ಕೆರೆ ಒತ್ತುವರಿ ಮಾಡಿ ಎಸ್‌ಎನ್‌ ಸಿಟಿ ನಿರ್ಮಾಣ

ಸಂಸದ ಮುನಿಸ್ವಾಮಿ ಗಂಭೀರ ಆರೋಪ; ಒತ್ತುವರಿ ಮಾಡಿದ್ರೆ ಸಾಬೀತು ಸಾಬೀತು ಮಾಡಲು ಮಾಡಲು ಶಾಸಕರಿಂದ  ಸವಾಲು

Team Udayavani, Aug 9, 2021, 4:07 PM IST

ಕೆರೆ ಒತ್ತುವರಿ ಮಾಡಿ ಎಸ್‌ಎನ್‌ ಸಿಟಿ ನಿರ್ಮಾಣ

ಬಂಗಾರಪೇಟೆ: ಕೆರೆ-ಕುಂಟೆ ನೆಲಸಮ ಮಾಡಿ ಹಿಂದೆ ಡೀಸಿ ಆಗಿದ್ದ ಡಿ.ಕೆ.ರವಿ ಸರ್ಕಾರದ ವಶಕ್ಕೆ ಪಡೆದಿದ್ದ ಜಾಗದಲ್ಲಿ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಅಕ್ರಮವಾಗಿ ಎಸ್‌.ಎನ್‌. ಸಿಟಿ ನಿರ್ಮಿಸಿದ್ದಾರೆ ಎಂದು ಸಂಸದ ಮುನಿಸ್ವಾಮಿ ಗಂಭೀರ ಆರೋಪ ಮಾಡಿದರು.

ತಾಲೂಕಿನ ಬೀರಂಡಹಳ್ಳಿ ಗ್ರಾಮದಿಂದ ನಟೇಶ್‌ ಮನೆಯವರೆಗೂತಮ್ಮ ಸಂಸದರ ನಿಧಿಯಿಂದ ನಿರ್ಮಾಣ ಮಾಡಿರುವ ರಸ್ತೆ ವೀಕ್ಷಣೆ ಮಾಡಿ ಮಾತನಾಡಿದ ಅವರು, ಕಾಂಗ್ರೆಸ್‌ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ತಮ್ಮ 8 ವರ್ಷಗಳ ಅಧಿಕಾರಾವಧಿಯಲ್ಲಿ, ಪ್ರಾರಂಭದಲ್ಲಿ ಐದು
ಎಕರೆ ಜಮೀನು ಖರೀದಿ ಮಾಡಿ, ಅಕ್ಕಪಕ್ಕದಲ್ಲಿ ಹತ್ತಾರು ಎಕರೆ ಜಮೀನು, ಗೋಮಾಳ ಹಾಗೂ ಖರಾಬು ಜಮೀನು ಒತ್ತುವರಿ ಮಾಡಿಕೊಳ್ಳುವುದೇ ಇವರ ಕಾಯಕವಾಗಿದೆ ಎಂದು ದೂರಿದರು.

ತಾಯಿ ಹೆಸರಿಗೆ ಮಂಜೂರು: ಕೋಲಾರ ಮುಖ್ಯ ರಸ್ತೆಯ ಬಳಿ ನಿರ್ಮಾಣ ಮಾಡಿರುವ ಎಸ್‌ಎನ್‌ ಸಿಟಿಗೆ ಹೋಗುವ ದಾರಿಯನ್ನು ಈ ಹಿಂದೆ ರಾಜ್ಯಪಾಲರ ಹೆಸರಿಗೆ ನೋಂದಣಿಯಾಗಿದ್ದು, ಈ ಜಾಗವನ್ನೇ ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಕಮಾನು ನಿರ್ಮಾಣ ಮಾಡಿದ್ದಾರೆ. ಇದರ ಒಳಗೆ ಇದ್ದ ಕೆರೆಗಳು,ಕುಂಟೆಗಳು ಮಾಯವಾಗಿವೆ. ಇದರಲ್ಲಿ ಒಂದು ಕೆರೆ ನಿರ್ಮಾಣ ಮಾಡಿ ಗೇಟ್‌ ಹಾಕಲು ಅವರಿಗೆ ಏನು
ಅಧಿಕಾರವಿದೆ. ಈ ಜಮೀನಿನೊಳಗೆ ಕಲ್ಲು ಬಂಡೆಗಳಾದ 4 ಎಕರೆ ಜಮೀನನ್ನು ತಾಲೂಕು ದರಕಾಸ್ತು ಸಮಿತಿ ಅಧ್ಯಕ್ಷರಾಗಿರುವ ಶಾಸಕರೇ ತನ್ನ ತಾಯಿ ಮುನಿಯಮ್ಮ ಹೆಸರಿನಲ್ಲಿ ಮಂಜೂರು ಮಾಡಿಸಿಕೊಂಡಿರುವುದು ಸರಿಯೇ ಎಂದು ಪ್ರಶ್ನಿಸಿದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಿ.ವಿ.ಮಹೇಶ್‌, ಬಿಜೆಪಿ ತಾಲೂಕು ಅಧ್ಯಕ್ಷ ರಾಮಾಪುರ ನಾಗೇಶ್‌, ಮುಖಂಡ ಎಂ.ಪಿ.ಶ್ರೀನಿವಾಸಗೌಡ, ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಪಿ.ಅಮರೇಶ್‌, ಮುಖಂಡರು ಹಾಜರಿದ್ದರು

