ರೇಣುಕಾಚಾರ್ಯ, ಸುಧಾಕರ್‌ ವರ್ತನೆ ಖಂಡಿಸಿ ಪ್ರತಿಭಟನೆ


Team Udayavani, Mar 13, 2020, 3:47 PM IST

KOLAR-TDY-1

ಶ್ರೀನಿವಾಸಪುರ: ಶಾಸಕ ರಮೇಶ್‌ಕುಮಾರ್‌, ಉತ್ತಮ ವ್ಯಕ್ತಿತ್ವ ಹೊಂದಿದ್ದು, ಸಮಾಜದ ಎಲ್ಲ ವರ್ಗದವರ ದನಿಯಾಗಿದ್ದಾರೆ. ಜತೆಗೆ ರಾಜ್ಯದ ಮುತ್ಸದ್ದಿ ರಾಜಕಾರಣಿಯಾಗಿ ಕೆಲಸ ಮಾಡುತ್ತಿರುವ ಅವರ ಬಗ್ಗೆ ಕೀಳಾಗಿ ಮಾತನಾಡಿರುವ ರೇಣುಕಾಚಾರ್ಯ ಹಾಗೂ ಸುಧಾಕರ್‌ ವರ್ತನೆ ಖಂಡಿಸಿ, ಕಾಂಗ್ರೆಸ್‌ನ ನೂರಾರು ಮಂದಿ ಕಾರ್ಯಕರ್ತರು ಪಟ್ಟಣದ ಬಸ್‌ ನಿಲ್ದಾಣದ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಇಬ್ಬರ ಪ್ರತಿಕೃತಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ವಿವಿಧ ಭಾಗಗಳಿಂದ ಬಂದಿದ್ದ ಕಾಂಗ್ರೆಸ್‌ ಕಾರ್ಯಕರ್ತರು, ತಾಲೂಕು ಪಂಚಾಯಿತಿ ಕಚೇರಿ ಮುಂಭಾಗದಿಂದ ರೇಣುಕಾಚಾರ್ಯ ಪ್ರತಿಕೃತಿಯೊಂದಿಗೆ ಬಸ್‌ ನಿಲ್ದಾಣದವರಿಗೆ ಮೆರವಣಿಗೆ ನಡೆಸಿದರು. ನಂತರ ನಿಲ್ದಾಣದ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಶಾಸಕ ಕೆ.ಆರ್‌.ರಮೇಶ್‌ಕುಮಾರ್‌ ಬಗ್ಗೆ ಹಗುರವಾಗಿ ಮಾತನಾಡಿದ ರೇಣುಕಾಚಾರ್ಯ ಹಾಗು ಸುಧಾಕರ್‌ ವಿರುದ್ಧ ಘೋಷಣೆ ಕೂಗಿದರು.

ಶಾಸಕರ ವರ್ಚಸ್ಸು ಕುಗ್ಗಿಸುವ ಕೆಲಸ: ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ದಿಂಬಾಲ್‌ ಅಶೋಕ್‌ ಮಾತನಾಡಿ, ಶಾಸಕ ರಮೇಶ್‌ಕುಮಾರ್‌ ವರ್ಚಸ್ಸು ಕುಗ್ಗಿಸುವ ಸಲುವಾಗಿ ಕೆಲವು ಗಂಭೀರ ಆರೋಪ ಮಾಡಿದ್ದಾರೆ. ಕೊಲೆ ಪ್ರಕರಣಗಳ ಬಗ್ಗೆ ಮಾತನಾಡಿದ್ದಾರೆ. ಆದರೆ ಮಾಡದ ಕೆಲಸಗಳನ್ನು ಅವರ ಮೇಲೆ ಹಾಕಿದ್ದರೂ, ಅದರಿಂದ ಖುಲಾಸೆಯಾಗಿದ್ದಾರೆ. ಆದರೂ ರಮೇಶ್‌ ಕುಮಾರ್‌ ಕೊಲೆ ಮಾಡಿದ್ದಾರೆ ಎಂದು ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಅವರಿಗೆ ತಾಕತ್ತಿದ್ದರೆ ಕೋರ್ಟ್‌ಗೆ ಹೋಗಬೇಕು. ಆದರೆ ಬಾಯಿಗೆ ಬಂದದ್ದನ್ನು ಮಾತನಾಡುವುದು ಅವರಿಗೆ ಶೋಭೆ ತರುವಂತಹದ್ದಲ್ಲ ಎಂದು ಆರೋಪಿಸಿರು.

