ಕೋವಿಡ್‌ಗೆ ಬಲಿ ಆದ ರೈತರ ಕೈಹಿಡಿದ ಅಪೆಕ್ಸ್


Team Udayavani, Jun 20, 2021, 8:26 PM IST

covid news

ಕೋಲಾರ: ಅವಳಿ ಜಿಲ್ಲೆಗಳಲ್ಲಿ ಕೊರೊನಾಸೋಂಕಿಗೆ ಜೀವ ತೆತ್ತ ರೈತರು ಡಿಸಿಸಿ ಬ್ಯಾಂಕ್‌ಮತ್ತು ಬ್ಯಾಂಕ್‌ ವ್ಯಾಪ್ತಿಯ ಸಹಕಾರ ಸಂಘಗಳಲ್ಲಿ ಬೆಳೆಸಾಲ ಮಾಡಿದ್ದರೆ ಅಂತಹ ಕುಟುಂಬಗಳಿಗೆಪರಿಹಾರ ಒದಗಿಸಲು ಅಪೆಕ್ಸ್‌ ಬ್ಯಾಂಕ್‌ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಅಪೆಕ್ಸ್‌ ಬ್ಯಾಂಕ್‌ ನಿರ್ದೇಶಕರೂ ಹಾಗೂ ಡಿಸಿಸಿಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದ್ದಾರೆ.

ಕೋವಿಡ್‌ನಿಂದ ಮೃತರಾದ ರೈತರ ಮಾಹಿತಿಸಂಗ್ರಹಿಸುವ ಸಂಬಂಧ ಶನಿವಾರಕೋಲಾರ ಡಿಸಿಸಿಬ್ಯಾಂಕ್‌ ಸಭಾಂಗಣದಲ್ಲಿ ಬ್ಯಾಂಕ್‌ ಅಧಿಕಾರಿಗಳಸಭೆ ನಡೆಸಿದ ಅವರು, ಅಪೆಕ್ಸ್‌, ಡಿಸಿಸಿ ಬ್ಯಾಂಕ್‌ಸಹಯೋಗದಲ್ಲಿ ರೈತರಿಗೆ ಈ ನೆರವು ನೀಡಲುನಿರ್ಧರಿಸಿದ್ದು, ಸಾಲ ಪಡೆದು ಮೃತರಾಗಿರುವರೈತರ ಮಾಹಿತಿ ಸಂಗ್ರಹಿಸಿ ಬ್ಯಾಂಕಿನ ಕೇಂದ್ರಕಚೇರಿಗೆ ಜು.1 ರೊಳಗೆ ಸಲ್ಲಿಸಲು ಸೂಚಿಸಿದರು.

ಏಪ್ರಿಲ್‌-2020 ರಿಂದಜೂ.2021ಕ್ಕೆಪರಿಗಣನೆ:ಏಪ್ರಿಲ್‌ 1, 2020 ರಿಂದ ಜೂ.30, 2021ರ ಈಅವಧಿಯಲ್ಲಿ ಬ್ಯಾಂಕಿನಿಂದ ಬೆಳೆಸಾಲ ಪಡೆದಿದ್ದು,ಕೋವಿಡ್‌ನಿಂದ ಮೃತಪಟ್ಟ ರೈತನ ಕುಟುಂಬಕ್ಕೆಪರಿಹಾರ ಒದಗಿಸಲು ನಿರ್ಧಾರ ಕೈಗೊಳ್ಳಲಾಗಿದೆ.ಡಿಸಿಸಿ ಬ್ಯಾಂಕಿನಿಂದ ಅಥವಾ ಬ್ಯಾಂಕಿನ ಆರ್ಥಿಕನೆರವಿನೊಂದಿಗೆ ಸೊಸೈಟಿಗಳಿಂದ ಬ್ಯಾಂಕ್‌ ನಿಗದಿಪಡಿಸಿರುವ ಅವಧಿಯಲ್ಲಿ ಮತ್ತು ಕೃಷಿ ಭೂಮಿಪಹಣಿ ಅಡಮಾನವಿಟ್ಟು ಬೆಳೆಸಾಲ ಪಡೆದಿರುವರೈತ ಕೋವಿಡ್‌ ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿಬಲಿಯಾ ಗಿದ್ದರೆ ಅಂತಹವರಿಗೆ ಮಾತ್ರ ಈಪರಿಹಾರದ ಪ್ರಯೋಜನ ಸಿಗಲಿದೆ ಎಂದು ತಿಳಿಸಿದರು.

