ಕೋವಿಡ್ ತಡೆಗೆ ಸಮನ್ವಯತೆ ಅಗತ್ಯ
Team Udayavani, Jul 14, 2020, 11:01 AM IST
ಕೆಜಿಎಫ್: ಕೋವಿಡ್ ತಡೆಗಟ್ಟಲು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ತಹಶೀಲ್ದಾರ್ ಕೆ.ರಮೇಶ್ ಹೇಳಿದರು.
ನಗರದಲ್ಲಿನ ನಗರಸಭೆಯಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕೋವಿಡ್ ಎಲ್ಲೆಡೆ ಹರಡುತ್ತಿದೆ. ಅದನ್ನು ತಡೆಯುವುದು ಎಲ್ಲರ ಸವಾಲಾಗಿದೆ. ಪ್ರತಿ ವಾರವೂ ತಮ್ಮ ವ್ಯಾಪ್ತಿಯಲ್ಲಿ ನಡೆದಿರುವ ಕೆಲಸಗಳನ್ನು ಜಿಲ್ಲಾಧಿಕಾರಿಗಳಿಗೆ ತಲುಪಿಸಬೇಕಾಗುತ್ತದೆ. ಆದ್ದರಿಂದ ಎಲ್ಲರೂ ಸಕ್ರಿಯವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.
ನಗರಸಭೆ ಆಯುಕ್ತ ಸಿ.ರಾಜು ಮಾತನಾಡಿ, ಬಡಾವಣೆಗಳಲ್ಲಿ ಯಾವುದಾದರೂ ಸಮಸ್ಯೆ ಇದ್ದಲ್ಲಿ 9035713489 ನಂಬರ್ಗೆ ಫೋನ್ ಮಾಡಿ. ಕೋವಿಡ್ ವೈರಸ್ ಇರುವ ಸ್ಥಳಗಳನ್ನು ಕೂಡಲೇ ಸೀಲ್ ಡೌನ್ ಮಾಡಲಾಗುತ್ತದೆ. ಈಗಾಗಲೇ ಬಡಾವಣೆಗಳನ್ನು ಶುದ್ಧೀಕರಣ ಮಾಡಲಾಗುತ್ತಿದೆ. ಎಲ್ಲಾ ಅಧಿಕಾರಿಗಳುಸಮನ್ವಯತೆಯಿಂದ ಕೆಲಸ ಮಾಡಬೇಕು. ಇದು ಎಲ್ಲರ ಜವಾಬ್ದಾರಿಯಾಗಿದೆ ಎಂದರು. ತಾಲೂಕು ವೈದ್ಯಾಧಿಕಾರಿ ಡಾ.ಸುನಿಲ್ ಕುಮಾರ್ ಮಾತನಾಡಿ, ಕೋವಿಡ್ ವೈರಸ್ ತಡೆಯಲು ಬೇಕಾದ ಎಲ್ಲಾ ಮುನ್ನೆಚ್ಚರಿಕೆಯನ್ನು ಜನತೆ ತೆಗೆದುಕೊಳ್ಳಬೇಕು ಎಂದರು. ವ್ಯವಸ್ಥಾಪಕ ಜಯರಾಂ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು