ಕೋವಿಡ್ ವೈರಸ್ ತಡೆಗೆ ಸಹಕರಿಸಿ
Team Udayavani, Jul 25, 2020, 7:58 AM IST
ಮುಳಬಾಗಿಲು: ವಿನಾಕಾರಣ ಮನೆಯಿಂದ ಹೊರ ಬರದೆ ಕೋವಿಡ್ ವೈರಸ್ ತಡೆಗೆ ಸಹಕರಿಸಬೇಕು ಎಂದು ಬಿಇಒ ಗಿರಿಜೇಶ್ವರಿದೇವಿ ಜನರಲ್ಲಿ ಮನವಿ ಮಾಡಿದರು.
ನಗರದ ಡಿವಿಜಿ ಬಾಲಕರ ಪ್ರಾಥಮಿಕ ಶಾಲೆಯಲ್ಲಿ ಪ್ರಗತಿ ಚಾರಿಟಬಲ್ ಟ್ರಸ್ಟ್ ಮತ್ತು ಕರ್ನಾಟಕ ಜಾನಪದ ಕಲಾವಿದರ ಒಕ್ಕೂಟದಿಂದ ಪತ್ರಿಕಾ ವಿತರಕರಿಗೆ ಆಹಾರ ಕಿಟ್ ವಿತರಿಸಿ ಮಾತನಾಡಿದ ಅವರು, ಕೊರೊನಾ ವೈರಸ್ ಹೆಚ್ಚಾಗಿ ಹರಡುತ್ತಿರುವುದರಿಂದ ಜನರು ಬಿಸಿ ನೀರು ಕುಡಿಯಬೇಕು, ಸೋಂಕಿತ ವ್ಯಕ್ತಿಯು ಕೆಮ್ಮಿದಾಗ, ಸೀನಿದಾಗ, ನಿಕಟ ಸಂಪರ್ಕದಲ್ಲಿದ್ದಾಗ, ಮುಟ್ಟಿದಾಗ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ಅಡಿಗೆ ಸಹಾಯಕರಿಗೆ ಆಹಾರ ಕಿಟ್ ಮತ್ತು ಸಮವಸ್ತ್ರ ನೀಡಲಾಗುವುದು ಎಂದು ತಿಳಿಸಿದರು.
ಬಿಎಸ್ಪಿ ತಾಲೂಕು ಅಧ್ಯಕ್ಷ ಸಂಗಸಂದ್ರ ವಿಜಯ ಕುಮಾರ್ ಮಾತನಾಡಿ, ತಾಲೂಕಿನ 30 ಗ್ರಾಪಂ ವ್ಯಾಪ್ತಿಯಲ್ಲಿರುವ ಎಲ್ಲಾ ಹಳ್ಳಿಗಳಲ್ಲಿರುವ ಅಂಗವಿಕಲರಿಗೆ ಆಹಾರ ಕಿಟ್ ನೀಡಬೇಕೆಂದು ಮನವಿ ಮಾಡಿದರು. ಈ ವೇಳೆ ಶಿಕ್ಷಣ ಸಂಯೋಜಕರಾದ ಸಿ.ಸೊಣ್ಣಪ್ಪ, ಎಂ.ವಿ.ಜನಾರ್ದನ್, ಮೇಜರ್ ಶಂಕರ್, ನಗರ ಸಿಆರ್ಪಿ ಕೃಷ್ಣಪ್ಪ, ಶಿಕ್ಷಕರಾದ ಪದ್ಮಾವತಿ, ಶಾರದಮ್ಮ, ಬಾಲಾಜಯ್ಯ, ಗುಮ್ಲಾಪುರ ಪ್ರೌಢಶಾಲೆಯ ಶಿಕ್ಷಕ ಎಸ್.ವಿ.ಕೃಷ್ಣಮೂರ್ತಿ, ಪತ್ರಿಕಾ ವಿತರಕ ಸಂಘದ ಅಧ್ಯಕ್ಷ ಭೀಮಣ್ಣ, ಸುಬ್ರಮಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