ವಿಘ್ನ ನಿವಾರಕನಿಗೂ ಕೋವಿಡ್ ಬಿಸಿ


Team Udayavani, Aug 22, 2020, 1:42 PM IST

ವಿಘ್ನ ನಿವಾರಕನಿಗೂ ಕೋವಿಡ್ ಬಿಸಿ

ಮಾಸ್ತಿ: ಕೋವಿಡ್ ಸಂಕಷ್ಟ, ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ಗೌರಿ-ಗಣೇಶ ಹಬ್ಬ ಆಚರಿಸಲು ಹೋಬಳಿಯ ಜನತೆ ಸಿದ್ದತೆ ಮಾಡಿಕೊಳ್ಳುತ್ತಿದ್ದ ದೃಶ್ಯ ಶುಕ್ರವಾರ ಕಂಡು ಬಂತು. ಆದರೆ, ಗಣೇಶ ಮೂರ್ತಿಗಳನ್ನು ಕೇಳುವವರೇ ಇಲ್ಲದಂತಾಗಿತ್ತು.

ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಸರ್ಕಾರದ ಪರಿಷ್ಕೃ ತ ಮಾರ್ಗಸೂಚಿಯಂತೆ ಗೌರಿ-ಗಣೇಶ ಹಬ್ಬ ಸರಳವಾಗಿ ಆಚರಣೆಗೆ ಅವಕಾಶ ಕೊಟ್ಟಿದ್ದರೂ ಜನರಲ್ಲಿ ಹಿಂದಿನಂತೆ ಹಬ್ಬದ ಆಸಕ್ತಿ ಇರಲಿಲ್ಲ. ಡಿ.ಜೆ. ಸೌಂಡ್‌, ಪಟಾಕಿ, ಕುಣಿತ ಇವುಗಳನ್ನೆಲ್ಲ ಸರ್ಕಾರ ಕೋವಿಡ್ ಪ್ರಯುಕ್ತ ನಿಷೇಧಿಸಿದೆ.

ಗ್ರಾಮೀಣ ಭಾಗದ ಯುವಕರು, ಗಣೇಶ ಮೂರ್ತಿ ಆಯೋಜಕರಲ್ಲೂ ಆಸಕ್ತಿ ಕಡಿಮೆ ಆಗಿದ್ದು, ಗೌರಿ-ಗಣೇಶ ಮೂರ್ತಿಗಳನ್ನು ಕೊಳ್ಳುವವರೆ ಇಲ್ಲದಂತಾಗಿದೆ. ಗ್ರಾಮದಲ್ಲಿ ಕೇವಲ ಬೆರಳೆಣಿಕೆಯಷ್ಟು ಮಂದಿ ಮಾತ್ರ ಗಣಪತಿ ಮೂರ್ತಿ ಮಾರಾಟ ಮಾಡುತ್ತಿದ್ದರೂ, ಕೊಳ್ಳುವವರ ಸಂಖ್ಯೆ ಕ್ಷೀಣಿಸಿದೆ.= ಪ್ರತಿ ವರ್ಷ ವಿವಿಧ ಆಕರ್ಷಕ ಗಣಪತಿ ಮೂರ್ತಿ ತಯಾರು ಮಾಡಿ ಮಾರಾಟ ಮಾಡುತ್ತಿದ್ದೆವು, ಈ ಬಾರಿ ಕೋವಿಡ್ ದಿಂದ ಕೆಲವೇ ಗಣಪತಿ ಮೂರ್ತಿ ತಯಾರಿಸಿದ್ದೇವೆ. ಅವುಗಳೂ ಪೂರ್ಣ ಪ್ರಮಾಣದಲ್ಲಿ ಮಾರಾಟ ಮಾಡವಾಗುತ್ತಿಲ್ಲ. ಜೊತೆಗೆ ಸರ್ಕಾರದ ಮಾರ್ಗಸೂಚಿ ಯಂತೆ ಹೆಚ್ಚು ಗಣಪತಿ ಮಾರಾಟವಾಗದ್ದರಿಂದ ನಮ್ಮ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ಗಣಪತಿ ಮೂರ್ತಿ ಮಾರಾಟಗಾರ ಕುಮಾರ್‌ ಹೇಳುತ್ತಾರೆ.

ಗಣೇಶ ಚತುರ್ಥಿ, ಮೊಹರಂ ಆಚರಣೆ : ಕೆಜಿಎಫ್ ಪೊಲೀಸ್‌ ಜಿಲ್ಲೆಯಲ್ಲಿ ಗಣೇಶ ಚತುರ್ಥಿ, ಮೊಹರಂ ಹಬ್ಬವನ್ನು ಶಾಂತಿ, ಸೌಹಾರ್ದತೆ ಯಿಂದ ಆಚರಿಸುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಕರನ್‌ ಸಲಹೆ ನೀಡಿದರು. ನಗರದ ಜಿಲ್ಲಾ ಪೊಲೀಸ್‌ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿ, ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಎಲ್ಲಾ ಸಮುದಾಯ ದವರು ಹಬ್ಬ ಆಚರಿಸಿಕೊಂಡು ಬಂದಿರುವುದು ಹೆಮ್ಮೆಯ ವಿಚಾರ,

ಅದೇ ರೀತಿ ಗಣೇಶ ಚತುರ್ಥಿ, ಮೊಹರಂ ಹಬ್ಬವನ್ನು ಮಾಡುವಂತೆ ಸಲಹೆ ನೀಡಿದರು. ಡಿವೈಎಸ್ಪಿ ಬಿ.ಕೆ.ಉಮೇಶ್‌ ಮಾತನಾಡಿ, ಗಣೇಶ ಚತುರ್ಥಿ ಅಂಗವಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವ ದಿಸೆಯಲ್ಲಿ ಯಾವುದೇ ಕಾರ್ಯಕ್ರಮ ನಡೆಸಬೇಕಾದರೂ ನಿಯಮಾನುಸಾರ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆದು ಕಾರ್ಯಕ್ರಮ ನಡೆಸುವಂತೆ ಸಲಹೆ ನೀಡಿದರು.

ಬಂಗಾರಪೇಟೆ ಮತ್ತು ಕೆಜಿಎಫ್ ತಾಲೂಕುಗಳ ವಿವಿಧ ಹಿಂದೂ ಸಂಘಟನೆ, ಮುಸ್ಲಿಂ ಸಮುದಾಯದವರು ಸಭೆಯಲ್ಲಿ ಭಾಗವಹಿಸಿದ್ದು, ಹಿಂದಿನಿಂದಲೂ ನಡೆಸಿಕೊಂಡು ಬಂದಂತೆ ಶಾಂತಿ, ಸೌಹಾರ್ದತೆಗೆ ಧಕ್ಕೆಯಾಗದಂತೆ ಮುನ್ನೆಚ್ಚರಿಕೆ ವಹಿಸುವುದಾಗಿ ಸಂಘಟಕರು ಭರವಸೆ ನೀಡಿದರು. ಸರ್ಕಲ್‌ ಇನ್ಸ್‌ಪೆಕ್ಟರ್‌ಗಳಾದ ಜಿ.ಪಿ.ರಾಜು, ಮುಸ್ತಾಕ್‌ಪಾಷ, ಸೂರ್ಯಪ್ರಕಾಶ್‌, ವೆಂಕಟರಮಣಪ್ಪ, ಸುನಿಲ್‌ಕುಮಾರ್‌, ವೆಂಕಟೇಶಮೂರ್ತಿ, ಆರ್‌ಪಿಐ ಮಂಜುನಾಥ ಇತರರಿದ್ದರು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.