ ಅರ್ಜಿ 2 ತಿಂಗಳೊಳಗೆ ಪೂರ್ಣಗೊಳಿಸಿ

ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಪ್ರಾದೇಶಿಕ ಆಯುಕ್ತ ನವೀನ್‌ ರಾಜ್‌ಸಿಂಗ್‌ ಸೂಚನೆ

Team Udayavani, Aug 19, 2021, 4:18 PM IST

ಬಾಕಿ ಅರ್ಜಿ 2 ತಿಂಗಳೊಳಗೆ ಪೂರ್ಣಗೊಳಿಸಿ

ಕೋಲಾರ: ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ವಿವಿಧ ಹಂತಗಳಲ್ಲಿ ಬಾಕಿ ಇರುವ ಅರ್ಜಿಗಳನ್ನು 2 ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್‌ ರಾಜ್‌ ಸಿಂಗ್‌ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ, ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಭೂಮಿ ತಂತ್ರಾಂಶದಲ್ಲಿ ವಿವಿಧ ಅಧಿಕಾರಿಗಳ ಬಳಿಬಾಕಿಇರುವ ಪ್ರಕರಣ,ಕಾವೇರಿ ತಂತ್ರಾಂಶದಲ್ಲಿ ತಹಶೀಲ್ದಾರ್‌ ಹಂತದಲ್ಲಿ ಬಾಕಿ ಇರುವ ಪ್ರಕರಣ ಪರಿಶೀಲನೆ ನಡೆಸಿ ಬಂಗಾರಪೇಟೆ ತಾಲೂಕಿನಲ್ಲಿ 80 ಪ್ರಕರಣ ಬಾಕಿ ಇದ್ದು, ಒಂದು ವಾರದೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು.

ಅರೆ ನ್ಯಾಯಿಕ ಪ್ರಕರಣಗಳಲ್ಲಿ ಮೊದಲು 2 ವರ್ಷದಿಂದ 5 ವರ್ಷಗಳೊಳಗೆ ಬಾಕಿ ಇರುವ ಪ್ರಕರಣ ತೆಗೆದುಕೊಂಡು 2 ತಿಂಗಳೊಳಗೆ ಇತ್ಯರ್ಥ
ಪಡೆಸುವಂತೆ ತಹಶೀಲ್ದಾರ್‌ಗಳಿಗೆ ಸೂಚಿಸಿದರು. ಪಹಣಿ ಕಾಲಂ 3 ಮತ್ತು 9ಕ್ಕೆ ವ್ಯತ್ಯಾಸವಿರುವ ಪ್ರಕರಣಗಳ ತಿದ್ದುಪಡಿ, ಭೂ ಮಂಜೂರಾತಿ
ನಮೂನೆ, 53ರ ಪ್ರಕರಣಗಳ ವಿಲೇವಾರಿ, 94 ಸಿ, 94 ಸಿಸಿ ಹಾಗೂ ಸರ್ಕಾರಿ ಜಮೀನುಗಳ ಒತ್ತುವರಿ ತೆರವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ:ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ತೆರಳಲು ಷರತ್ತುಬದ್ಧ ಅನುಮತಿ ನೀಡಿದ ಸುಪ್ರೀಂ ಕೋರ್ಟ್

ತಿಂಗಳಿಗೆ 23 ಸರ್ವೆ ಪ್ರಕರಣ ಇತ್ಯರ್ಥಪಡಿಸಿ:
ಸರ್ವೆ ಇಲಾಖೆ ಆಯುಕ್ತರಾದ ಮನಿಷ್‌ ಮುದ್ಗಿಲ್‌ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿ, ಸಾರ್ವಜನಿಕರು ಸರ್ವೆ ಮಾಡಲು ಅರ್ಜಿ ಸಲ್ಲಿಸಿದ್ದು,
ಹೆಚ್ಚಿನ ಪ್ರಕರಣಗಳು ತಹಶೀಲ್ದಾರ್‌ ಹಂತದಲ್ಲಿ ಬಾಕಿ ಉಳಿದಿವೆ. ಕಾರಣ 3-9 ಮಿಸ್‌ ಮ್ಯಾಚ್‌, ಆರ್‌ಟಿಸಿ ಮಿಸ್‌ ಮ್ಯಾಚ್‌ ಮುಂತಾದ ಕಾರಣಗಳಿಂದ ಬಾಕಿ ಇದ್ದು, ಟಾರ್ಗೆಟ್‌ ತೆಗೆದುಕೊಂಡು ತಹಶೀಲ್ದಾರರು ಪ್ರತಿ ವಾರ ಇತ್ಯರ್ಥ ಪಡಿಸಬೇಕು. ಪ್ರತಿ ಸರ್ವೆಯರ್‌ಗಳು ತಿಂಗಳಿಗೆ ಕನಿಷ್ಠ 23 ಸರ್ವೆ ಪ್ರಕರಣ ಇತ್ಯರ್ಥ ಪಡಿಸಬೇಕು ಎಂದು ಸೂಚಿಸಿದರು.

