20 ನಿಮಿಷದಲಿ ಕೋವಿಡ್ ಪತ್ತೆ: ಜಿಲೆಯಲ್ಲಿ 6 ಸಾವಿರ ಮಂದಿಗೆ ಕೋವಿಡ್ ಟೆಸ್ಟ್ ಗೆ ನಿರ್ಧಾರ
Team Udayavani, Apr 29, 2020, 12:38 PM IST
ಕೋಲಾರ: ರಾಜ್ಯದಲ್ಲೇ ಪ್ರಥಮ ಬಾರಿಗೆ ಜಿಲ್ಲೆಯಲ್ಲಿ ಕೊವಿಡ್-19ರ ರ್ಯಾಪಿಡ್ ಟೆಸ್ಟ್ ನಡೆಸಲಾಗುತ್ತಿದ್ದು, 6 ಸಾವಿರ ಮಂದಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವಿಜಯಕಮಾರ್ ತಿಳಿಸಿದರು. ಈ ಕುರಿತು ಮಾಹಿತಿ ನೀಡಿದ ಅವರು, ದಕ್ಷಿಣ ಕೊರಿಯಾದಿಂದ 1500 ಕಿಟ್ಗಳನ್ನು ತರಿಸಿಕೊಳ್ಳಲಾಗಿದ್ದು,
ಪ್ರಾಯೋಗಿಕವಾಗಿ ಪರೀಕ್ಷೆ ನಡೆಸಲು ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಕಿಟ್ಗಳಿಂದ ಕೇವಲ 20 ನಿಮಿಷಗಳಲ್ಲಿ ಸೋಂಕು ಪತ್ತೆ ಹಚ್ಚಬಹುದಾಗಿದೆ ಎಂದು ತಿಳಿಸಿದರು.
ಲಕ್ಷಣಗಳಿರುವವರು ಕೋವಿಡ್ ಇದೆಯೇ ಎಂದು ತಿಳಿಯಲು ರಕ್ತ ಮತ್ತು ಗಂಟಲು ದ್ರವ ನೀಡಿ ಕನಿಷ್ಠ 24 ಗಂಟೆ ಆತಂಕದಲ್ಲೇ ಕಾಯಬೇಕಾಗಿತ್ತು, ಜಿಲ್ಲೆಯಲ್ಲಿ ಮೊದಲ ಹಂತವಾಗಿ ಕೋವಿಡ್ ಸೈನಿಕರಾಗಿ ದುಡಿಯುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪೊಲೀಸರಿಗೆ ಪರೀಕ್ಷೆ ನಡೆಸಲಾಗುತ್ತಿದೆ. ದಕ್ಷಿಣ ಕೊರಿಯಾದಿಂದ ಈ ಕಿಟ್ಗಳು
ಬಂದಿದ್ದು, ಈಗಾಗಲೇ ವೈದ್ಯಕೀಯ ಸಿಬ್ಬಂದಿಯನ್ನು ಪ್ರಾಯೋಗಿಕವಾಗಿ ಪರೀಕ್ಷೆಗೆ ಒಳಪಡಿಸಿ ಫಲಿತಾಂಶ ಪಡೆಯಲಾಗಿದೆ. ಜಿಲ್ಲೆ ಇದೀಗ ಹಸಿರುವಲಯದಲ್ಲಿದ್ದು, ಇದನ್ನು ಮುಂದುವರಿಸುವ ಮೂಲಕ ಜಿಲ್ಲೆಯತ್ತ ಸೋಂಕು ಹರಡದಂತೆ ಹೆಚ್ಚಿನ ಮುಂಜಾಗ್ರತೆ ವಹಿಸಿರುವ ಜಿಲ್ಲಾಡಳಿತ ಇದೀಗ ಸೋಂಕು ಪತ್ತೆ ಹೆಚ್ಚಲು ರ್ಯಾಪಿಡ್ ಟೆಸ್ಟ್ಗೆ ಮುಂದಾಗಿದ್ದು, ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.
ರ್ಯಾಪಿಡ್ ಟೆಸ್ಟ್ಗೆ ಜಿಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಆರಂಭಿಕವಾಗಿ ಆರೋಗ್ಯ ಸೇವೆಯ ಇಪ್ಪತ್ತು ಮಂದಿ ಸಿಬ್ಬಂದಿಗೆ ಟೆಸ್ಟ್ ಮಾಡಲಾಗುವುದು. ಈ ಟೆಸ್ಟ್ಗಳ ಮೂಲಕ ಮಾನವ ದೇಹದ ರೋಗ ನಿರೋಧಕ ಶಕ್ತಿಯನ್ನು ಪರಿಶೀಲಿಸಲಾಗುವುದು. ಟೆಸ್ಟ್ನಲ್ಲಿ ಪಾಸಿಟಿವ್ ಬಂದಲ್ಲಿ ಅಂತವರ ಗಂಟಲ ದ್ರಾವಣವನ್ನು ಕಲೆ ಹಾಕಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು. ಪಾಸಿಟಿವ್ ಬಂದವರ 14 ದಿನಗಳ ಹಿಂದಿನ ಪ್ರಯಾಣ ಇತಿಹಾಸವನ್ನು ಪರಿಶೀಲಿಸಿ ಅಗತ್ಯ ಕ್ರಮ ಜರುಗಿಸಲು ರ್ಯಾಪಿಡ್ ಟೆಸ್ಟ್ ನೆರವಾಗಲಿದೆ.
●ಡಾ.ಚಾರಿಣಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