ಮೃತ ರೈತ ಕುಟುಂಬದಿಂದ ಪಡಿತರಚೀಟಿ, ಕೋವಿಡ್‌ನಿಂದ ಮೃತಪಟ್ಟ ದೃಢೀಕೃತಪ್ರಮಾಣ ಪತ್ರ, ಆಧಾರ್‌, ಸಾಲ ಪಡೆದಿರುವ ದಾಖಲೆಗಳನ್ನು ಆಯಾ ವ್ಯಾಪ್ತಿಯ ಪ್ಯಾಕ್ಸ್‌ಗಳಕಾರ್ಯದರ್ಶಿಗಳೇ ಸಂಗ್ರಹಿಸಿ ಕೇಂದ್ರ ಕಚೇರಿಗೆ ಜು.1ರೊಳಗೆ ಸಲ್ಲಿಸಲು ಸೂಚಿಸಿದರು.

ಇತರೆ ರೈತರು ಸಾಲ ಪಾವತಿಗೆ ಸೂಚನೆ:ಕೋವಿಡ್‌ನಿಂದಾಗಿ ಸಾಲ ಪಾವತಿ 2 ತಿಂಗಳುಸ್ಥಗಿತಗೊಂಡಿತ್ತು ಎಂದ ಅವರು, ಬಡ್ಡಿರಹಿತ ಸಾಲಪಡೆದಿರುವ ರೈತರು, ಮಹಿಳಾ ಸ್ವಸಹಾಯಸಂಘಗಳ ಪ್ರತಿನಿಧಿಗಳು ಸಾಲದ ಕಂತುಪಾವತಿಸುವ ಮೂಲಕ ಬಡ್ಡಿಯ ಹೊರೆ ಬೀಳದಂತೆಎಚ್ಚರವಹಿಸಿ ಎಂದುಕೋರಿದರು.

ಅಪೆಕ್ಸ್ಬ್ಯಾಂಕಿನ ನಿರ್ಧಾರಕ್ಕೆ ಸ್ವಾಗತ: ಬ್ಯಾಂಕಿನನಿರ್ದೇಶಕರಾದ ನಾಗನಾಳ ಸೋಮಣ್ಣ, ಎಂ.ಎಲ್‌.ಅನಿಲ್‌ಕುಮಾರ್‌, ಕೆ.ವಿ.ದಯಾನಂದ್‌ಮಾತನಾಡಿ, ಕೋವಿಡ್‌ ಸಂಕಷ್ಟದ ಸಂದರ್ಭದಲ್ಲಿಅಫೆಕ್ಸ್‌ ಬ್ಯಾಂಕ್‌ ಉತ್ತಮ ನಿರ್ಧಾರ ಮಾಡಿದೆ,ಮೃತ ರೈತ ಕುಟುಂಬಗಳಿಗೆ ನೆರವಾಗುವ ಮೂಲಕ ಅನ್ನದಾತನ ರಕ್ಷಣೆಗೆ ಮುಂದಾಗಿರುವುದು ಸ್ವಾಗತಾರ್ಹ ಎಂದರು. ಡಿಸಿಸಿ ಬ್ಯಾಂಕ್‌ನ ಎಜಿಎಂಖಲೀಮುಲ್ಲಾ, ಅಧಿಕಾರಿಗಳಾದ ತಿಮ್ಮಯ್ಯ,ಶುಭಾ, ಮಮತಾ, ಬಾಲಾಜಿ ಮತ್ತಿತರರಿದ್ದರು.

ಟಾಪ್ ನ್ಯೂಸ್

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.