ವಾರದಲ್ಲಿ ದಿನಾಂಕ ನಿಗದಿಪಡಿಸಿ: ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ಮಾತನಾಡಿ, ಗ್ರಾಮವಾರು ಪಿ.ನಂಬರ್‌ ಪಟ್ಟಿ ಮಾಡಿ ಬಾಕಿ ಪಿ ನಂಬರ್‌
ಇತ್ಯರ್ಥ ಪಡಿಸಲು ತಹಶೀಲ್ದಾರ್‌ಗಳಿಗೆ ಸೂಚಿಸಿದರು. 2 ವರ್ಷಗಳಿಗಿಂತ ಹೆಚ್ಚು ಅವಧಿಯಿಂದಬಾಕಿ ಇರುವ ಅರೆ ನ್ಯಾಯಿಕ ಪ್ರಕರಣಗಳನ್ನು
ವಾರದಲ್ಲಿ ದಿನಾಂಕಗಳನ್ನು ನಿಗದಿಪಡಿಸಿ ಇತ್ಯರ್ಥಪಡಿಸಿ. ಅರೆ ನ್ಯಾಯಿಕ ಪ್ರಕರಣಗಳೆಲ್ಲಾ ರಿಜಿಸ್ಟರ್‌ ಡ್ಯಾಕುಮೆಂಟ್‌ ಮೇಲೆ ಇದ್ದು, ತಾಲೂಕುವಾರು ಅದಾಲತ್‌ ನಡೆಸಿ ಇತ್ಯರ್ಥಪಡಿಸುವಂತೆ ತಹ ಶೀಲ್ದಾರ್‌ಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿಯ ಹೆಚ್ಚುವರಿ ಆಯುಕ್ತ ಇಸಾವುದ್ದೀನ್‌ ಜೆ.ಗದ್ಯಾಳ, ಅಪರ ಜಿಲ್ಲಾಧಿಕಾರಿ ಡಾ.ಸ್ನೇಹಾ, ಉಪವಿ
ಭಾಗಾಧಿಕಾರಿ ಆನಂದ್‌ ಪ್ರಕಾಶ್‌ ಮೀನಾ, ಯೋಜನಾ ನಿರ್ದೇಶಕ ಸೋಮಶೇಖರ್‌, ತಹಶೀಲ್ದಾ ರರು,ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ಹೈವೆಕಾರಿಡಾರ್‌ಯೋಜನೆಗೆ ಭೂಮಿ ಪಡೆದುಕೊಳ್ಳಲು ಇರುವ ತೊಡಕುಗಳನ್ನುಕಾನೂನು ರೀತಿ ಶೀಘ್ರ
ಪರಿಹರಿಸಿಕೊಳ್ಳಿ. ರೈತರಿಗೆ ಮನವರಿಕೆ ಮಾಡಿ ಮಾಲ್ಕಿಂಗ್‌ ಮತ್ತು ಲ್ಯಾಂಡ್‌ ಪಡೆಯುವುದನ್ನು ಸೆ.30 ರೊಳಗೆ ಪೂರ್ಣಗೊಳಿಸಿ.
– ನವೀನ್‌ ರಾಜ್‌ ಸಿಂಗ್‌, ಬೆಂಗಳೂರು
ವಿಭಾಗದ ಪ್ರಾದೇಶಿಕ ಆಯುಕ್ತ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.