ಕೊನೆಗೂ ಕೋಲಾರಕ್ಕೆ ಕಾಲಿಟ್ಟ ಕೋವಿಡ್-19


Team Udayavani, May 13, 2020, 9:13 AM IST

konegu

ಕೋಲಾರ: ಕಳೆದ ಒಂದು ವಾರದಿಂದಲೂ ನದಿ ದಡ ಆಟ ಆಡಿಸುತ್ತಲೇ ಇದ್ದ ಕೋವಿಡ್-19 ಕೊನೆಗೂ ಜಿಲ್ಲೆಗೆ ಕಾಲಿಟ್ಟು ಖಚಿತಪಡಿಸಿದ್ದು, ಮಂಗಳವಾರ ಒಮ್ಮೆಗೆ ಐದು ಕೋವಿಡ್-19 ಸೋಂಕಿತ ಪ್ರಕರಣ ಪತ್ತೆಯಾಗಿ ಇಡೀ ಜಿಲ್ಲೆಯನ್ನು ಆತಂಕದಲ್ಲಿ ಮುಳುಗಿಸಿದೆ. ಕಳೆದ 45ಕ್ಕೂ ಹೆಚ್ಚು ದಿನಗಳಿಂದ ಹಸಿರು ವಲಯದಲ್ಲಿ ಬೀಗುತ್ತಿದ್ದ ಕೋಲಾರ ಮಂಗಳ ವಾರ ಒಮ್ಮೆಗೆ ಸೋಂಕಿತ ಜಿಲ್ಲೆಯಾಗಿ ಮಾರ್ಪ ಟ್ಟಿತು. ಮುಳಬಾಗಿಲು ತಾಲೂಕಿನ ಐವರಿಗೆ ಸೋಂಕು ತಗುಲಿದ್ದನ್ನು ಮಂಗಳವಾರದ ಸಂಜೆ ಕೋವಿಡ್-19 ಬುಲೆಟಿನ್‌ ಖಚಿತಪಡಿಸಿದ್ದು, 906 ರಿಂದ 910 ರವರೆಗಿನ ಸಂಖ್ಯೆಯನ್ನು ಸೋಂಕಿತರ ಗುರುತಿಗೆ ನೀಡಲಾಗಿದೆ.

ಕೇಸ್‌ ನಂಬರ್‌ 906: 22 ವರ್ಷದ ವಿದ್ಯಾರ್ಥಿನಿ ಮುಳಬಾಗಿಲು ತಾಲೂಕು ವಿ. ಹೊಸಹಳ್ಳಿಯವರಾಗಿದ್ದು, ಈಕೆ ಹುಮ್ನಾಬಾದ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ಇತ್ತೀಚೆಗೆ ಗ್ರಾಮಕ್ಕೆ ವಾಪಸ್ಸಾಗಿದ್ದು, ಈಕೆಯ ಗಂಟಲು  ದ್ರಾವಣ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಕೇಸ್‌ ನಂಬರ್‌ 907: ಸೋಂಕಿತ 70 ವರ್ಷದ ಮಹಿಳೆ ಬೆಂಗಳೂರಿನ ಜೆ.ಪಿ. ನಗರದಲ್ಲಿ ಮನೆಕೆಲಸ ಮಾಡಿಕೊಂಡಿದ್ದು, ಈಕೆ ಇತ್ತೀಚೆಗೆ ಸ್ವಂತ ಗ್ರಾಮವಾದ ಮುಳಬಾಗಿಲು ತಾಲೂಕು ಬೂಸಾಲಕುಂಟೆ ಗ್ರಾಮಕ್ಕೆ ಬಂದಿದ್ದ ಕಾರಣ ಈಕೆಯನ್ನು ಕ್ವಾರೆಂಟೈನ್‌ಗೆ ಒಳಪಡಿಸಲಾಗಿತ್ತು.

ಕೇಸ್‌ ನಂಬರ್‌ 908: 22 ವರ್ಷ ಮತ್ತು ಪಿ-909, 27 ವರ್ಷದ ಇಬ್ಬರು ಮುಳ ಬಾಗಿಲು ತಾಲೂಕು ಬೆಳಗಾನಹಳ್ಳಿ ಯವ ರಾಗಿದ್ದು, ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಒಡಿಶಾಗೆ ಹೋಗಿ ಬಂದಿದ್ದರು ಎನ್ನಲಾಗಿದ್ದು,  ಇವರ ಗಂಟಲು ದ್ರವವನ್ನೂ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು.

ಕೇಸ್‌ ನಂಬರ್‌-910: ಮುಳಬಾಗಿಲು ತಾಲೂಕು ಬೈರಸಂದ್ರ ಗ್ರಾಮದ 21 ವರ್ಷದ ಚಾಲಕನಾಗಿದ್ದು, ಇವರು ಚೆನ್ನೈಗೆ ಹೋಗಿ ಬಂದಿದ್ದರೆನ್ನಲಾಗಿದೆ. ಇವರ ಗಂಟಲು  ದ್ರವ ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಈ ಐವರು ಸೋಂಕಿತರೆಂದು ಫಲಿತಾಂಶ ಬಂದಿದೆ. ಒಂದು ವಾರದಿಂದಲೂ ದೇವನಹಳ್ಳಿ ಮಾರ್ಗವಾಗಿ ಬಂದಿದ್ದ ಗುಜರಾತ್‌ ತಂಡ, ವಿಕೋಟ, ಪುಂಗನೂರುನಿಂದ ಬಂದಿದ್ದ ಆಂಧ್ರ ಪ್ರದೇಶದ ವ್ಯಕ್ತಿಗಳು, ತಬ್ಲಿ  ಧರ್ಮಪ್ರಚಾರಕ ತಂಡಗಳ ಆಗಮನದಿಂದ ಕೋಲಾರ ಜಿಲ್ಲೆ ಆತಂಕದ ಸುಳಿವಿನಲ್ಲಿ ಸಿಲುಕಿತ್ತು. ಆದರೆ, ಈ ಪ್ರಕರಣಗಳಿಂದ 100ಕ್ಕೂ ಹೆಚ್ಚು ಮಂದಿಯನ್ನು ಕ್ವಾರಂಟೈನ್‌ ಮಾಡಲಾಗಿದ್ದು, ಬಹುತೇಕ ಈ ವ್ಯಕ್ತಿಗಳಿಗೆ  ಮೇಲ್ನೋಟಕ್ಕೆ ಯಾವುದೇ ಪಾಸಿಟಿವ್‌ ಲಕ್ಷಣಗಳು ಕಂಡು ಬರುತ್ತಿಲ್ಲ.

 ದೃಢಪಡಿಸಿದ ಡೀಸಿ: ಜಿಲ್ಲಾಧಿಕಾರಿ ಸಿ. ಸತ್ಯಭಾಮ ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತ ನಾಡಿ, ಜಿಲ್ಲೆಯಲ್ಲಿ ಐದು ಜನರಿಗೆ ಸೋಂಕು ದೃಢಪಟ್ಟಿರುವುದನ್ನು ಖಚಿತಪಡಿಸಿದರು. ಪ್ರಾಥಮಿಕ ಸಂಪರ್ಕ ಹೊಂದಿದ 24 ಜನರನ್ನ ಕ್ವಾರಂಟೈನ್‌ ಮಾಡಲಾಗಿದೆ. ಈ ಗ್ರಾಮಗಳನ್ನ ಕಂಟೋನ್‌ಮೆಂಟ್‌ ಝೋನ್‌ಗೆ ಸೇರ್ಪಡೆ ಮಾಡಲಾಗಿದೆ. ಪಿ-906 8ರಂದು ಜಿಲ್ಲೆಗೆ ಸರ್ಕಾರಿ ಬಸ್‌ನಲ್ಲಿ ತುಮಕೂರು, ಚಿಕ್ಕಬಳ್ಳಾಪುರ ಮೂಲಕ ಬಂದಿದ್ದಾರೆ. ಪಿ-907 ಲಾಕ್‌ಡೌನ್‌ ಸಡಿಲಿಕೆಯಾದ ನಂತರ 7ರಂದು ಬಸ್‌ನಲ್ಲಿ ಬಂದಿದ್ದಾರೆ. ಸೋಂಕಿತರು ಎಲ್ಲರೂ ಆರೋಗ್ಯವಾಗಿದ್ದು, ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.