ಜೆಎನ್ಯು ಘಟನೆಗೆ ತೀವ್ರ ಖಂಡನೆ
Team Udayavani, Jan 10, 2020, 2:43 PM IST
ಮುಳಬಾಗಿಲು: ಎಬಿವಿಪಿ ಕಾರ್ಯಕರ್ತರು ಎನ್ನಲಾದ ಮುಸುಕುದಾರಿಗಳು ನವ ದೆಹಲಿ ಜೆಎನ್ಯು ವಿದ್ಯಾರ್ಥಿ ಗಳು ಮತ್ತು ಪ್ರೊಫೆಸರ್ಗಳ ನಡೆಸಿದ ದಾಳಿ ಖಂಡಿಸಿ ಎಸ್ಎಫ್ಐ ಕಾರ್ಯಕರ್ತರು ಸೂಕ್ತ ಕ್ರಮಕ್ಕೆ ಆಗ್ರಹಿಸಿ ನಗರದ ಮಿನಿವಿಧಾನಸೌಧ ಎದುರು ಪ್ರತಿಭಟನೆ ನಡೆಸಿ, ಶಿರಸ್ತೇದಾರ್ ಜಯರಾಂ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ಅಂಬ್ಲಿಕಲ್ ಶಿವಪ್ಪ, ಜೆಎನ್ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಯಿಶಿ ಘೋಷ್ ಮತ್ತು ಸೂರಿ ಅವರನ್ನು ಸಮಾಜ ವಿರೋಧಿಗಳು ಥಳಿಸಿದ್ದಾರೆ ಎಂದು ದೂರಿದರು. ಜೆಎನ್ಯು ವಿದ್ಯಾರ್ಥಿಗಳ ಮೇಲಿನ ನಿರಂತರ ಹಲ್ಲೆಗಳು ನಡೆಯುತ್ತಿರು ವುದನ್ನು ನೋಡಿದರೆ ವಿದ್ಯಾರ್ಥಿಗಳ ಶಕ್ತಿಯನ್ನು ಎಲ್ಲಾ ರೀತಿಯಲ್ಲೂ ಧಮನ ಮಾಡಲು ಪ್ರಯತ್ನ ಮಾಡಲಾಗುತ್ತಿದೆ. ಭಾನುವಾರ ರಾತ್ರಿ 8 ಗಂಟೆಗೆ ನೆಹರು ವಿಶ್ವವಿದ್ಯಾಲಯದ ಬಾಗಿಲಿಗೆ ತಲುಪುವ ಬಾಬಾ ಗಂಧರ್ವ ರಸ್ತೆಯಲ್ಲಿನ ಕರೆಂಟ್ ಕೂಡ ತೆಗೆದು, ಎಬಿವಿಪಿ ಕಾರ್ಯಕರ್ತರು ಎನ್ನಲಾದ ಮುಸುಕುದಾರಿಗಳು ವಿದ್ಯಾರ್ಥಿನಿಯರ ಹಾಸ್ಟೆಲ್ಗೆ ನುಗ್ಗಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದು ದೂರಿದರು.
ಎಸ್ಎಫ್ಐ ತಾಲೂಕು ಅಧ್ಯಕ್ಷ ಸುರೇಶ್ಬಾಬು, ಕಾರ್ಯದರ್ಶಿ ಆನಂದ್, ಉಪಾಧ್ಯಕ್ಷರಾದ ಶಶಿಕುಮಾರ್, ಅಂಕಿತಾ, ಸಹ ಕಾರ್ಯದರ್ಶಿ ಶಂಕರ್, ಅಭಿಷೇಕ್, ತಾಲೂಕು ಸದಸ್ಯರಾದ ಭಾರ್ಗವಿ, ಪ್ರವೀಣ್, ತಾಲೂಕು ಮುಖಂಡರಾದ ಅನುಪ್ರಿಯಾ ಮತ್ತು ಸುಶ್ಮಿತ ಪಾಲ್ಗೊಂಡಿದ್ದರು.0
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್ ಮುಖಂಡರು ಗೈರು
MUST WATCH
ಹೊಸ ಸೇರ್ಪಡೆ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