ಇದನ್ನೂ ಓದಿ:ಅಫ್ಘಾನಿಸ್ತಾನದಿಂದ ದೇಶದ ಹಿಂದೂ, ಸಿಖ್ಖರನ್ನು ಕರೆತರಲು ವ್ಯವಸ್ಥೆ ಮಾಡಿ : ಕಾಂಗ್ರೆಸ್

ಒತ್ತುವರಿ ಸಾಬೀತು ಮಾಡಿದ್ರೆ ಜೀತದಾಳಾಗಿರುವೆ: ಶಾಸಕ
ಎಸ್‌.ಎನ್‌.ಸಿಟಿ ಲೇಔಟ್‌ ನಿರ್ಮಾಣಕ್ಕೆ ಕೆರೆ ಕುಂಟೆ ಒತ್ತುವರಿ ಮಾಡಿಕೊಂಡಿಲ್ಲ, ಅದನ್ನು ಸಾಬೀತು ಮಾಡಿದರೆ ನಿಮ್ಮ ಮನೆಯಲ್ಲಿ ಜೀತದಾಳಾಗಿ ಕೆಲಸ ಮಾಡುವೆ ಎಂದು ಸಂಸದ ಮುನಿಸ್ವಾಮಿಗೆ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಸವಾಲೆಸೆದರು. ಎಸ್‌.ಎನ್‌.ಸಿಟಿ ಲೇಔಟ್‌ ಸೇರಿ ನಾನು ಮಾಡಿರುವ ಯಾವುದೇ ಲೇಔಟ್‌ಗಳ ಬಗ್ಗೆ ತನಿಖೆಯಾಗಲಿ, ಯಾವುದರಲ್ಲಿಯೂ ಒಂದಿಂಚು ಕಬಳಿಕೆ ಮಾಡಿಲ್ಲ. ಇಡೀ ಜಿಲ್ಲೆಯಲ್ಲಿ ಆಧುನಿಕವಾಗಿ ಹಾಗೂ ಎಲ್ಲಾ ದಾಖಲೆಗಳಂತೆ ಕಾನೂನುಬದ್ಧವಾಗಿಯೇ ಎಸ್‌. ಎನ್‌.ಸಿಟಿ ಲೇಔಟ್‌ ನಿರ್ಮಾಣ ಮಾಡಲಾಗಿದೆ. ಈ ಹಿಂದೆ ಎಸ್‌.ಎನ್‌.ಸಿಟಿಗೆ ಬರುತ್ತಿದ್ದ ಸಂಸದ ಎಸ್‌. ಮುನಿಸ್ವಾಮಿ ಲೇಔಟ್‌ನಲ್ಲಿ 100ಕ್ಕೆ 100 ಅಡಿಗಳ ಸೈಟ್‌ ಉಚಿತವಾಗಿ ನೀಡುವಂತೆ ಕೇಳಿದ್ದರು, ನಾನ್ಯಾಕೆ ನೀಡಬೇಕೆಂದು ಹೇಳಿದ್ದಕ್ಕೆ ನನ್ನ ವಿರುದ್ಧ ರಾಜಕೀಯ ಷಡ್ಯಂತರ ಮಾಡಿ ಪ್ರತಿ ದಿನ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಮುಂದಿನ ದಿನಗಳಲ್ಲಿ ಅಕ್ರಮವಾಗಿ ಜಲ್ಲಿ ಕ್ರಷರ್‌ಗಳನ್ನು ಪಡೆದಿರುವ ಸಂಸದರ ವಿರುದ್ಧ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಎಚ್ಚರಿಸಿದರು

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.