ಕೊರೊನಾ ತಡೆ ಪಂಚಾಯ್ತಿ ಮಟ್ಟದಿಂದ ಆಗಲಿ
Team Udayavani, May 6, 2021, 5:03 PM IST
ಕೋಲಾರ: ಕೊರೊನಾ 2ನೇ ಅಲೆ ತಡೆಗಟ್ಟಲು ಪಂಚಾಯ್ತಿ ಮಟ್ಟದಲ್ಲಿ ಪ್ರಥಮ ಆದ್ಯತೆ ನೀಡಬೇಕೆಂದು ಪಿಡಿಒಗಳಿಗೆ ಶಾಸಕ ಕೆ.ಶ್ರೀನಿವಾಸಗೌಡ ಸೂಚಿಸಿದರು.ನಗರದ ನಗರಸಭೆ ಕಾರ್ಯಾಲಯದಲ್ಲಿತಾಲೂಕಿನ ಪಿಡಿಒಗಳ ಸಭೆಯಲ್ಲಿ ಮಾತನಾಡಿ, ರಸ್ತೆ,ಚರಂಡಿ ಕಾಮಗಾರಿ ಅನುದಾನವನ್ನು ಕೊರೊನಾ ನಿಯಂತ್ರಣಕ್ಕೆ ಬಳಸಿಕೊಳ್ಳುವಂತೆ ಎಂದು ಹೇಳಿದರು.
ಕೊರೊನಾ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಬಗ್ಗೆಜಾಗೃತಿ ಮೂಡಿಸಬೇಕು, ಕೊರೊನಾ ಮುಕ್ತಜಿಲ್ಲೆಯಾಗಿಸಲು ಪಂಚಾಯ್ತಿ ವ್ಯಾಪ್ತಿಯಲ್ಲಿ ಆದ್ಯತೆಮೇಲೆ ಕೆಲಸ ಮಾಡಬೇಕು. ಈ ಸೋಂಕು ಪಟ್ಟಣಕ್ಕೆಮಾತ್ರ ಸೀಮಿತವಾಗದೇ ಹಳ್ಳಿಗಳಿಗೂ ವೇಗವಾಗಿವ್ಯಾಪಿಸುತ್ತಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕಾಗಿದೆಎಂದು ಹೇಳಿದರು.
ಮನವೊಲಿಕೆ ಮಾಡಿ: ಕೊರೊನಾ ನಿಯಂತ್ರಣಕ್ಕೆಪ್ರತಿಯೊಬ್ಬರ ಸಹಕಾರ ಮುಖ್ಯ. ಈ ಬಗ್ಗೆ ಸಾರ್ವಜನಿಕರು ಹೆಚ್ಚು ಜಾಗೃತರಾಗಬೇಕು. ಸರ್ಕಾರದನೀತಿನಿಯಮ ಕಡ್ಡಾಯವಾಗಿ ಪಾಲಿಸಬೇಕು. ಅಗತ್ಯಬಿದ್ದರೆ ಅಷ್ಟೇ ಹೊರಗಡೆ ಹೋಗಬೇಕು, ಇಲ್ಲಮನೆಯಲ್ಲಿ ಇರಬೇಕು, ಕೊರೊನಾ ಲಸಿಕೆ ಬಗ್ಗೆಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಜೊತೆಗೆಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಬೇಕೆಂದುಎಂದು ಮನವಿ ಮಾಡಿದರು.
ಕೊರೊನಾ ಪ್ರಕರಣ ಹೆಚ್ಚಾಗಿರುವ ಹಳ್ಳಿಗಳಲ್ಲಿಹೊರಗಡೆ ಎಲ್ಲೂ ಓಡಾಟದ ರೀತಿಯಲ್ಲಿಸಾರ್ವಜನಿಕರನ್ನು ನಿಬಂìಧಿಸಬೇಕು, ಲಾಕ್ಡೌನ್ಮತ್ತು ಸಿಲ್ ಡೌನ್ ಪ್ರದೇಶಗಳಲ್ಲಿ ಪೊಲೀಸರು ಹೆಚ್ಚಿನರೀತಿಯಲ್ಲಿ ನಿಗಾವಹಿಸಬೇಕು ಎಂದು ಸೂಚಿಸಿದರು.ತಾಪಂ ಇಒ ಬಾಬು ಮಾತನಾಡಿ, ತಾಪಂವ್ಯಾಪ್ತಿಯ 36 ಗ್ರಾಪಂನಲ್ಲಿ ಕೊರೊನಾ ನಿಗ್ರಹಕ್ಕೆ ವಿಶೇಷ ಕಾರ್ಯಪಡೆ ರಚನೆ ಮಾಡಿ ಪ್ರತಿ ಹಳ್ಳಿಗಳಲ್ಲಿಕೊರೊನಾ ತಡೆಗಟ್ಟಲು ಜಾಗೃತಿ ಮೂಡಿಸುವ ಜೊತೆಗೆತುರ್ತು ಕ್ರಮ ಕೈಗೊಳ್ಳಲಾಗಿದೆ.
ಹಳ್ಳಿಗಳಲ್ಲಿ ಔಷಧಸಿಂಪಡಿಸುವುದು ಸೋಂಕಿತರು ಮೃತಪಟ್ಟರೆಅಂತ್ಯಕ್ರಿಯೆ ಮಾಡಲು ಪಂಚಾಯ್ತಿಯಿಂದ ವಿಶೇಷವ್ಯವಸ್ಥೆ ಒದಗಿಸಲಾಗಿದೆ ಎಂದು ವಿವರಿಸಿದರು.ತಾಪಂ ಅಧ್ಯಕ್ಷ ಸೂಲೂರು ಎಂ.ಆಂಜಿನಪ್ಪ,ನಗರಸಭೆ ಅಧ್ಯಕ್ಷೆ ಶ್ವೇತಾ, ಉಪಾಧ್ಯಕ್ಷ ಎನ್.ಎಸ್.ಪ್ರವೀಣ್, ನಗರಸಭೆ ಆಯುಕ್ತ ಶ್ರೀಕಾಂತ್, ಪಿಎಸ್ಐಅಣ್ಣಯ್ಯ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA