ರಾಮನವಮಿಗೂ ಕೋವಿಡ್ 19 ಭೀತಿ
Team Udayavani, Apr 3, 2020, 11:03 AM IST
ಕೋಲಾರ: ಶ್ರೀರಾಮನವಮಿ ಆಚರಣೆಗೂ ಕೋವಿಡ್ 19 ಭೀತಿ ತಟ್ಟಿದ್ದು, ಸರ್ಕಾರದ ಲಾಕ್ ಡೌನ್ ನಿರ್ದೇಶನ ಪಾಲಿಸಿದ ನಾಗರಿಕರು ಸಾಮೂಹಿಕವಾಗಿ ರಾಮನವಮಿ ಎಲ್ಲೂ ಆಚರಿಸಲಿಲ್ಲ,
ನಗರದ ಕೋಗಿಲಳ್ಳಿ ಸಮೀಪ ಯುವಕರುಸಾಮಾಜಿಕ ಅಂತರ ಕಾಯ್ದುಕೊಂಡು ಹನುಮನಿಗೆ ಕೇವಲ ಪೂಜೆ ಸಲ್ಲಿಸಿ ತಮ್ಮ ಭಕ್ತಿ ಪ್ರದರ್ಶಿಸಿದರು. ಹನುಮ ದೇಗುಲಗಳ ತವರು ಎಂದೇ ಖ್ಯಾತವಾಗಿರುವ ಕೋಲಾರ ಜಿಲ್ಲೆಯಲ್ಲಿ ರಾಮನವಮಿಗೆ ಹೆಚ್ಚಿನ ಆದ್ಯತೆ ಇದ್ದು, ಪಾನಕ, ಮಜ್ಜಿಗೆ, ಕೋಸಂಬರಿ ವಿತರಣೆಯನ್ನು ಮಾತ್ರ ಮರೆಯುತ್ತಿರಲಿಲ್ಲ. ಅದರಲ್ಲೂ ಇತ್ತೀಚಿನ ವರ್ಷಗಳಲ್ಲಿ ಅನೇಕ ಯುವಕರು, ವ್ಯಾಪಾರಿಗಳ ಸಂಘಟನೆಗಳುನಗರದ ರಸ್ತೆಗಳಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸುವ ಕಾರ್ಯವನ್ನು ನಡೆಸಿಕೊಂಡು ಬಂದಿದ್ದರು.
ಇದೀಗ ಸರ್ಕಾರ ಸಾಮೂಹಿಕ ಪ್ರಾರ್ಥನೆಗೂ ನಿಷೇಧ ಹೇರಿದ್ದು, ದೇವಾಲಯಗಳು ಬಂದ್ ಆಗಿರುವುದರಿಂದ ಶ್ರೀರಾಮನವಮಿ ಮನೆಗಳಿಗೆ ಸೀಮಿತವಾಯಿತು. ಆದರೂ ಕೆಲವು ಕಡೆಗಳಲ್ಲಿ ಯುವಕರು ಸಾಮಾಜಿಕ ಅಂತರ ಕಾಯ್ದುಕೊಂಡು ಪೂಜೆ ಮಾತ್ರ ಸಲ್ಲಿಸಿ, ಪಾನಕ, ಮಜ್ಜಿಗೆ, ಕೋಸಂಬರಿ ಸಾಂಕೇತಿಕವಾಗಿ ವಿತರಣೆ ಮಾಡಿ ಸರ್ಕಾರದ ಆದೇಶವನ್ನು ಗೌರವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