ಸುಧಾರಕರ್‌ ಮೊದಲು ರಾಜಕಾರಣ ತಿಳಿದುಕೊಳ್ಳಲಿ: ಚಿಕ್ಕಬಳ್ಳಾಪುರದ ಸುಧಾಕರ್‌, ಮಟ್ಟಿಗೆ ಹೇಳುವುದಾದರೆ ಹಣದ ಆಸೆಯಿಂದ ಪಕ್ಷ ಬದಲಾವಣೆ ಮಾಡಿದ್ದಾರೆ. ಇದುವರೆಗೂ ಕೆ.ಸಿ.ವ್ಯಾಲಿ, ಎತ್ತಿನ ಹೊಳೆ ವಿಚಾರದ ಬಗ್ಗೆ ಬಾಯಿ ತೆರೆದಿಲ್ಲ. ಅಂತಹವರು ರಮೇಶ್‌ಕುಮಾರ್‌ ಬಗ್ಗೆ ಮಾತನಾಡುತ್ತಾರೆ. ಅವರ ರಾಜಕಾರಣ ಕುತಂತ್ರವಾಗಿದ್ದು, ರಮೇಶ್‌ಕುಮಾರ್‌ ವ್ಯಕ್ತಿತ್ವವನ್ನು ತೇಜೋವಧೆ ಮಾಡಲು ನಡೆಸುತ್ತಿರುವ ಹುನ್ನಾರವಾಗಿದೆ. ಹೀಗೆ ಮಾತನಾಡುತ್ತಿದ್ದರೆ ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಪ್ರತಿಭಟನೆ ನಡೆಸಬೆಕಾಗುತ್ತದೆ ಎಂದು ಎಚ್ಚರಿಸಿದರು.

ಕ್ಷೇತ್ರಕ್ಕೆ ಬಂದು ಶಾಸಕರ ಕುರಿತು ತಿಳಿದುಕೊಳ್ಳಿ: ರಾಯಲ್ಪಾಡು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಂಜಯ್‌ರೆಡ್ಡಿ ಮಾತನಾಡಿ, ರಮೇಶ್‌ ಕುಮಾರ್‌ ಈ ನಾಡಿನ ಜನಪ್ರಿಯ ನಾಯಕರಾಗಿದ್ದಾರೆ. ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರಕ್ಕೆ ಮಾತ್ರವಲ್ಲದೆ ಕರ್ನಾಟಕದ ನಾಯಕರಾಗಿದ್ದಾರೆ. ತಮ್ಮ ಜೀವಮಾನವನ್ನು ಜನರಿಗೆ ಮುಡಿಪಾಗಿಟ್ಟು ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಎಲ್ಲೋ ಇದ್ದು ಮಾತನಾಡುವ ವಿರೋಧಿಗಳು ಈ ಕ್ಷೇತ್ರಕ್ಕೆ ಬಂದು ಜನರನ್ನು ವಿಚಾರಿಸಬೇಕು. ಆಗ ನಿಜಾಂಶ ಗೊತ್ತಾಗುತ್ತದೆ. ಆದರೆ ಉತ್ತಮ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಶಾಸಕರ ಚಾರಿತ್ರ್ಯವಧೆ ಮಾಡುವುದನ್ನು ನಾವು ಸಹಿಸುವುದಿಲ್ಲ. ಅದಕ್ಕೆ ಪ್ರತ್ಯುತ್ತರವಾಗಿ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಬಿ.ವಿ.ವೆಂಕಟರೆಡ್ಡಿ, ಕೆ.ಕೆ. ಮಂಜುನಾಥ್‌, ವೇಣು, ಗೌನಿಪಲ್ಲಿ ಮಧು, ಪುರಸಭೆ ಸದಸ್ಯ ಬಿ.ಆರ್‌.ಬಾಸ್ಕರ್‌, ಉಪ್ಪರಪಲ್ಲಿ ತಿಮಯ್ಯ, ರಾಮಾಂಜಮ್ಮ, ಶಿವರಾಜ್‌ ಇತರರು ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.