ಕೋವಿಡ್ ಲಸಿಕೆ ಕಾರ್ಯಕ್ರಮ ಹೆಚ್ಚಾಗಲಿ: ಸೆಲ್ವಮಣಿ
Team Udayavani, Apr 24, 2021, 5:20 PM IST
ಕೆಜಿಎಫ್: ನಗರದಲ್ಲಿ ಲಸಿಕೆ ಹಾಕುವ ಕಾರ್ಯಕ್ರಮ ಅತ್ಯಂತ ಕಡಿಮೆ ಇದೆ. ಜನರನ್ನು ಒಂದುಗೂಡಿಸಿ, ಲಸಿಕೆಹಾಕುವ ಕಾರ್ಯಕ್ರಮವನ್ನು ಹೆಚ್ಚುಮಾಡುವ ಕೆಲಸ ಆಗಬೇಕಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಸೆಲ್ವಮಣಿ ಹೇಳಿದರು.
ನಗರಸಭೆಯಲ್ಲಿ ನಡೆದ ನಗರಸಭೆ ಸದಸ್ಯರ ಸಭೆಯಲ್ಲಿ ಮಾತನಾಡಿ, ನಗರದಲ್ಲಿ ಸುಮಾರು ಒಂದೂವರೆ ಲಕ್ಷ ಜನಸಂಖ್ಯೆ ಇದೆ. ವಾರ್ಡ್ಗಳಲ್ಲಿರುವ ಜನರನ್ನು ಹೇಗೆ ಕೇಂದ್ರಕ್ಕೆ ಕರೆತಂದು, ಲಸಿಕೆ ಹಾಕುತ್ತಾರೆ ಎಂಬುದನ್ನು ಅರಿಯಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೂಡ ಲಸಿಕೆ ಹಾಕಲಾಗುತ್ತಿದೆ ಎಂದರು.
ಮುಳಬಾಗಲು ತಾಲ್ಲೂಕಿನಲ್ಲಿ ತುಂಬಾ ಚೆನ್ನಾಗಿ ಕೆಲಸ ಮಾಡಿದ್ದಾರೆ.60 ವರ್ಷ ಮೇಲ್ಪಟ್ಟವರಿಗೆ ಲಸಿಕೆಹಾಕುತ್ತಿದ್ದಾರೆ. ಐಸಿಯುನಲ್ಲಿ ಇರುವವರು ಎರಡು ಡೋಸ್ ತೆಗೆದುಕೊಂಡವರು ಇಲ್ಲ ಎಂದುವೈದ್ಯರು ಹೇಳುತ್ತಾರೆ. ಈಗ ನಗರಸಭೆ ಆಯುಕ್ತೆ ಯಾವ ರೀತಿ ಕ್ರಮ ಕೈಗೊಳ್ಳುತ್ತೀರಿ. ಬೇಕಾದ ಸಿದ್ಧತೆ ಹೇಗೆ ರೂಪಿಸಿದ್ದೀರಿ ಎಂದು ಪ್ರಶ್ನಿಸಿದರು.
35 ವಾರ್ಡ್ಗಳಲ್ಲಿ ಲಸಿಕೆ ಹಾಕುವಕೆಲಸ ಮಾಡಲಿಕ್ಕೆ ಆಗುವುದಿಲ್ಲ. ನಮ್ಮಲ್ಲಿಅಷ್ಟೊಂದು ಸಂಖ್ಯೆಯ ಸಿಬ್ಬಂದಿ ಇಲ್ಲ. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ನಗರಸಭೆಪೌರಕಾರ್ಮಿಕರನ್ನು ಉಪಯೋಗಿಸಿ ಕೊಳ್ಳಬೇಕು. ನಗರಸಭೆ ಸದಸ್ಯರು ಸಹಕಾರ ನೀಡಬೇಕು ಎಂದರು.
60 ವರ್ಷ ಮೇಲ್ಪಟ್ಟು ಜನಸಂಖ್ಯೆಇರುವ ಪ್ರದೇಶಗಳನ್ನು ಗುರುತಿಸಿ. ಒಂದು ವಾರ್ಡ್ಗೆ ಎರಡು ಅಥವಾಮೂರು ದಿನ ತೆಗೆದುಕೊಳ್ಳಬಹುದು. ಐದು ತಂಡ ಮಾಡಿದರೆ, ಒಂದೂವರೆ ತಿಂಗಳಲ್ಲಿ ಎಲ್ಲಾ ವಾರ್ಡ್ಗಳಲ್ಲಿ ಲಸಿಕೆ ಮಾಡಬಹುದು. ಸೋಮವಾರದಿಂದ ಆರಂಭಿಸಿ ಎಂದು ತಿಳಿಸಿದರು. ಡಿವೈಎಸ್ಪಿ ಬಿ.ಕೆ.ಉಮೇಶ್, ನಗರಸಭೆ ಅಧ್ಯಕ್ಷ ವಳ್ಳಲ್ ಮುನಿಸ್ವಾಮಿ, ತಹಶೀಲ್ದಾರ್ ಕೆ.ಎನ್.ಸುಜಾತ, ಆಯುಕ್ತೆ ಸರ್ವರ್ ಮರ್ಚೆಂಟ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