ಹಾಲು ಉತ್ಪಾದಕ ಸಹಕಾರ ಸಂಘಗಳು ಕಂಪ್ಯೂಟರೀಕರಣ
Team Udayavani, Oct 16, 2019, 3:58 PM IST
ಮಾಲೂರು: ಪ್ರಸ್ತುತ ತಂತ್ರಜ್ಞಾನ ಬಳಕೆ ಮಾಡಿಕೊಂಡು ತಾಲೂಕಿನ 169 ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಕಂಪ್ಯೂಟರೀಕರಣ ಮಾಡುತ್ತಿರುವುದಾಗಿ ಶಾಸಕ ಹಾಗೂ ಕೋಚಿಮಲ್ ನ ಅಧ್ಯಕ್ಷ ಕೆ.ವೈ.ನಂಜೇಗೌಡ ತಿಳಿಸಿದರು.
ಪಟ್ಟಣದ ಶಿಬಿರ ಕಚೇರಿಯಲ್ಲಿ ತಾಲೂಕಿನ 6 ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ಪ್ರಥಮ ಹಂತದಲ್ಲಿ 1.37 ಲಕ್ಷ ರೂ. ವೆಚ್ಚದಲ್ಲಿ ಡಿಜಿಟಲ್ ಹಾಲಿನ ತೂಕದ ಯಂತ್ರ, ಸ್ವಯಂ ಹಾಲು ಶೇಖರಣ ಯಂತ್ರಗಳನ್ನು ವಿತರಿಸಿ ಅವರು ಮಾತನಾಡಿದರು.
ಸೋರಿಕೆಗೆ ತಡೆ: ಪ್ರಸ್ತುತ ಆರಂಭವಾಗಿರುವ ಕಂಪ್ಯೂಟರೀಕರಣದಿಂದ ಹಾಲು ಉತ್ಪಾದಕ ಸಹಕಾರ ಸಂಘಗಳು ಕಾಗದ ರಹಿತ ವಾಹಿವಾಟು ನಡೆಸುವ ಜೊತೆಗೆ ಸಣ್ಣ ಪುಟ್ಟ ಲೋಪಗಳನ್ನು ಸರಿಪಡಿಸಿ, ಸೋರಿಕೆ ಹಾಗೂ ಹಣದ ವರ್ಗಾವಣೆ ನೆರವಾಗಿ ನಡೆಸಲು ಸಾಧ್ಯವಾಗಲಿದೆ ಎಂದರು.
3 ಲಕ್ಷ ರೂ. ಸಹಾಯಧನ: ಪ್ರಸ್ತುತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಾಲೂರು ತಾಲೂಕಿನ ಹಾಲು ಉತ್ಪಾದನೆ ಮತ್ತು ಗುಣಮಟ್ಟ ಉತ್ತಮ ಸ್ಥಿತಿಯಲ್ಲಿದ್ದು, ತಾಲೂಕಿನಲ್ಲಿ 105 ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ವಂತ ಕಟ್ಟಡವನ್ನುಹೊಂದಿವೆ. ಇನ್ನೂ 64 ಸಂಘಗಳಿಗೆ ನಿವೇಶನ ಈಗಾಗಲೇ ಇದ್ದು, ಸ್ವಂತ ಕಟ್ಟಡ ನಿರ್ಮಾಣಕ್ಕೆ 3 ಲಕ್ಷ ರೂ. ಸಹಾಯಧನವನ್ನು ಕೋಚಿಮುಲ್ನಿಂದ ನೀಡುತ್ತಿರುವುದಾಗಿ ಅವರು ತಿಳಿಸಿದರು.
ಪ್ರಗತಿಯಲ್ಲಿ ಹಾಸ್ಟೆಲ್ ಕಟ್ಟಡ ಕಾಮಗಾರಿ: ಹಾಲು ಉತ್ಪಾದಕರ ಅನುಕೂಲಕ್ಕಾಗಿ ಕೋಲಾರದಲ್ಲಿ ನಿರ್ಮಾಣವಾಗುತ್ತಿರುವ ಎಂವಿಕೆ ಗೋಲ್ಡನ್ ಡೇರಿ ಕಟ್ಟಡ ಕಾಮಗಾರಿ ಮತ್ತು ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿರುವ ವಿದ್ಯಾರ್ಥಿ ನಿಲಯದ ಕಾಮಗಾರಿಗಳು ಪ್ರಗತಿಯಲ್ಲಿವೆ. ಇದರ ಉಪಯೋಗ ಎರಡೂ ಜಿಲ್ಲೆಯ ರೈತರಿಗೆ ಶೀಘ್ರವಾಗಿ ಸಿಗಲಿದೆ ಎಂದು ವಿವರಿಸಿದರು.
ಸಹಾಯಧನ ವಿತರಣೆ: ಅಕಾಲಿಕವಾಗಿ ಮೃತರಾದ ತೊರ್ನಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘದ ಹಾಲು ಪರೀಕ್ಷಕಿ ಮುನಿರತ್ನಮ್ಮ ಅವರ ಕುಟುಂಬಕ್ಕೆ ಕೋಚಿಮಲ್ ದತ್ತಿ ನಿಧಿಯಿಂದ 50 ಸಾವಿರ ರೂ. ಸಹಾಯಧನ ವಿತರಿಸಲಾಯಿತು. ಈ ವೇಳೆ ಕೋಚಿಮಲ್ ನಿರ್ದೇಶಕಿ ಕಾಂತಮ್ಮ ಸೋಮಣ್ಣ, ಶಿಬಿರ ಕಚೇರಿಯ ಉಪವ್ಯವಸ್ಥಾಪಕ ಚೇತನ್, ವಿಸ್ತರ್ಣಾಧಿಕಾರಿ ಶ್ರೀಧರಮೂರ್ತಿ, ನಾರಾಯಣಸ್ವಾಮಿ, ಶಿವಕುಮಾರ್, ನರಸಿಂಹರೆಡ್ಡಿ, ಕರಿಯಪ್ಪ, ಮರಿಸ್ವಾಮಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್ ಮುಖಂಡರು ಗೈರು
MUST WATCH
ಹೊಸ ಸೇರ್ಪಡೆ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