ಲಸಿಕೆ ಅಭಿಯಾನ ಯಶಸ್ಸಿಗೆ ಸಹಕರಿಸಿ: ಡೀಸಿ


Team Udayavani, Jun 1, 2021, 1:32 PM IST

ಲಸಿಕೆ ಅಭಿಯಾನ ಯಶಸ್ಸಿಗೆ ಸಹಕರಿಸಿ: ಡೀಸಿ

ಕೋಲಾರ: ಲಸಿಕೆ ನೀಡಿಕೆಯಲ್ಲಿ ಜಿಲ್ಲೆ ರಾಜ್ಯಕ್ಕೆ ಮೊದಲಾಗಲು ಶಿಕ್ಷಕರ ಸಹಕಾರ ‌ ಅಗತ್ಯ, ಗ್ರಾಮಗಳಲ್ಲಿ ಅಭಿಯಾನ ‌ ನಡೆಸಿ, ಜನತೆಯಲ್ಲಿ ಜಾಗೃತಿ ಮೂಡಿಸಲು ಸಹಕರಿಸಿ ಎಂದು ವಿವಿಧಶಿಕ್ಷಕ, ನೌಕರರ ಸಂಘಟನೆಗಳ ಮುಖಂಡರಿಗೆ ವಿಧಾನ ಪರಿಷತ್‌ ಸದಸ್ಯ ಡಾ. ವೈ.ಎ. ನಾರಾಯಣ ಸ್ವಾಮಿ ಹಾಗೂ ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ಮನವಿ ಮಾಡಿದರು.

ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದ್ದ ವಿವಿಧ ಶಿಕ್ಷಕ, ನೌಕರರ ಸಂಘಟನೆಗಳ ಸಭೆಯಲ್ಲಿ ಮಾತನಾಡಿ, ಕೋವಿಡ್‌ ತಡೆಗೆ ಲಸಿಕೆಯೊಂದೇ ಅಸ್ತ್ರವಾಗಿದೆ. ಜಿಲ್ಲೆಯಲ್ಲಿ 17 ಲಕ್ಷ ಜನಸಂಖ್ಯೆ ಇದ್ದು, 18 ವರ್ಷ ಮೇಲ್ಪಟ್ಟವರು10 ರಿಂದ12 ಲಕ್ಷ ಇದ್ದಾರೆ. ಇವರೆಲ್ಲರಿಗೂ ಲಸಿಕೆ ನೀಡುವ ಮೂಲಕ ಕೋವಿಡ್‌ ತಡೆಯಬಹುದಾಗಿದೆ ಎಂದು ವಿತ‌ರಿಸಿದರು.

ಅಮೆರಿಕಾ, ಇಸ್ರೇಲ್‌ ದೇಶಗಳಲ್ಲಿ ಲಸಿಕೆ ಹಾಕಿಸಿಕೊಂಡವರಿಗೆ ಮಾಸ್ಕ್ ಅಗತ್ಯವಿಲ್ಲ ಎಂಬಘೋಷಣೆ ಕುರಿತು ಪ್ರಸ್ತಾಪಿಸಿದ ಅವರು, ಲಸಿಕೆ ಹಾಕಿಸಿಕೊಂಡರೆ ಜೀವ ಹಾನಿ ಇಲ್ಲ ಎಂಬುದನ್ನುಮನಗಂಡು ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳುವಂತೆ ಮಾಡಲು ಶಿಕ್ಷಕರು ಸಹಕಾರ ನೀಡಿ ಎಂದು ಹೇಳಿದರು.

