ಹಬ್ಬದಂದೇ ಕಾಂಗ್ರೆಸ್‌ ಸಭೆ: ಗದ್ದಲ 


Team Udayavani, Jan 3, 2022, 1:12 PM IST

ಹಬ್ಬದಂದೇ ಕಾಂಗ್ರೆಸ್‌ ಸಭೆ: ಗದ್ದಲ 

ಬಂಗಾರಪೇಟೆ: ಊರ ಹಬ್ಬದ ದಿನವೇ ಗ್ರಾಮದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆ ಹಮ್ಮಿಕೊಂಡಿದ್ದಕ್ಕೆಗುಂಪೊಂದು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮಾತಿನಚಕಮಕಿ ನಡೆದು ಕೆಲ ಕಾಲ ಬಿಗುವಿನ ವಾತಾವರಣನಿರ್ಮಾಣವಾದ ಘಟನೆ ಹುಲಿಬೆಲೆ ಗ್ರಾಮದಲ್ಲಿ ನಡೆಯಿತು.

ಹಲವು ದಶಕಗಳ ನಂತರ ಗ್ರಾಮದ ಕೆರೆ ತುಂಬಿರುವುದರಿಂದ ಗ್ರಾಮಸ್ಥರೆಲ್ಲರೂ ಒಂದಾಗಿ ಪಕ್ಷಭೇದವಿಲ್ಲದೆ ಊರ ಹಬ್ಬ ಆಚರಣೆ ಮಾಡಿ, ಬಾಗಿನ ಅರ್ಪಿಸಲು ಮುಂದಾಗಿದ್ದರು. ಅದರಂತೆ ಭಾನುವಾರ ಕಾರ್ಯಕ್ರಮ ನಿಗದಿಪಡಿಸಲಾಗಿತ್ತು. ಗ್ರಾಮಸ್ಥರೆಲ್ಲರೂ ಹಬ್ಬಆಚರಣೆ ಮಾಡುವ ಸಿದ್ಧತೆಯಲ್ಲಿದ್ದರೆ, ಕಾಂಗ್ರೆಸ್‌ ಮುಖಂಡರು ಗ್ರಾಮದಲ್ಲಿ ಕಾರ್ಯಕರ್ತರ ಸಭೆ ಆಯೋಜಿಸಿದ್ದು ಎಲ್ಲರ ಕಣ್ಣು ಕೆಂಪಾಗುವಂತೆಮಾಡಿತು.

ಕಾಂಗ್ರೆಸ್‌ ಸಭೆ ಆರಂಭವಾಗುತ್ತಿದ್ದಂತೆ ಗುಂಪೊಂದು ಗ್ರಾಮದಲ್ಲಿ ಎಲ್ಲರೂ ಒಂದಾಗಿ ಹಬ್ಬ ಮಾಡಲು ಹೇಳಿ, ಈಗ ಕಾಂಗ್ರೆಸ್‌ ಸಭೆ ನಡೆಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿತು. ಸಭೆಯನ್ನು ರದ್ದು ಮಾಡಿ ಇಲ್ಲವೇ ಹಬ್ಬವನ್ನು ನಿಲ್ಲಿಸಿ ಎಂದು ಪಟ್ಟು ಹಿಡಿದು ಗಲಾಟೆಆರಂಭಿಸಿದರು. ಇದರಿಂದ ಕೆರಳಿದ ಕಾಂಗ್ರೆಸ್‌ ಮುಖಂಡರು ಮಾತಿನ ಚಕಮಕಿ ನಡೆಸಿದರು.

ಗ್ರಾಮದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ನಂತರ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಸಮಾಧಾನಪಡಿಸಲುಯತ್ನಿಸಿದರೂ ಫ‌ಲ ಸಿಗಲಿಲ್ಲ.ತೀವ್ರ ವಿರೋಧದ ನಡುವೆಯೂ ಕಾಂಗ್ರೆಸ್‌ ಸಭೆ ತರಾತುರಿಯಲ್ಲಿ ಮುಗಿಸಿ ಮುಖಂಡರು ಹೊರನಡೆದರು. ಸಭೆ ಮುಗಿಯುತ್ತಿದ್ದಂತೆ ಮತ್ತೆ ಎರಡು ಗುಂಪುಗಳ ನಡುವೆ ಮಾತಿನ ವಾಗ್ಧಾಳಿ ಮುಂದುವರಿಯಿತು. ಹಲವು ವರ್ಷಗಳಿಂದ ನನೆಗುದಿಗೆ ಬಿದಿದ್ದ ರಸ್ತೆ ಕಾಮಗಾರಿಯನ್ನೂ ಇಂದೇ ಮಾಡಲುಮುಂದಾಗಿದ್ದೂ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಯಿತು.

ಊರ ಹಬ್ಬ ಆಚರಿಸಬಾರದೆಂದು ಒಂದು ಗುಂಪು, ಮಾಡಬೇಕೆಂದು ಮತ್ತೂಂದು ಗುಂಪು ಹಠಕ್ಕೆಬಿದ್ದವರಂತೆ ಗಲಾಟೆ ಮಾಡುತ್ತಿದ್ದರೂ ಅಲ್ಲಿದ್ದವರು ಮೂಕ ಪ್ರೇಕ್ಷಕರಂತೆ ಗಮನಿಸುತ್ತಿದ್ದರೇ ವಿನಃ, ಗಲಾಟೆ ಶಮನ ಮಾಡಲು ಮುಂದಾಗಿಲಿಲ್ಲ. ಈ ವೇಳೆ ಗ್ರಾಮದ ಮುಖಂಡರು ಸ್ಥಳದಿಂದ ನಿರ್ಗಮಿಸಿದರು.

ಸಭೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಎಂ.ಎಲ್‌. ಅನಿಲ್‌ಕುಮಾರ್‌, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಎಚ್‌. ಕೆ.ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷಬಿ.ನಾರಾಯಣಗೌಡ, ನಿರ್ದೇಶಕರಾದವೆಂಕಟಾಚಲಪತಿ, ಗ್ರಾಪಂ ಅಧ್ಯಕ್ಷ ಆರ್‌.ವಿ.ಸುರೇಶ್‌,ಮಾಜಿ ಅಧ್ಯಕ್ಷ ಜಾಫ‌ರ್‌, ವಿಎಸ್‌ಎಸ್‌ಎನ್‌ ಅಧ್ಯಕ್ಷ ವೆಂಕಟೇಶ್‌, ಎಪಿಎಂಸಿ ನಿರ್ದೇಶಕ ಡೋಲುನಾರಾಯಣಸ್ವಾಮಿ, ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷನೈಸ್‌ ರಘುನಾಥ್‌, ಮುಖಂಡರಾದ ದೇಶಿಹಳ್ಳಿ ವೆಂಕಟರಾಮ್‌, ಬಸವರಾಜ್‌ ಇತರರಿದ್ದರು.

 

 

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.