ಅಭ್ಯರ್ಥಿಗಳ ಗೆಲುವಿಗೆ ಸಹಕರಿಸಿ: ಸಂಸದ


Team Udayavani, Sep 29, 2020, 1:44 PM IST

ಅಭ್ಯರ್ಥಿಗಳ ಗೆಲುವಿಗೆ ಸಹಕರಿಸಿ: ಸಂಸದ

ಬೇತಮಂಗಲ: ಕೆಜಿಎಫ್ ಕ್ಷೇತ್ರದಲ್ಲಿ ಗ್ರಾಪಂನಿಂದ ವಿಧಾನಸಭೆವರೆಗೆ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪ್ರತಿಯೊಬ್ಬರೂ ಒಗ್ಗಟ್ಟಾಗಬೇಕೆಂದು ಸಂಸದ ಎಸ್‌. ಮುನಿಸ್ವಾಮಿ ತಿಳಿಸಿದರು.

ಪಟ್ಟಣದ ಬಳಿಯ ಕ್ಯಾಸಂಬಳ್ಳಿ ಹೋಬಳಿ ಪೋತರಾಜನಹಳ್ಳಿ, ದೇವೇರ ಹಳ್ಳಿ, ಕಂಗಾಡ್ಲಹಳ್ಳಿ, ಮೋತಕಪಲ್ಲಿ, ಸೀತಂಪಲ್ಲಿ, ಬೂಡಿದಿಮಿಟ್ಟೆ ಸೇರಿ ಒಟ್ಟು 12 ಗ್ರಾಮಗಳಲ್ಲಿ ಸಂಸದರ ನಿಧಿಯಿಂದ ಮಂಜೂರಾಗಿದ್ದ ಹೈಮಾಸ್ಟ್‌ ವಿದ್ಯುತ್‌ ದೀಪ ಉದ್ಘಾಟಿಸಿ ಮಾತನಾಡಿದರು. ತಾನು ಲೋಕಸಭಾ ಚುನಾವಣೆಯಲ್ಲಿ ಸ್ಫರ್ಧಿಸಿದಾಗ ತನ್ನ ಮುಖವನ್ನೂ ನೋಡದೆ ಮತ ಚಲಾಯಿಸಿದ್ದೀರಿ. ನಿಮ್ಮ ಹಳ್ಳಿಗಳ ಅಭಿವೃದ್ಧಿಗಾಗಿ ತಾನು ಸದಾ ಸೇವಕನಾಗಿ ದುಡಿಯುತ್ತೇನೆ ಎಂದು ಭರವಸೆ ನೀಡಿದರು.

ಈ ಭಾಗದ ಜಿಪಂ ಸದಸ್ಯ ಜಯ ಪ್ರಕಾಶ್‌ ನಾಯ್ಡು ಅವರ ಮನವಿಯಂತೆ ಈ ಭಾಗದಲ್ಲಿ ಹೈಮಾಸ್ಟ್‌ ವಿದ್ಯುತ್‌ ದೀಪ, ಬಸ್‌ ತಂಗುದಾಣ ಮಂಜೂರು ಮಾಡಿದ್ದೇನೆ.ಕೆಜಿಎಫ್ ನಗರದಲ್ಲಿಯೂ ತನ್ನ ಅನುದಾನದಲ್ಲಿ ಸಾಧ್ಯವಾದಷ್ಟು ಅಭಿವೃದ್ಧಿಪಡಿಸಿದ್ದೇನೆ ಎಂದರು.

ಕೆಜಿಎಫ್ಗೆ ಹೆಚ್ಚು ಅನುದಾನ: ಕೆಜಿಎಫ್, ಬಂಗಾರಪೇಟೆ, ನರಸಾಪುರ, ವೇಮಗಲ್‌ ಕೈಗಾರಿಕೆ ಪ್ರದೇಶಗಳಲ್ಲಿ ವಿಶೇಷವಾಗಿ ಕೆಜಿಎಫ್ಗೆ ಹೆಚ್ಚು ಅನುದಾನ ಬಿಡುಗಡೆಗೊಳಿಸಿದ್ದೇನೆಂದರು. ಬಿಜೆಪಿ ಕೇಂದ್ರ-ರಾಜ್ಯದಲ್ಲಿ ಬಡವರ, ಶ್ರಮಿಕರ, ರೈತರ ಪರವಿದೆ. ಮುಂಬರುವ ಗ್ರಾಪಂ, ತಾಪಂ, ಜಿಪಂ, ವಿಧಾನ ಸಭಾ ಚುನಾವಣೆಯಲ್ಲೂ ಬಿಜೆಪಿ ಶಾಸಕರನ್ನು ಗೆಲ್ಲಿಸಿ ನಮ್ಮ ಶಕ್ತಿ ಪ್ರದರ್ಶನ ಗೊಳಿಸಬೇಕೆಂದು ತಿಳಿಸಿದರು.

ಗ್ರಾಮ ಮಟ್ಟದಲ್ಲಿ ವಿದ್ಯಾವಂತರು ಸರ್ಕಾರದ ಸೌಲಭ್ಯ ಬಗ್ಗೆ ಮಾಹಿತಿ ಪಡೆದು ಸಬ್ಸಿಡಿ ಸಾಲಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗ ಸೃಷ್ಟಿಸಿಕೊಳ್ಳಬೇಕು, ಈ ಬಗ್ಗೆ ಮಾಹಿತಿ ನೀಡಿದರೆ ಮಾತ್ರ ಪ್ರತಿಯೊಬ್ಬರೂ ಮುಖ್ಯ ವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದರು.

ಈ ವೇಳೆ ಮಾಜಿ ಶಾಸಕ ವೈ. ಸಂಪಂಗಿ, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಮತ್ತು ಜಿಪಂ ಸದಸ್ಯ ಜಯಪ್ರಕಾಶ್‌ ನಾಯ್ಡು, ನಗರಾಧ್ಯಕ್ಷ ಕಮಲನಾಥನ್‌, ಕೆಡಿಎ ಮಾಜಿ ಅಧ್ಯಕ್ಷ ಮುನಿರತ್ನಂ ನಾಯ್ಡು, ಬಿಜೆಪಿ ಮುಖಂಡ ನವೀಣ್‌ ರಾಮ್‌, ಮಹದೇವಪುರ ಜಿ.ಜಲಪತಿ, ಗ್ರಾಮಾತರ ಘಟಕ ಪ್ರ.ಕಾರ್ಯದರ್ಶಿ ಹೇಮಾರೆಡ್ಡಿ, ಆನಂದಗೌಡ, ಎಸ್ಸಿ ಮೋರ್ಚಾ ಅಧ್ಯಕ್ಷ ಕೃಷ್ಣಮೂರ್ತಿ, ಸೀತಂಪಲ್ಲಿ ಬಾಬು, ಪೋತರಾಜನಹಳ್ಳಿಜ‌ಯರಾಂ, ಮೋತಕಪಲ್ಲಿ ವೆಂಕಟ ರಾಮ್‌, ಅನೇಕ ಮುಖಂಡರು ಇದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.