ಮುಳಬಾಗಿಲು, ಶ್ರೀನಿವಾಸಪುರ ‌ ಲಸಿಕೆ ಹಾಕಿಸಿಕೊಂಡಿರುವುದರಲ್ಲಿ ಮೊದಲ ಸ್ಥಾನಗಳಲ್ಲಿದ್ದು, ಕೋಲಾರ, ಬಂಗಾರಪೇಟೆ, ಕೆಜಿಎಫ್‌ಗಳಲ್ಲಿ ಲಸಿಕೆ ಅಭಿಯಾನಕ್ಕೆ ಹಿನ್ನೆಡೆಯಾಗಿದೆ. ಶಿಕ್ಷಕರು ತಮ್ಮಗ್ರಾಮಗಳಲ್ಲಿ ಕನಿಷ್ಠ 50 ಮಂದಿಯ ಪಟ್ಟಿ ಮಾಡಿ ಲಸಿಕೆ ಹಾಕಿಸಲು ಮುಂದೆ ಬಂದರೆ, ಅಲ್ಲಿಯೇ ಬಂದು ಶಿಬಿರ ನಡೆಸಿ ಲಸಿಕೆ ಹಾಕಿಸಲುಸೂಚಿಸುವುದಾಗಿ ಭರವಸೆ ನೀಡಿದರು. ಸಾಮಾಜಿಕ ಜಾಲತಾಣದಲ್ಲಿ ಲಸಿಕೆ ಕುರಿತುಮಾಡುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡದಿರಿ ಎಂದರು.

ಬಿಇಒಗಳ ಮೂಲಕ ಲಸಿಕೆ ಅಭಿಯಾನ: ವಿಧಾನ ಪರಿಷತ್‌ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ಮಾತನಾಡಿ, ಬಿಇಒಗಳ ಸಭೆ ಕರೆದು ಎಲ್ಲೆಲ್ಲಿ ಲಸಿಕೆಶಿಬಿರ ನಡೆಸಲು ಸಾಧ್ಯ ಎಂಬುದನ್ನು ಪಟ್ಟಿ ಮಾಡಿಶಿಕ್ಷಕರ ಮೂಲಕ ಈ ಕಾರ್ಯ ಯಶಸ್ವಿಗೊಳಿಸಿ, ಲಸಿಕೆಅಭಿಯಾನದಲ್ಲಿ ಕೋಲಾರ ಪ್ರಥಮವಾಗಲು ಶ್ರಮಿಸಿ ಎಂದರು.

ಶಿಕ್ಷಕರು ಸಮುದಾಯಕ್ಕೆ ಲಸಿಕೆ ಹಾಕಿಸಿಕೊಳ್ಳಲು ಜಾಗೃತಿ ಮೂಡಿಸುವುದು ಪುಣ್ಯದ ‌ಕೆಲಸ,ಓರ್ವಶಿಕ್ಷಕ ದಿನಕ್ಕೆ ಕನಿಷ್ಠ 10 ಮಂದಿಗೆ ಲಸಿಕೆ ಹಾಕಿಸಿದರೆ, 15ದಿನಕ್ಕೆ ನಮ್ಮ ಗುರಿ ತಲುಪುವುದು ಸಾಧ್ಯ ಎಂದ ಅವರು, ಬುದ್ಧಿ, ಸಮಯ ಬಳಸಿ ಜೀವದಾನದ ಈಮಹತ್ಕಾರ್ಯದಲ್ಲಿ ಸ್ಪಂದಿಸಿ ಎಂದು ಕಿವಿಮಾತು ಹೇಳಿದರು.

ಬಿಇಒ ಕಚೇರಿ ಬಳಿ ಲಸಿಕಾ ಶಿಬಿರ: ಕೋಲಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ, ಸರ್ಕಾರಿ, ಖಾಸಗಿ, ಅನುದಾನಿತ ‌ ಶಿಕ್ಷಕರು, ಅವರ ಕುಟುಂಬದವರಿಗೆ ಲಸಿಕೆ ಅಭಿಯಾನ ನಡೆಸಲು ಕ್ರಮವಹಿಸುವಂತೆ ಸ್ಥಳದಲ್ಲಿದ್ದ ಬಿಇಒ ನಾಗರಾಜಗೌಡರಿಗೆ ಅವರು ಸೂಚಿಸಿದರು.

