ಪ್ರಾಥಮಿಕ ಶಾಲಾ ಶಿಕ್ಷಕರ ಹಿಂಬಡ್ತಿ ಕ್ರಮಕ್ಕೆ ಖಂಡನೆ

ಡಿಡಿಪಿಐ ಕಚೇರಿ ಮುಂದೆ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದಿಂದ ಪ್ರತಿಭಟನೆ

Team Udayavani, Jun 30, 2019, 1:02 PM IST

kolar-tdy-2..

ಕೋಲಾರ ಡಿಡಿಪಿಐ ಕಚೇರಿ ಮುಂದೆ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘ ದಿಂದ ಶನಿವಾರ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ನೀಡಿರುವ ಹಿಂಬಡ್ತಿಯ ಕ್ರಮವನ್ನು ಖಂಡಿಸಿದರು.

ಕೋಲಾರ: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರ ನೀಡಿರುವ ಹಿಂಬಡ್ತಿಯ ಕ್ರಮ ಖಂಡಿಸಿ, ಇಲ್ಲಿನ ಡಿಡಿಪಿಐ ಕಚೇರಿ ಮುಂದೆ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಜಿಲ್ಲಾ ಮತ್ತು ತಾಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ರವಿಕುಮಾರ್‌ ಮಾತನಾಡಿ, ರಾಜ್ಯ ಸರ್ಕಾರ ಹೊಸ ವೃಂದ ಮತ್ತು ವೃಂದಬಲ ನಿರ್ಧರಿಸುವ ಆದೇಶವನ್ನು ಕಳೆದ 2017ರ ಮೇ 19 ರಂದು ರಾಜ್ಯ ಪತ್ರಕ್ಕೆ ತಿದ್ದುಪಡಿ ಮಾಡಿ ಒಂದರಿಂದ 5ನೇ ತರಗತಿಯ ವೃಂದಕ್ಕೆ ಹಿಂಬಡ್ತಿ ಹೊಂದಿರುವ ಪದವೀಧರ ಶಿಕ್ಷಕರನ್ನು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೃದಂಕ್ಕೆ ವಿಲೀನ ಮಾಡಿ ಮುಂದಿನ ಬಡ್ತಿಗಳಿಗೆ ಸೇವಾ ಜೇಷ್ಠತೆ ಕಾಪಾಡುವಂತಾಗಬೇಕು ಎಂದು ಒತ್ತಾಯಿಸಿದರು.

ವಿಷಯವಾರು ಹುದ್ದೆ ಸೃಷ್ಟಿಸಿ: ಪ್ರಸ್ತುತ ಸಾಲಿನ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಯಲ್ಲಿ ಜಿಪಿಟಿ ಶಿಕ್ಷಕರ ಖಾಲಿ ಹುದ್ದೆಗಳಿಗೆ ಅವಕಾಶವನ್ನು ನೀಡಿ ವಿಷಯವಾರು ಹುದ್ದೆಗಳನ್ನು ಸೃಷ್ಟಿಸಬೇಕಾಗಿದೆ ಎಂದು ಆಗ್ರಹಿಸಿದರು.

ಪದವೀಧರ ಶಿಕ್ಷಕರಿಗೆ ಮಾರಕ: ಒಂದನೇ ತರಗತಿಯಿಂದ 7ನೇ ತರಗತಿಗಳಿಗೆ ನೇಮಕಾತಿಯಾದ ಶಿಕ್ಷಕರಲ್ಲಿ ಪದವಿ ವಿದ್ಯಾರ್ಹತೆ ಮತ್ತು ಸೇವಾನುಭವ ಹೊಂದಿರುವ ಪದವೀಧರ ಸೇವಾನಿರತ ಶಿಕ್ಷಕರರೆಲ್ಲರನ್ನು ಒಂದರಿಂದ 5ನೇ ತರಗತಿಯ ವೃಂದಕ್ಕೆ ಹಿಂಬಡ್ತಿಯನ್ನು ನೀಡಲಾಗಿದೆ ಎಂದು ದೂರಿದರು.

ಸೇವಾ ಅನುಭವಕ್ಕೆ ಬೇಲೆಯೇ ಇಲ್ಲ: ಒಂದೇ ತರಗತಿಯಿಂದ ಐದನೇ ತರಗತಿ ವೃಂದದ ಶಿಕ್ಷಕರಿಗೆ 6ನೇ ತರಗತಿಯಿಂದ 8ನೇ ತರಗತಿಯ ವೃಂದಕ್ಕೆ ಬಡ್ತಿ ಪ್ರಮಾಣ ಶೇ.25 ನಿಗದಿಪಡಿಸಿ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ನೀಡಲು ಸೂಚಿಸಲಾಗಿರುವ ರಾಜ್ಯ ಸರ್ಕಾರದ ಕ್ರಮದಿಂದ ನಮ್ಮ ಸೇವಾನುಭವಕ್ಕೆ ಯಾವುದೇ ಬೆಲೆ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಮುನಿರಾಜು, ಉಪಾಧ್ಯಕ್ಷ ರಘುನಾಥರೆಡ್ಡಿ, ಖಜಾಂಚಿ ಎಂ.ಎಸ್‌.ರವಿಪ್ರಕಾಶ್‌, ಸಹ ಕಾರ್ಯದರ್ಶಿ ಸುಬ್ರಮಣಿ, ತಾಲೂಕು ಅಧ್ಯಕ್ಷರಾದ ಭಾಸ್ಕರ್‌ರೆಡ್ಡಿ, ಚನ್ನಪ್ಪ, ಶಿವರಾಜ್‌, ವೇಣುಗೋಪಾಲ್, ವೆಂಕಟಾಚಲಪತಿ, ಶ್ರೀನಿವಾಸ್‌ಮೂರ್ತಿ, ಶಿಕ್ಷಕರಾದ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಿ.ಬಾಬು, ರವಿಕುಮಾರ್‌, ಮುನಿಸ್ವಾಮಿರೆಡ್ಡಿ, ಪಾಪಣ್ಣ, ಬೈರೇಗೌಡ, ಸುಬ್ರಮಣಿ, ಮುರಳಿ, ತ್ರಿವೇಣಿ, ಅನಂದ್‌ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.