ಗಡಿ ಭಾಗದಲ್ಲಿ ಕೋವಿಡ್ ಸೋಂಕು ದೃಢ

ಆಂಧ್ರ, ತಮಿಳುನಾಡು ಗಡಿ ಗ್ರಾಮಗಳಲ್ಲಿ ಐವರು ರೈತರಿಗೆ ಕೋವಿಡ್

Team Udayavani, May 9, 2020, 12:54 PM IST

ಗಡಿ ಭಾಗದಲ್ಲಿ ಕೋವಿಡ್ ಸೋಂಕು ದೃಢ

ಸಾಂದರ್ಭಿಕ ಚಿತ್ರ

ಮುಳಬಾಗಿಲು: ಆಂಧ್ರದ ಚಿತ್ತೂರು ಜಿಲ್ಲೆಯ ವಿ.ಕೋಟೆ ಮಂಡಲಂ ವ್ಯಾಪ್ತಿಯ ಪಟ್ರಪಲ್ಲಿ ಗ್ರಾಮದ ಐವರು ರೈತರಿಗೆ ಕೋವಿಡ್ ಸೋಂಕು ದೃಢಪಟ್ಟಿರುವುದರಿಂದ ಗಡಿ ಗ್ರಾಮಗಳ ಜನ ಆತಂಕಗೊಂಡಿದ್ದು, ಅಬಕಾರಿ ಸಚಿವ ಎಚ್‌.ನಾಗೇಶ್‌ ಸೂಚನೆಯಂತೆ ತಾಲೂಕು ಅಧಿಕಾರಿಗಳು ಗಡಿ ಭಾಗದ ಹಳ್ಳಿಗಳಿಗೆ ಭೇಟಿ ನೀಡಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿಗೆ ತಮಿಳುನಾಡಿನ ಕೊಯಂ ಬೀಡು ಮಾರುಕಟ್ಟೆಗೆ ತರಕಾರಿ ಹಾಕಿಕೊಂಡು ಹೋಗಿದ್ದ ಆಂಧ್ರದ ಚಿತ್ತೂರು ಜಿಲ್ಲೆಯ ಪಲಮನೇರು ತಾಲೂಕಿನ ವಿ.ಕೋಟೆ ಮಂಡ
ಲಂನ ಪಟ್ರಪಲ್ಲಿ ಗ್ರಾಮದ ಐವರು ರೈತರಿಗೆ ಕೋವಿಡ್ ಸೋಂಕು ದೃಢಪಟ್ಟಿರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌, ಜಿಲ್ಲೆಯಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ.

ಚೆಕ್‌ಪೋಸ್ಟ್‌ಗೆ ಭೇಟಿ: ಇದರಿಂದ ಗ್ರೀನ್‌ ಜೋನ್‌ನಲ್ಲಿದ್ದ ಕೋಲಾರ ಜಿಲ್ಲೆಯ ಮುಳ ಬಾಗಿಲು ತಾಲೂಕಿನ ತಹಶೀಲ್ದಾರ್‌ ರಾಜ ಶೇಖರ್‌, ತಾಲೂಕು ಪಂಚಾಯಿತಿ ಅಧ್ಯಕ್ಷ ಎ.ವಿ.ಶ್ರೀನಿವಾಸ್‌, ಇಒ ಬಾಬು, ಸಿಪಿಐ ಮಾರ್ಕಂಡಯ್ಯ, ತಾಲೂಕು ಆರೋಗ್ಯಾಧಿಕಾರಿ ಡಾವರ್ಣಶ್ರೀ, ಅಬಕಾರಿ ನಿರೀಕ್ಷಕ ಚಿರಂಜೀವಿ ಶುಕ್ರವಾರ ಆಂಧ್ರದ ಗಡಿಯಲ್ಲಿರುವ ಬಿ.ಹೊಸಹಳ್ಳಿ, ತಿಮ್ಮರಾವುತನಹಳ್ಳಿ
ಮತ್ತು ಕುಪ್ಪಂಪಾಳ್ಯ ಚೆಕ್‌ ಪೋಸ್ಟ್‌ಗಳಿಗೆ ಭೇಟಿ ನೀಡಿದರು. ಚೆಕ್‌ ಪೋಸ್ಟ್‌ನಲ್ಲಿ ಇಬ್ಬರು ಪೊಲೀಸರು, ಇಬ್ಬರು ಆಶಾ ಕಾರ್ಯಕರ್ತೆಯರು, ಕಂದಾಯ ಮತ್ತು ಗ್ರಾಪಂನ ಒಟ್ಟು 8
ಸಿಬ್ಬಂದಿಗಳ ಕಾರ್ಯ ವೈಖರಿ ಪರಿಶೀಲಿಸಿದರು.

ಸಂಚಾರ ಬಂದ್‌: ಕರ್ನಾಟಕ ಮತ್ತು ವಿ. ಕೋಟೆ ಸಂಪರ್ಕ ರಸ್ತೆಗಳನ್ನು ಜೆಸಿಬಿಯಿಂದ ಹಳ್ಳ ತೋಡಿ ಕಲ್ಲುಗಳನ್ನು ಅಡ್ಡಹಾಕಿ ಸಂಚಾರ ನಿರ್ಬಂಧಿಸಿದ್ದಾರೆ. ಮಲ್ಲನಾಯಕನಹಳ್ಳಿ,
ತಿಮ ರಾವುತನಹಳ್ಳಿ ಅಪ್ಪಿಕೊಂಡೇನಹಳ್ಳಿ, ಏತೋರ ಹಳ್ಳಿ, ಯಳಚೇಪಲ್ಲಿ, ಬೈರಸಂದ್ರ ಸೇರಿ ಹಲವು ಗಡಿ ಗ್ರಾಮಗಳಿಗೆ ಭೇಟಿ ನೀಡಿ ಆಂಧ್ರಕ್ಕೆ ಜನರು ಹೋಗದಂತೆ ಆಂಧ್ರದಿಂದ
ಗ್ರಾಮಗಳಿಗೆ ಬರ ದಂತೆ ನೋಡಿಕೊಳ್ಳಿ, ಒಂದು ವೇಳೆ ಯಾರಾ ದರೂ ಬಂದರೆ ಕೂಡಲೇ ಪೊಲೀಸ್‌ ಮತ್ತು ಆರೋಗ್ಯ ಇಲಾಖೆಗೆ ಮಾಹಿತಿ ನೀಡಲು ಕೋರಿದರು.

ಮದ್ಯ ಕೊಡಬೇಡಿ: ಮಲ್ಲನಾಯಕನಹಳ್ಳಿ ಮತ್ತು ತಾಯಲೂರು ಗ್ರಾಮದ ಮೂರು ಬಾರ್‌ಗಳಿಗೂ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ ಸ್ಥಳೀಯರಿಗೆ ಮಾತ್ರ ಮದ್ಯ ನೀಡಿ, ಅಲ್ಲದೇ ಯಾವುದೇ ಸ್ಥಳೀಯರು ಆಂಧ್ರದವರಿಗೆ ಮದ್ಯ ಪಡೆದುಕೊಳ್ಳಲು ದಾಖಲೆ ನೀಡಿದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಅಲ್ಲದೇ, ಆಂಧ್ರದಿಂದ ಯಾರೇ ಬಂದರೂ ಮದ್ಯ ನೀಡದೇ ಕೂಡಲೇ ಮಾಹಿತಿ ನೀಡಬೇಕೆಂದು ಬಾರ್‌ ಮಾಲಿಕರಿಗೆ ಸೂಚಿಸಿದರು.

ಟಾಪ್ ನ್ಯೂಸ್

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.