ನೌಕರರರ ‌ ಕುಟುಂಬಕ್ಕೆ ಕೋವಿಡ್‌ ಕೇರ್‌ ಕೇಂದ್ರ: ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ ಬಾಬು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿ, ಆದ್ಯತೆಯ ಮೇರೆಗೆ ಸರ್ಕಾರಿನೌಕರರಿಗೆ ಲಸಿಕೆ ಹಾಕಿಸಲು ಕ್ರಮಕೈಗೊಳ್ಳಲು ಮನವಿ ಮಾಡಿದ ಅವರು, ಜನರ ಸೇವೆ ಮಾಡುತ್ತಿರುವ ‌ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರು ಸೋಂಕಿಗೆ ತುತ್ತಾದರೆಅವರ ಸೂಕ್ತ ಚಿಕಿತ್ಸೆಗಾಗಿ ಪ್ರತ್ಯೇಕ ಕೇರ್‌ ಸೆಂಟರ್‌ ಸ್ಥಾಪಿಸಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಖಾಸಗಿ ಶಾಲಾ ಕಾಲೇಜು ವತಿಯಿಂದ ‌ ಸಭೆಯಲ್ಲಿ ಸಹ್ಯಾದ್ರಿ ಉದಯಕುಮಾರ್‌, ಎಸ್‌.ಬಿ. ಮುನಿವೆಂಕಟಪ್ಪ, ಮುನಿಯಪ್ಪ, ಶ್ರೀಕೃಷ್ಣ, ರಾಜೇಶ್‌ ಸಿಂಗ್‌ ಮತ್ತಿತರರು ಭಾಗವಹಿಸಿದ್ದು, ಲಸಿಕೆ ಅಭಿಯಾನಕ್ಕೆ  ಸ‌ಹಕಾರದ ಭರವಸೆ ನೀಡಿದರು. ನೌಕರರ ‌ ಸಂಘದ ಅಧ್ಯಕ್ಷ ಜಿ.ಸುರೇಶ್‌ ಬಾಬು,ಖಜಾಂಚಿ ವಿಜಯ್‌, ರಾಜ್ಯ ಪರಿಷತ್‌ ಸದಸ್ಯ ಗೌತಮ್‌, ಕೆಜಿಎಫ್‌ ಅಧ್ಯಕ್ಷ ‌ ರವಿರೆಡ್ಡಿ, ಪ್ರಾಥಮಿಕ

ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಪ್ಪಯ್ಯಗೌಡ, ಪ್ರಧಾನ ಕಾರ್ಯದರ್ಶಿ ನಾಗರಾಜ್‌, ನೌಕರರ ಸಂಘ, ವೃಂದ ‌ ಸಂಘಗಲ ‌ ಮುಖಂಡರಾದ ಎಸ್‌.ಚೌಡಪ್ಪ, ಟಿ.ಕೆ.ನಟರಾಜ್‌, ರತ್ನಪ್ಪ, ಅಶ್ವತ್ಥನಾರಾಯಣ, ಸುಬ್ರಮಣಿ, ಶ್ರೀನಿವಾಸರೆಡ್ಡಿ, ಪುರುಷೋತ್ತಮ್‌ ,ಅಜಯ್‌, ರವಿ, ಮುರಳಿ ಮೋಹನ್‌, ನಾಗಾನಂದ್‌ ಕೆಂಪರಾಜ್‌, ಚಂದ್ರಪ್ಪ, ಗೋಪಿಕೃಷ್ಣನ್‌, ಮುನಿರಾಮಯ್ಯ, ಕಾಂತರಾಜ್‌, ರಾಜಪ್ಪ, ಅರುಣ್‌ ಕುಮಾರ್‌, ಶಿವಕುಮಾರ್‌, ಮುಕುಂದ, ಶ್ರೀಧರಬಾಬು ಮತ್ತಿತರರಿದ್ದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.