ಪ್ಯಾಕ್ಸ್‌ಗಳ ಗಣಕೀಕರಣ: ಜ.1ರಿಂದ ಗ್ರಾಹಕ ಸೇವೆ

ದಕ್ಷಿಣ ಭಾರತದಲ್ಲೇ ಮೊದಲೆಂಬ ಹೆಗ್ಗಳಿಕೆ ಹೆಮ್ಮೆಯ ವಿಷಯ: ಡಿಸಿಸಿ ಬ್ಯಾಂಕ್‌ ಅಧ್ಯಕ್ಷಬ್ಯಾಲಹಳ್ಳಿ ಗೋವಿಂದಗೌಡ

Team Udayavani, Nov 25, 2020, 1:41 PM IST

dcc-bank

ಕೋಲಾರ: ಪ್ರಾಥಮಿಕ ಕೃಷಿ ಸಹಕಾರ ಸಂಘ(ಪ್ಯಾಕ್ಸ್‌)ಗಳನ್ನು ಸಂಪೂರ್ಣ ಗಣಕೀಕರಣ ಜಾರಿಗೊಳಿಸುತ್ತಿರುವ ಸಹಕಾರ ಬ್ಯಾಂಕ್‌ಗಳಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ದಕ್ಷಿಣಭಾರತದಲ್ಲೇ ಪ್ರಥಮವೆಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಜನವರಿ 1 ರಿಂದ ಗ್ರಾಹಕ ಸೇವೆಗೆ ಲೋಕಾರ್ಪಣೆಯಾಗಲಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.

ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿಮಾತನಾಡಿದ ಅವರು, ದೇಶದ ಸಹಕಾರ ಬ್ಯಾಂಕ್‌ಗಳಲ್ಲಿ ಒರಿಸ್ಸಾ ರಾಜ್ಯ ಹೊರತು ಪಡಿಸಿದರೆ ಇಡೀ ದೇಶದಲ್ಲೇ ಪತ್ತಿನ ಸಹಕಾರ ಸಂಘಗಳ ಗಣಕೀಕರಣದ ಸಾಹಸಕ್ಕೆ ಕೈ ಹಾಕಿರುವ ಮೊದಲ ಬ್ಯಾಂಕ್‌ ನಮ್ಮ ಡಿಸಿಸಿ ಬ್ಯಾಂಕ್‌ ಎಂದು ಹರ್ಷ ವ್ಯಕ್ತಪಡಿಸಿದರು.

ಮೈಕ್ರೋ ಎಟಿಎಂ ಸೇವೆಯೂ ಲಭ್ಯ: ಕಡತಗಳಿಂದ ಕಂಪ್ಯೂಟರೀಕರಣದ ಕಾಪಿರೈಟ್‌ಮಾಡುವ ಮುನ್ನ ಸಮರ್ಪಕವಾಗಿ ಪರಿಶೀಲಿಸಿ ದಾಖಲು ಮಾಡಲು ಹೆಚ್ಚುವರಿ ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ನೇಮಿಸಿಕೊಂಡು ಗಣಕೀಕರಣ ಪೂರ್ಣಗೊಳಿಸಬೇಕೆಂದು ಸೂಚಿಸಿದ ಅವರು, ಜನವರಿಯಲ್ಲಿ ಪರಿಪೂರ್ಣ ಆನ್‌ಲೈನ್‌ ಬ್ಯಾಂಕಿಂಗ್‌ ವ್ಯವಸ್ಥೆಯೊಂದಿಗೆ ಮೈಕ್ರೋ ಎಟಿಎಂ ಸೇವೆಯೂ ಲಭ್ಯವಾಗಲಿದೆ. ಎನ್‌ಪಿಎ ಕಡಿಮೆ ಮಾಡುವುದು ಠೇವಣೆ ಹೆಚ್ಚಳ ಮಾಡುವುದು ನಮ್ಮ ಗುರಿಯಾಗಿದೆ ಎಂದರು.

ಇದನ್ನೂ ಓದಿ:ವಾತ್ಸಲ್ಯ ಸಹಾಯಹಸ್ತ ವಿತರಣಾ ಕಾರ್ಯಕ್ರಮಕ್ಕೆ ಡಾ.ಡಿ.ವೀರೇಂದ್ರ ಹೆಗ್ಗಡೆ ಚಾಲನೆ

ಸಭೆಯಲ್ಲಿ ಡಿಸಿಸಿ ಬ್ಯಾಂಕ್‌ ನಿರ್ದೇಶಕರಾದ ಕೆ.ದಯಾನಂದ್‌, ನಾಗೀರೆಡ್ಡಿ, ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕ ಎಂ.ರವಿ. ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆ ಉಪನಿಬಂಧಕರಾದ ಜಿ.ಬಿ. ಶಾಂತ ಕುಮಾರಿ, ಗಣಕೀಕರಣ ಕಾರ್ಯದ ಉಸ್ತುವಾರಿ ವಹಿಸಿರುವ ಸಿಬ್ಬಂದಿಗಳಾದ ವಾಸುದೇವ್‌, ನಾಗೇಶ್‌, ವಿಶ್ವಪ್ರಸಾದ್‌, ಫರ್ನಾಂಡೀಸ್‌ ಇದ್ದರು

179 ಪ್ಯಾಕ್ಸ್‌ಗಳ ಗಣಕೀಕರಣ ಪೂರ್ಣ

ಬ್ಯಾಂಕ್‌ ಎಜಿಎಂ ಶಿವಕುಮಾರ್‌ ಮಾತನಾಡಿ,ಕೋಲಾರ ಜಿಲ್ಲೆಯ86, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ105 ಪ್ಯಾಕ್ಸ್‌ ‌ ಗಳು ಸೇರಿದಂತೆ ಒಟ್ಟು ಎರಡು ಜಿಲ್ಲೆಯಲ್ಲಿ 191 ಮೈಗ್ರೇಷ್‌ನ್‌ ಹೊಂದಿದೆ. ಕೋಲಾರ ಜಿಲ್ಲೆಯಲ್ಲಿ82 ಮತ್ತು ಚಿಕ್ಕಬಳ್ಳಾಪುರದಲ್ಲಿ97 ಪ್ಯಾಕ್ಸ್‌ ಗಳು ಸೇರಿದಂತೆ ಒಟ್ಟು179 ಗಣಕೀರಣ ಮುಗಿದಿದೆ.ಕೋಲಾರದಲ್ಲಿ4 ಮತ್ತು ಚಿಕ್ಕಬಳ್ಳಾಪುರದಲ್ಲಿ8 ಪ್ಯಾಕ್ಸ್‌ಗಳ ಗಣಕೀಕರಣ ಅಂತಿಮ ಹಂತದಲ್ಲಿದೆ ಎಂದರು.

ಐತಿಹಾಸಿಕ ಕ್ಷಣಕ್ಕೆ ಸಹಕಾರ ಸಚಿವರು

ಸಂಪೂರ್ಣ ಪ್ಯಾಕ್ಸ್‌ ಗಣಕೀಕರಣ ವ್ಯವಸ್ಥೆಯ ಲೋಕಾರ್ಪಣೆಗೆ ರಾಜ್ಯದ ಸಹಕಾರ ಸಚಿವರು, ಸಹಕಾರಿ ದಿಗ್ಗಜರು, ಸಹಕಾರಿಗಳು ಪಾಲ್ಗೊಳ್ಳ ಲಿದ್ದು, ಸಹಕಾರಿ ರಂಗದಲ್ಲಿ ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದ ಗೌಡ ತಿಳಿಸಿದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಎರಡು ಜಿಲ್ಲೆಗಳ 191 ಪ್ಯಾಕ್ಸ್‌ ಗಳ ಸಂಪೂರ್ಣ ಮಾಹಿತಿ ಗಣಕೀಕರಣ ಗೊಂಡು ಪಾರದರ್ಶಕ ಆಡಳಿತಕ್ಕೆ ಡಿಸಿಸಿ ಬ್ಯಾಂಕ್‌ ದೇಶದಲ್ಲೇ ಮಾದರಿಯಾಗಲಿದೆ ಎಂದರು.

ಬಾಕಿ ಇರುವ ಎಲ್ಲಾ ಪ್ಯಾಕ್ಸ್‌ಗಳ ಗಣಕೀಕರಣವನ್ನು ಡಿಸೆಂಬರ್‌ 15 ರೊಳಗೆ ಮುಗಿಸಲು ಗಡುವು ನೀಡಲಾಗುತ್ತಿದೆ. ಅದರೊಳಗೆ ಈ ಕಾರ್ಯ ಮುಗಿಸಿ, ಜನವರಿ 1ಕ್ಕೆ ಲೋಕಾರ್ಪಣೆ ಮಾಡಲು ಸಿದ್ಧಗೊಂಡಿರಬೇಕು.

-ಸಿದ್ದನಗೌಡ ನೀಲಪ್ಪನವರ್‌, ಸಹಕಾರ ಸಂಘಗಳ ಉಪನಿಬಂಧಕ

 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.